<p><strong>ನವದೆಹಲಿ: </strong>ಕೇರಳ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಎಸ್.ವಿ.ಎನ್. ಭಟ್ಟಿ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸಲ್ಲಿಸಿರುವ ಹೊಸ ಅರ್ಜಿಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ (ಇ.ಸಿ) ನೋಟಿಸ್ ಜಾರಿ ಮಾಡಿದೆ.</p><p>ಕೇರಳದಲ್ಲಿ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿರುವ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು, ಈ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿದೆ’ ಎಂದು ಪೀಠಕ್ಕೆ ತಿಳಿಸಿದರು.</p><p>ಕೇರಳದ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿರುವ ಅರ್ಜಿಗಳನ್ನು ನವೆಂಬರ್ 26ರಂದು ವಿಚಾರಣೆ ನಡೆಸಲು ಪಟ್ಟಿ ಮಾಡಲಾಗುವುದು ಮತ್ತು ಇತರ ರಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ವಿಚಾರಣೆಗೆ ತೆಗೆದುಕೊಳ್ಳ ಲಾಗುವುದು ಎಂದು ಪೀಠವು ಹೇಳಿತು.</p><p>ಖಾಸಗಿ ವ್ಯಕ್ತಿಗಳ ಬದಲು ರಾಜಕೀಯ ಪಕ್ಷಗಳು ಈಗ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಲು ಮುಂದಾಗಿರು ವುದು ಒಳ್ಳೆಯ ಬೆಳವಣಿಗೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.</p><p>ಎಸ್ಐಆರ್, ಅದರಲ್ಲೂ ಮುಖ್ಯ ವಾಗಿ ಅದನ್ನು ಕಾರ್ಯಗತಗೊಳಿಸುವ ವಿಧಾನವು ದೇಶದ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಅನುಕೂಲಕರವಾಗಿಲ್ಲ ಎಂಬುದು ಇಡೀ ರಾಜ್ಯದ ಅಭಿಪ್ರಾಯವಾಗಿದೆ ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ಹೇಳಿದೆ.</p><p>ಎಸ್ಐಆರ್ ಪ್ರಕ್ರಿಯೆಯನ್ನು ದೇಶದಾದ್ಯಂತ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ನಡೆಸುತ್ತಿದೆ.</p><p>ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ನಡೆಸುತ್ತಿರುವುದನ್ನು ಪ್ರಶ್ನಿಸಿ ಡಿಎಂಕೆ, ಸಿಪಿಎಂ, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನವೆಂಬರ್ 11ರಂದು ಚುನಾವಣಾ ಆಯೋಗದಿಂದ ಪ್ರತ್ಯೇಕ ಪ್ರತಿಕ್ರಿಯೆ ಕೇಳಿತ್ತು.</p>.<p><strong>‘ಇ.ಸಿ ದುರ್ಬಲಕ್ಕೆ ಮಮತಾ ಪ್ರಯತ್ನ’</strong></p><p>ಕೋಲ್ಕತ್ತ: ಎಸ್ಐಆರ್ಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚರ್ಚೆಯ ಕಾವು ಹೆಚ್ಚಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.</p><p>‘ಮಮತಾ ಅವರು ಚುನಾವಣಾ ಆಯೋಗವನ್ನು (ಇ.ಸಿ) ದುರ್ಬಲಗೊಳಿಸಲು ಮತ್ತು ಅಕ್ರಮ ಮತಬ್ಯಾಂಕ್ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.</p><p>‘ಅಧಿಕಾರ ಉಳಿಸಿಕೊಳ್ಳಲು ತಾನು ಮಾಡಿಕೊಂಡಿರುವ ವ್ಯವಸ್ಥೆಗೆ ಬೆದರಿಕೆ ಯಾಗಿ ಪರಿಣಮಿಸಿದೆ ಎಂಬ ಕಾರಣದಿಂದ ಮಮತಾ ಅವರು ಎಸ್ಐಆರ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಅಭಿಯಾನದ ಹಳಿತಪ್ಪಿಸುವ ಹತಾಶ ಪ್ರಯತ್ನ ಇದು’ ಎಂದು ದೂರಿದ್ದಾರೆ.</p><p>‘ರಾಜ್ಯದಲ್ಲಿ ಸೂಕ್ತ ಕಾರ್ಯಯೋಜನೆ ಇಲ್ಲದೆಯೇ ಬಲವಂತವಾಗಿ ಎಸ್ಐಆರ್ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯು ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಅಪಾಯಕ್ಕೆ ಒಡ್ಡುತ್ತಿದೆ’ ಎಂದು ಮಮತಾ ಗುರುವಾರ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.ಎಸ್ಐಆರ್ ಒತ್ತಡ ಆರೋಪ: ಕೇರಳದಲ್ಲಿ ಬಿಎಲ್ಒ ಆತ್ಮಹತ್ಯೆ.ಎಸ್ಐಆರ್ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ:ಚುನಾವಣಾ ಆಯೋಗಕ್ಕೆ ನೋಟಿಸ್ .ಎಸ್ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ.ಎಸ್ಐಆರ್ ನಿಯಮ ಉಲ್ಲಂಘನೆ: ಪಶ್ಚಿಮ ಬಂಗಾಳದ 8 ಬಿಎಲ್ಒಗಳಿಗೆ ಕಾರಣ ಕೇಳಿ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇರಳ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಎಸ್.