<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನಲ್ಲಿ ಪ್ರದೇಶಗಳಲ್ಲಿ ಶನಿವಾರ ಅತ್ಯಂತ ದೀರ್ಘ ಅವಧಿಯವರೆಗೆ ದಟ್ಟ ಮಂಜು ಕವಿದಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ ಒಂಬತ್ತು ತಾಸು ಶೂನ್ಯ ಗೋಚರತೆ ಉಂಟಾಯಿತು.</p>.<p>ದೆಹಲಿಯಲ್ಲಿ ಸತತ ಎರಡನೇ ದಿನವೂ ಕವಿದ ದಟ್ಟ ಮಂಜಿನ ಕಾರಣಕ್ಕೆ 19 ವಿಮಾನಗಳ ಮಾರ್ಗವನ್ನು ಬದಲಿಸಲಾಯಿತು. 400ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ. ಅಲ್ಲದೆ 81 ರೈಲುಗಳ ಸಂಚಾರದಲ್ಲೂ ವಿಳಂಬ ಆಗಿದೆ.</p>.<p>‘ದೆಹಲಿ ವಿಮಾನ ನಿಲ್ದಾಣದಲ್ಲಿ ಶೂನ್ಯ ಗೋಚರತೆಯು ರಾತ್ರಿ 11.30ರಿಂದ ಬೆಳಿಗ್ಗೆ 8.30ರವರೆಗೆ ಇತ್ತು. ಇದು ಈ ಋತುವಿನ ಅತಿ ದೀರ್ಘಾವಧಿಯ ಶೂನ್ಯ ಗೋಚರತೆ. ಸಫ್ದರ್ಜಂಗ್ನಲ್ಲಿ ಎಂಟು ತಾಸು ಶೂನ್ಯ ಗೋಚರತೆ ಇತ್ತು’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ಅಮೃತಸರ, ಆಗ್ರಾ, ಹಿಂಡನ್, ಚಂಡೀಗಢ ಮತ್ತು ಗ್ವಾಲಿಯರ್, ಪಟ್ನಾ ಮತ್ತು ಶ್ರೀನಗರ ವಿಮಾನ ನಿಲ್ದಾಣಗಳಲ್ಲಿ ಶೂನ್ಯ ಗೋಚರತೆ ಇತ್ತು. ಜಮ್ಮು, ಕಾಶ್ಮೀರದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 0 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿದೆ.</p>.<p>ವಾಯವ್ಯ ಭಾರತ ಮತ್ತು ಗಂಗಾ ಬಯಲು ಪ್ರದೇಶದಲ್ಲಿ ಭಾನುವಾರ ಕೂಡ ಇದೇ ರೀತಿಯ ಹಮಾಮಾನ ಇರಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.</p>.<p>ಮುಂದಿನ ಎರಡು ದಿನಗಳ ಕಾಲ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆ/ಹಿಮ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನವರಿ 10– 12ರ ನಡುವೆ ಉಂಟಾಗಲಿರುವ ವಾತಾವರಣದ ಏರುಪೇರಿನಿಂದ ವಾಯವ್ಯ ಭಾರತದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನಲ್ಲಿ ಪ್ರದೇಶಗಳಲ್ಲಿ ಶನಿವಾರ ಅತ್ಯಂತ ದೀರ್ಘ ಅವಧಿಯವರೆಗೆ ದಟ್ಟ ಮಂಜು ಕವಿದಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ ಒಂಬತ್ತು ತಾಸು ಶೂನ್ಯ ಗೋಚರತೆ ಉಂಟಾಯಿತು.</p>.<p>ದೆಹಲಿಯಲ್ಲಿ ಸತತ ಎರಡನೇ ದಿನವೂ ಕವಿದ ದಟ್ಟ ಮಂಜಿನ ಕಾರಣಕ್ಕೆ 19 ವಿಮಾನಗಳ ಮಾರ್ಗವನ್ನು ಬದಲಿಸಲಾಯಿತು. 400ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ. ಅಲ್ಲದೆ 81 ರೈಲುಗಳ ಸಂಚಾರದಲ್ಲೂ ವಿಳಂಬ ಆಗಿದೆ.</p>.<p>‘ದೆಹಲಿ ವಿಮಾನ ನಿಲ್ದಾಣದಲ್ಲಿ ಶೂನ್ಯ ಗೋಚರತೆಯು ರಾತ್ರಿ 11.30ರಿಂದ ಬೆಳಿಗ್ಗೆ 8.30ರವರೆಗೆ ಇತ್ತು. ಇದು ಈ ಋತುವಿನ ಅತಿ ದೀರ್ಘಾವಧಿಯ ಶೂನ್ಯ ಗೋಚರತೆ. ಸಫ್ದರ್ಜಂಗ್ನಲ್ಲಿ ಎಂಟು ತಾಸು ಶೂನ್ಯ ಗೋಚರತೆ ಇತ್ತು’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ಅಮೃತಸರ, ಆಗ್ರಾ, ಹಿಂಡನ್, ಚಂಡೀಗಢ ಮತ್ತು ಗ್ವಾಲಿಯರ್, ಪಟ್ನಾ ಮತ್ತು ಶ್ರೀನಗರ ವಿಮಾನ ನಿಲ್ದಾಣಗಳಲ್ಲಿ ಶೂನ್ಯ ಗೋಚರತೆ ಇತ್ತು. ಜಮ್ಮು, ಕಾಶ್ಮೀರದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 0 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿದೆ.</p>.<p>ವಾಯವ್ಯ ಭಾರತ ಮತ್ತು ಗಂಗಾ ಬಯಲು ಪ್ರದೇಶದಲ್ಲಿ ಭಾನುವಾರ ಕೂಡ ಇದೇ ರೀತಿಯ ಹಮಾಮಾನ ಇರಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.</p>.<p>ಮುಂದಿನ ಎರಡು ದಿನಗಳ ಕಾಲ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆ/ಹಿಮ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನವರಿ 10– 12ರ ನಡುವೆ ಉಂಟಾಗಲಿರುವ ವಾತಾವರಣದ ಏರುಪೇರಿನಿಂದ ವಾಯವ್ಯ ಭಾರತದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>