ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಎ.ಎಂ.ಸಿಂಘ್ವಿ, ಶ್ಯಾಮ್ ದಿವಾನ್ ಮತ್ತು ಕಲ್ಯಾಣ್ ಬಂಡೋಪಾಧ್ಯಾಯ ಅವರ ಮವಿ ಆಲಿಸಿದ ನಂತರ ಪೀಠವು, ‘ಇದು ಹೆಚ್ಚಿನ ಸಂಖ್ಯೆಯ ಸಹ ಶಿಕ್ಷಕರ ಆಯ್ಕೆ ಮತ್ತು ನೇಮಕಾತಿಗೆ ಸಂಬಂಧಿಸಿದ ವಿಷಯವೆಂದು ನಂಬಿದ್ದೇವೆ. ಈ ವಿವಾದವನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು. ಆದ್ದರಿಂದ, ಮೇಲ್ಮನವಿಯನ್ನು ತ್ವರಿತ ವಿಚಾರಣೆ ನಡೆಸುವಂತೆ ಹೈಕೋರ್ಟ್ಗೆ ವಿನಂತಿಸುತ್ತೇವೆ’ ಎಂದು ಹೇಳಿತು.