<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಮಾಸಿಕ ₹1000 ಆರ್ಥಿಕ ನೆರವು ನೀಡುವ 'ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ'ಗೆ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಗುರುವಾರ) ಚಾಲನೆ ನೀಡಿದ್ದಾರೆ. </p><p>ದೆಹಲಿ ವಿಧಾನಸಭೆ ಚುನಾವಣೆಯ ಬಳಿಕ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಆರ್ಥಿಕ ನೆರವಿನ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. </p><p><em>ಆದಾಗ್ಯೂ,</em> ದೆಹಲಿಯಲ್ಲಿ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಿ ಮಾದರಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮತದಾನದ ಬಳಿಕವಷ್ಟೇ ಫಲಾನುಭುವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾಸನಭೆಗೆ 2025ರ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈಗ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ಆಡಳಿರೂಢ ಎಎಪಿ ಸತತ ಮೂರನೇ ಬಾರಿ ಅಧಿಕಾರಕ್ಕೇರುವ ಗುರಿ ಹೊಂದಿದೆ. </p><p>ಈ ಯೋಜನೆಗೆ ಮುಖ್ಯಮಂತ್ರಿ ಅತಿಶಿ ಅಧ್ಯಕ್ಷತೆಯಲ್ಲಿ ದೆಹಲಿ ಸಂಪುಟ ಸಭೆ ಅನುಮೋದನೆ ನೀಡಿದ್ದು, ಶುಕ್ರವಾರದಿಂದಲೇ ಮಹಿಳೆಯರು ನೋಂದಣಿಯನ್ನು ಪ್ರಾರಂಭಿಸಬಹುದು ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. </p><p>2024-25ರ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು. ಇದಕ್ಕಾಗಿ ಬಜೆಟ್ನಲ್ಲಿ ₹2,000 ಕೋಟಿ ಹಂಚಿಕೆ ಮಾಡಲಾಗಿತ್ತು. </p><p>ಯೋಜನೆ ಕುರಿತು ಬಿಜೆಪಿ ಟೀಕೆಯ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, 'ಮಹಿಳೆಯರನ್ನು ಸಬಲೀಕರಣಗೊಳಿಸಲು, ಸಮಾಜವನ್ನು ಬಲಪಡಿಸಲು ನೆರವಾಗಲಿದೆ. ಹಣ ಎಲ್ಲಿಂದ ಬರಲಿದೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಆದರೆ ನಾವು ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದೆವು. ಅದನ್ನು ಕಾರ್ತಗತಗೊಳಿಸಿದ್ದೇವೆ' ಎಂದು ತಿಳಿಸಿದ್ದಾರೆ. </p><p>'ನಾನೊಬ್ಬ ಜಾದೂಗಾರ, ಅಕೌಂಟ್ಸ್ನ ಜಾದೂಗಾರ' ಎಂದು ಬಿಜೆಪಿಗೆ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. </p><p>ದೆಹಲಿಯಲ್ಲಿ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೇರುವ ವಿಶ್ವಾಸವನ್ನು ಕೇಜ್ರಿವಾಲ್ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಎಲ್ಲ ಮಹಿಳೆಯರು ಒಗ್ಗಟ್ಟಾಗಿ ಕೆಲಸ ಮಾಡಿದರೆ 60ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. </p>.ಮತದಾರರ ಪಟ್ಟಿಯಿಂದ ಸಾಮೂಹಿಕವಾಗಿ ಹೆಸರು ಅಳಿಸಲು ಬಿಜೆಪಿ ಸಂಚು: ಕೇಜ್ರಿವಾಲ್.ಕಾನೂನು ಸುವ್ಯವಸ್ಥೆ ಬಗ್ಗೆ ರಾಜಕೀಯ ಬೇಡ: ಅರವಿಂದ ಕೇಜ್ರಿವಾಲ್ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಮಾಸಿಕ ₹1000 ಆರ್ಥಿಕ ನೆರವು ನೀಡುವ 'ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ'ಗೆ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಗುರುವಾರ) ಚಾಲನೆ ನೀಡಿದ್ದಾರೆ. </p><p>ದೆಹಲಿ ವಿಧಾನಸಭೆ ಚುನಾವಣೆಯ ಬಳಿಕ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಆರ್ಥಿಕ ನೆರವಿನ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. </p><p><em>ಆದಾಗ್ಯೂ,</em> ದೆಹಲಿಯಲ್ಲಿ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಿ ಮಾದರಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮತದಾನದ ಬಳಿಕವಷ್ಟೇ ಫಲಾನುಭುವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾಸನಭೆಗೆ 2025ರ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈಗ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ಆಡಳಿರೂಢ ಎಎಪಿ ಸತತ ಮೂರನೇ ಬಾರಿ ಅಧಿಕಾರಕ್ಕೇರುವ ಗುರಿ ಹೊಂದಿದೆ. </p><p>ಈ ಯೋಜನೆಗೆ ಮುಖ್ಯಮಂತ್ರಿ ಅತಿಶಿ ಅಧ್ಯಕ್ಷತೆಯಲ್ಲಿ ದೆಹಲಿ ಸಂಪುಟ ಸಭೆ ಅನುಮೋದನೆ ನೀಡಿದ್ದು, ಶುಕ್ರವಾರದಿಂದಲೇ ಮಹಿಳೆಯರು ನೋಂದಣಿಯನ್ನು ಪ್ರಾರಂಭಿಸಬಹುದು ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. </p><p>2024-25ರ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು. ಇದಕ್ಕಾಗಿ ಬಜೆಟ್ನಲ್ಲಿ ₹2,000 ಕೋಟಿ ಹಂಚಿಕೆ ಮಾಡಲಾಗಿತ್ತು. </p><p>ಯೋಜನೆ ಕುರಿತು ಬಿಜೆಪಿ ಟೀಕೆಯ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, 'ಮಹಿಳೆಯರನ್ನು ಸಬಲೀಕರಣಗೊಳಿಸಲು, ಸಮಾಜವನ್ನು ಬಲಪಡಿಸಲು ನೆರವಾಗಲಿದೆ. ಹಣ ಎಲ್ಲಿಂದ ಬರಲಿದೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಆದರೆ ನಾವು ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದೆವು. ಅದನ್ನು ಕಾರ್ತಗತಗೊಳಿಸಿದ್ದೇವೆ' ಎಂದು ತಿಳಿಸಿದ್ದಾರೆ. </p><p>'ನಾನೊಬ್ಬ ಜಾದೂಗಾರ, ಅಕೌಂಟ್ಸ್ನ ಜಾದೂಗಾರ' ಎಂದು ಬಿಜೆಪಿಗೆ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. </p><p>ದೆಹಲಿಯಲ್ಲಿ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೇರುವ ವಿಶ್ವಾಸವನ್ನು ಕೇಜ್ರಿವಾಲ್ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಎಲ್ಲ ಮಹಿಳೆಯರು ಒಗ್ಗಟ್ಟಾಗಿ ಕೆಲಸ ಮಾಡಿದರೆ 60ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. </p>.ಮತದಾರರ ಪಟ್ಟಿಯಿಂದ ಸಾಮೂಹಿಕವಾಗಿ ಹೆಸರು ಅಳಿಸಲು ಬಿಜೆಪಿ ಸಂಚು: ಕೇಜ್ರಿವಾಲ್.ಕಾನೂನು ಸುವ್ಯವಸ್ಥೆ ಬಗ್ಗೆ ರಾಜಕೀಯ ಬೇಡ: ಅರವಿಂದ ಕೇಜ್ರಿವಾಲ್ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>