<p><strong>ಕಾನ್ಕೇರ್:</strong> ಭದ್ರತಾ ಪಡೆಗಳ ಮೇಲೆ ದಾಳಿ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸೇರಿದಂತೆ ಒಟ್ಟು 7 ಮಂದಿ ನಕ್ಸಲರು ಛತ್ತೀಸಗಢದ ಕಾನ್ಕೇರ್ ಜಿಲ್ಲೆಯಲ್ಲಿ ಶುಕ್ರವಾರ ಶರಣಾಗಿದ್ದಾರೆ. ಅವರ ತಲೆಗೆ ಒಟ್ಟು ₹32 ಲಕ್ಷದ ಬಹುಮಾನ ಇತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಛತ್ತೀಸಗಢದ ನಾರಾಯಣಪುರದಲ್ಲಿ 29 ನಕ್ಸಲರು ಶರಣು .<p>‘ಟೊಳ್ಳು ಮತ್ತು ಅಮಾನವೀಯ ಮಾವೋ ಸಿದ್ಧಾಂತದಿಂದ ಹಾಗೂ ನಕ್ಸಲ್ನ ಹಿರಿಯ ನಾಯಕರಿಂದ ಬುಡಕಟ್ಟು ಜನರ ಮೇಲಿನ ಶೋಷಣೆಗೆ ಬೇಸತ್ತು ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ’ ಎಂದು ಕಾನ್ಕೇರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಲ್ಯಾಣ್ ಇಲೆಸೆಲ ತಿಳಿಸಿದ್ದಾರೆ.</p><p>ಶರಣಾದ ಮಮಯಾ ಅಲಿಯಾಸ್ ಶಾಂತ ಅಲಿಯಾಸ್ ವಸಂತಾ ಬಟ್ಟುಲೈ (60), ದಿನೇಶ್ ಮಟ್ಟಾಮಿ (20) ಹಾಗೂ ಅಯ್ತು ರಾಮ್ ಪೊಟಯ್ (27)ರ ಮೇಲೆ ತಲಾ ₹ 8 ಲಕ್ಷ ಬಹುಮಾನ ಇತ್ತು ಎಂದು ಅವರು ತಿಳಿಸಿದ್ದಾರೆ.</p>.ಛತ್ತೀಸಗಢ: ಗ್ರಾಮಸ್ಥನನ್ನು ಕೊಂದ ನಕ್ಸಲರು.<p>ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿಯಾಗಿರುವ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು. ಮಾವೋವಾದಿಗಳ ಉತ್ತರ ಬಸ್ತಾರ್ ವಿಭಾಗದಲ್ಲಿ ಕಾನೂನುಬಾಹಿರ ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘಟನೆ’ (ಕೆಎಎಂಎಸ್) ಮುಖ್ಯಸ್ಥರಾಗಿದ್ದರು ಎಂದು ಅವರು ಹೇಳಿದ್ದಾರೆ.</p><p>ಅವರು 1996 ಮತ್ತು 2024 ರ ನಡುವೆ ಒಟ್ಟು 26 ನಕ್ಸಲ್ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದರು. 2015ರಲ್ಲಿ ಕಾನ್ಕೇರ್ ಜಿಲ್ಲೆಯ ಕೊಯಲಿಬೀಡಾ ಪ್ರದೇಶದಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿ ಸಾವಿಗೀಡಾಗಿದ್ದರು.</p>.ಛತ್ತೀಸಗಢ | ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಯೋಧರಿಗೆ ಗಾಯ.<p>ಶರಣಾದ ಮತ್ತೊಬ್ಬ ಕೇಡರ್ ಜಮುನಾ ಅಲಿಯಾಸ್ ನೀರ ನೇತಮ್ (50) ಪರ್ತಾಪುರ ಪ್ರದೇಶ ಸಮಿತಿಯ ಸದಸ್ಯರಾಗಿ ಸಕ್ರಿಯರಾಗಿದ್ದರು.</p><p>ಇಟ್ವಾರಿನ್ ಪಡ್ಡಾ (25), ಸಂಜಯ್ ನರೆಟಿ (23) ಮತ್ತು ಸಗ್ನು ರಾಮ್ ಅಂಚಲಾ (24) ಶರಣಾದ ಇತರರು. ಅವರ ತಲೆಗೆ ತಲಾ ₹ 1 ಲಕ್ಷ ಬಹುಮಾನ ಘೋಷಣೆಯಾಗಿತ್ತು.</p><p>ಶರಣಾದ ಎಲ್ಲ ನಕ್ಸಲರಿಗೆ ತಲಾ ₹ 25 ಸಾವಿರ ನೆರವು ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಮತ್ತಷ್ಟು ನೆರವು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಕಳೆದ ವರ್ಷ, ಕಾನ್ಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.</p>.ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟ: ಸಿಆರ್ಪಿಎಫ್ ಯೋಧ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಕೇರ್:</strong> ಭದ್ರತಾ ಪಡೆಗಳ ಮೇಲೆ ದಾಳಿ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸೇರಿದಂತೆ ಒಟ್ಟು 7 ಮಂದಿ ನಕ್ಸಲರು ಛತ್ತೀಸಗಢದ ಕಾನ್ಕೇರ್ ಜಿಲ್ಲೆಯಲ್ಲಿ ಶುಕ್ರವಾರ ಶರಣಾಗಿದ್ದಾರೆ. ಅವರ ತಲೆಗೆ ಒಟ್ಟು ₹32 ಲಕ್ಷದ ಬಹುಮಾನ ಇತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಛತ್ತೀಸಗಢದ ನಾರಾಯಣಪುರದಲ್ಲಿ 29 ನಕ್ಸಲರು ಶರಣು .<p>‘ಟೊಳ್ಳು ಮತ್ತು ಅಮಾನವೀಯ ಮಾವೋ ಸಿದ್ಧಾಂತದಿಂದ ಹಾಗೂ ನಕ್ಸಲ್ನ ಹಿರಿಯ ನಾಯಕರಿಂದ ಬುಡಕಟ್ಟು ಜನರ ಮೇಲಿನ ಶೋಷಣೆಗೆ ಬೇಸತ್ತು ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ’ ಎಂದು ಕಾನ್ಕೇರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಲ್ಯಾಣ್ ಇಲೆಸೆಲ ತಿಳಿಸಿದ್ದಾರೆ.</p><p>ಶರಣಾದ ಮಮಯಾ ಅಲಿಯಾಸ್ ಶಾಂತ ಅಲಿಯಾಸ್ ವಸಂತಾ ಬಟ್ಟುಲೈ (60), ದಿನೇಶ್ ಮಟ್ಟಾಮಿ (20) ಹಾಗೂ ಅಯ್ತು ರಾಮ್ ಪೊಟಯ್ (27)ರ ಮೇಲೆ ತಲಾ ₹ 8 ಲಕ್ಷ ಬಹುಮಾನ ಇತ್ತು ಎಂದು ಅವರು ತಿಳಿಸಿದ್ದಾರೆ.</p>.ಛತ್ತೀಸಗಢ: ಗ್ರಾಮಸ್ಥನನ್ನು ಕೊಂದ ನಕ್ಸಲರು.<p>ನೆರೆಯ ತೆಲಂಗಾಣದ ಕರೀಂನಗರ ಜಿಲ್ಲೆಯ ನಿವಾಸಿಯಾಗಿರುವ ಮಮತಾ ಅವರು ವಿಭಾಗೀಯ ಸಮಿತಿ ಸದಸ್ಯರಾಗಿ ಸಕ್ರಿಯರಾಗಿದ್ದರು. ಮಾವೋವಾದಿಗಳ ಉತ್ತರ ಬಸ್ತಾರ್ ವಿಭಾಗದಲ್ಲಿ ಕಾನೂನುಬಾಹಿರ ಸಂಘಟನೆಯ ವಿಭಾಗವಾದ ‘ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘಟನೆ’ (ಕೆಎಎಂಎಸ್) ಮುಖ್ಯಸ್ಥರಾಗಿದ್ದರು ಎಂದು ಅವರು ಹೇಳಿದ್ದಾರೆ.</p><p>ಅವರು 1996 ಮತ್ತು 2024 ರ ನಡುವೆ ಒಟ್ಟು 26 ನಕ್ಸಲ್ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದರು. 2015ರಲ್ಲಿ ಕಾನ್ಕೇರ್ ಜಿಲ್ಲೆಯ ಕೊಯಲಿಬೀಡಾ ಪ್ರದೇಶದಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿ ಸಾವಿಗೀಡಾಗಿದ್ದರು.</p>.ಛತ್ತೀಸಗಢ | ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟ: ಇಬ್ಬರು ಯೋಧರಿಗೆ ಗಾಯ.<p>ಶರಣಾದ ಮತ್ತೊಬ್ಬ ಕೇಡರ್ ಜಮುನಾ ಅಲಿಯಾಸ್ ನೀರ ನೇತಮ್ (50) ಪರ್ತಾಪುರ ಪ್ರದೇಶ ಸಮಿತಿಯ ಸದಸ್ಯರಾಗಿ ಸಕ್ರಿಯರಾಗಿದ್ದರು.</p><p>ಇಟ್ವಾರಿನ್ ಪಡ್ಡಾ (25), ಸಂಜಯ್ ನರೆಟಿ (23) ಮತ್ತು ಸಗ್ನು ರಾಮ್ ಅಂಚಲಾ (24) ಶರಣಾದ ಇತರರು. ಅವರ ತಲೆಗೆ ತಲಾ ₹ 1 ಲಕ್ಷ ಬಹುಮಾನ ಘೋಷಣೆಯಾಗಿತ್ತು.</p><p>ಶರಣಾದ ಎಲ್ಲ ನಕ್ಸಲರಿಗೆ ತಲಾ ₹ 25 ಸಾವಿರ ನೆರವು ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಮತ್ತಷ್ಟು ನೆರವು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಕಳೆದ ವರ್ಷ, ಕಾನ್ಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.</p>.ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟ: ಸಿಆರ್ಪಿಎಫ್ ಯೋಧ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>