<p><strong>ನಾಗ್ಪುರ:</strong> ಮುಂಬರುವ ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿಯಾಗಿ ಸ್ಫರ್ಧಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.</p><p>ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂಡಿಯಾ ಬಣ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದ್ದಾರೆ.</p>.ವಾಜಪೇಯಿ ಭಾರತ ರಾಜಕಾರಣದ ‘ಎರಡನೇ ನೆಹರೂ’: ಶಿವಸೇನೆ ನಾಯಕ ಸಂಜಯ್ ರಾವುತ್ .<p>‘ಮೈತ್ರಿ ಮಾಡಿಕೊಂಡರೆ, ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಇದರಿಂದ ಪಕ್ಷದ ಬೆಳಗವಣಿಗೆಗೆ ತೊಡಕುಂಟಾಗಲಿದೆ. ನಾವು ಮುಂಬೈ, ಠಾಣೆ, ನಾಗ್ಪುರ ಸೇರಿ ಇತರ ಮುನ್ಸಿಪಲ್ ಕಾರ್ಪೊರೇಷನ್ಗಳು, ಜಿಲ್ಲಾ ಪಂಚಾಯತ್ ಹಾಗೂ ಇತರ ಪಂಚಾಯತ್ಗಳಲ್ಲಿ ನಮ್ಮ ಬಲದಿಂದಲೇ ಸ್ಪರ್ಧೆ ಮಾಡುತ್ತೇವೆ’ ಎಂದು ರಾವುತ್ ಹೇಳಿದ್ದಾರೆ.</p><p>ಏಕಾಂಗಿಯಾಗಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.EVM ಅಕ್ರಮ ಆರೋಪ: ಮತಪತ್ರಗಳ ಮೂಲಕ ಮರುಚುನಾವಣೆಗೆ ಸಂಜಯ್ ರಾವುತ್ ಆಗ್ರಹ.<p>ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೇ ಸೋಲಿಗೆ ಕಾರಣ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರಿಗೆ ತಿರುಗೇಟು ನೀಡಿದ ರಾವುತ್, ಒಮ್ಮತ ಮತ್ತು ಹೊಂದಾಣಿಕೆಯಲ್ಲಿ ನಂಬಿಕೆ ಇಲ್ಲದವರಿಗೆ ಮೈತ್ರಿ ಮಾಡಿಕೊಳ್ಳುವ ಹಕ್ಕಿಲ್ಲ ಎಂದು ಹೇಳಿದ್ದಾರೆ.</p><p>ಲೋಕಸಭೆ ಚುನಾವಣೆಯ ನಂತರ ಇಂಡಿಯಾ ಮೈತ್ರಿಕೂಟ ಒಂದೇ ಒಂದು ಸಭೆಯನ್ನೂ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.</p><p>‘ನಮಗೆ ಇಂಡಿಯಾ ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಿಸಲು ಸಾಧ್ಯವಾಗಲಿಲ್ಲ. ಅದು ಒಳ್ಳೆಯದಲ್ಲ. ಮೈತ್ರಿಕೂಟದ ದೊಡ್ಡ ಪಕ್ಷವಾಗಿ, ಸಭೆಯನ್ನು ಕರೆಯುವುದು ಕಾಂಗ್ರೆಸ್ನ ಜವಾಬ್ದಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.</p> .ಮಹಾರಾಷ್ಟ್ರ ಫಲಿತಾಂಶದ ಬಗ್ಗೆ ಕೊಂಕು ಮಾತು: BJPಯಿಂದ ಸಂಜಯ್ ರಾವುತ್ ತರಾಟೆಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಮುಂಬರುವ ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿಯಾಗಿ ಸ್ಫರ್ಧಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.</p><p>ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂಡಿಯಾ ಬಣ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದ್ದಾರೆ.</p>.ವಾಜಪೇಯಿ ಭಾರತ ರಾಜಕಾರಣದ ‘ಎರಡನೇ ನೆಹರೂ’: ಶಿವಸೇನೆ ನಾಯಕ ಸಂಜಯ್ ರಾವುತ್ .<p>‘ಮೈತ್ರಿ ಮಾಡಿಕೊಂಡರೆ, ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಇದರಿಂದ ಪಕ್ಷದ ಬೆಳಗವಣಿಗೆಗೆ ತೊಡಕುಂಟಾಗಲಿದೆ. ನಾವು ಮುಂಬೈ, ಠಾಣೆ, ನಾಗ್ಪುರ ಸೇರಿ ಇತರ ಮುನ್ಸಿಪಲ್ ಕಾರ್ಪೊರೇಷನ್ಗಳು, ಜಿಲ್ಲಾ ಪಂಚಾಯತ್ ಹಾಗೂ ಇತರ ಪಂಚಾಯತ್ಗಳಲ್ಲಿ ನಮ್ಮ ಬಲದಿಂದಲೇ ಸ್ಪರ್ಧೆ ಮಾಡುತ್ತೇವೆ’ ಎಂದು ರಾವುತ್ ಹೇಳಿದ್ದಾರೆ.</p><p>ಏಕಾಂಗಿಯಾಗಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p>.EVM ಅಕ್ರಮ ಆರೋಪ: ಮತಪತ್ರಗಳ ಮೂಲಕ ಮರುಚುನಾವಣೆಗೆ ಸಂಜಯ್ ರಾವುತ್ ಆಗ್ರಹ.<p>ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೇ ಸೋಲಿಗೆ ಕಾರಣ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರಿಗೆ ತಿರುಗೇಟು ನೀಡಿದ ರಾವುತ್, ಒಮ್ಮತ ಮತ್ತು ಹೊಂದಾಣಿಕೆಯಲ್ಲಿ ನಂಬಿಕೆ ಇಲ್ಲದವರಿಗೆ ಮೈತ್ರಿ ಮಾಡಿಕೊಳ್ಳುವ ಹಕ್ಕಿಲ್ಲ ಎಂದು ಹೇಳಿದ್ದಾರೆ.</p><p>ಲೋಕಸಭೆ ಚುನಾವಣೆಯ ನಂತರ ಇಂಡಿಯಾ ಮೈತ್ರಿಕೂಟ ಒಂದೇ ಒಂದು ಸಭೆಯನ್ನೂ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.</p><p>‘ನಮಗೆ ಇಂಡಿಯಾ ಮೈತ್ರಿಕೂಟಕ್ಕೆ ಸಂಚಾಲಕರನ್ನು ನೇಮಿಸಲು ಸಾಧ್ಯವಾಗಲಿಲ್ಲ. ಅದು ಒಳ್ಳೆಯದಲ್ಲ. ಮೈತ್ರಿಕೂಟದ ದೊಡ್ಡ ಪಕ್ಷವಾಗಿ, ಸಭೆಯನ್ನು ಕರೆಯುವುದು ಕಾಂಗ್ರೆಸ್ನ ಜವಾಬ್ದಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.</p> .ಮಹಾರಾಷ್ಟ್ರ ಫಲಿತಾಂಶದ ಬಗ್ಗೆ ಕೊಂಕು ಮಾತು: BJPಯಿಂದ ಸಂಜಯ್ ರಾವುತ್ ತರಾಟೆಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>