ವಿ.ಎನ್. ಭಟ್ಟಿ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸಲ್ಲಿಸಿರುವ ಹೊಸ ಅರ್ಜಿಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ (ಇ.ಸಿ) ನೋಟಿಸ್ ಜಾರಿ ಮಾಡಿದೆ.</p><p>ಕೇರಳದಲ್ಲಿ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿರುವ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು, ಈ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿದೆ’ ಎಂದು ಪೀಠಕ್ಕೆ ತಿಳಿಸಿದರು.</p><p>ಕೇರಳದ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿರುವ ಅರ್ಜಿಗಳನ್ನು ನವೆಂಬರ್ 26ರಂದು ವಿಚಾರಣೆ ನಡೆಸಲು ಪಟ್ಟಿ ಮಾಡಲಾಗುವುದು ಮತ್ತು ಇತರ ರಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ವಿಚಾರಣೆಗೆ ತೆಗೆದುಕೊಳ್ಳ ಲಾಗುವುದು ಎಂದು ಪೀಠವು ಹೇಳಿತು.</p><p>ಖಾಸಗಿ ವ್ಯಕ್ತಿಗಳ ಬದಲು ರಾಜಕೀಯ ಪಕ್ಷಗಳು ಈಗ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಲು ಮುಂದಾಗಿರು ವುದು ಒಳ್ಳೆಯ ಬೆಳವಣಿಗೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.</p><p>ಎಸ್ಐಆರ್, ಅದರಲ್ಲೂ ಮುಖ್ಯ ವಾಗಿ ಅದನ್ನು ಕಾರ್ಯಗತಗೊಳಿಸುವ ವಿಧಾನವು ದೇಶದ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಅನುಕೂಲಕರವಾಗಿಲ್ಲ ಎಂಬುದು ಇಡೀ ರಾಜ್ಯದ ಅಭಿಪ್ರಾಯವಾಗಿದೆ ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ಹೇಳಿದೆ.</p><p>ಎಸ್ಐಆರ್ ಪ್ರಕ್ರಿಯೆಯನ್ನು ದೇಶದಾದ್ಯಂತ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ನಡೆಸುತ್ತಿದೆ.</p><p>ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ನಡೆಸುತ್ತಿರುವುದನ್ನು ಪ್ರಶ್ನಿಸಿ ಡಿಎಂಕೆ, ಸಿಪಿಎಂ, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನವೆಂಬರ್ 11ರಂದು ಚುನಾವಣಾ ಆಯೋಗದಿಂದ ಪ್ರತ್ಯೇಕ ಪ್ರತಿಕ್ರಿಯೆ ಕೇಳಿತ್ತು.</p>.<p><strong>‘ಇ.ಸಿ ದುರ್ಬಲಕ್ಕೆ ಮಮತಾ ಪ್ರಯತ್ನ’</strong></p><p>ಕೋಲ್ಕತ್ತ: ಎಸ್ಐಆರ್ಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚರ್ಚೆಯ ಕಾವು ಹೆಚ್ಚಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.</p><p>‘ಮಮತಾ ಅವರು ಚುನಾವಣಾ ಆಯೋಗವನ್ನು (ಇ.ಸಿ) ದುರ್ಬಲಗೊಳಿಸಲು ಮತ್ತು ಅಕ್ರಮ ಮತಬ್ಯಾಂಕ್ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.</p><p>‘ಅಧಿಕಾರ ಉಳಿಸಿಕೊಳ್ಳಲು ತಾನು ಮಾಡಿಕೊಂಡಿರುವ ವ್ಯವಸ್ಥೆಗೆ ಬೆದರಿಕೆ ಯಾಗಿ ಪರಿಣಮಿಸಿದೆ ಎಂಬ ಕಾರಣದಿಂದ ಮಮತಾ ಅವರು ಎಸ್ಐಆರ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಅಭಿಯಾನದ ಹಳಿತಪ್ಪಿಸುವ ಹತಾಶ ಪ್ರಯತ್ನ ಇದು’ ಎಂದು ದೂರಿದ್ದಾರೆ.</p><p>‘ರಾಜ್ಯದಲ್ಲಿ ಸೂಕ್ತ ಕಾರ್ಯಯೋಜನೆ ಇಲ್ಲದೆಯೇ ಬಲವಂತವಾಗಿ ಎಸ್ಐಆರ್ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯು ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಅಪಾಯಕ್ಕೆ ಒಡ್ಡುತ್ತಿದೆ’ ಎಂದು ಮಮತಾ ಗುರುವಾರ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.</p>.ಎಸ್ಐಆರ್ ಒತ್ತಡ ಆರೋಪ: ಕೇರಳದಲ್ಲಿ ಬಿಎಲ್ಒ ಆತ್ಮಹತ್ಯೆ.ಎಸ್ಐಆರ್ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ:ಚುನಾವಣಾ ಆಯೋಗಕ್ಕೆ ನೋಟಿಸ್ .ಎಸ್ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ.ಎಸ್ಐಆರ್ ನಿಯಮ ಉಲ್ಲಂಘನೆ: ಪಶ್ಚಿಮ ಬಂಗಾಳದ 8 ಬಿಎಲ್ಒಗಳಿಗೆ ಕಾರಣ ಕೇಳಿ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>