<p><strong>ಐಜ್ವಾಲ್</strong>: ಮಿಜೋರಾಂನ ಚಂಫೈ ಮತ್ತು ಲಾಂಗ್ಟ್ಲೈ ಜಿಲ್ಲೆಗಳ ಭಾರತ ಮತ್ತು ಮ್ಯಾನ್ಮಾರ್ ಗಡಿಯ ಬಳಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹8 ಕೋಟಿಗೂ ಹೆಚ್ಚು ಮೌಲ್ಯದ ವಿದೇಶಿ ಸಿಗರೇಟ್ ಮತ್ತು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಬುಧವಾರ ಲಾಂಗ್ಟ್ಲೈ ಜಿಲ್ಲೆಯ ಚೆರ್ಹ್ಲುನ್ ಪ್ರದೇಶದಲ್ಲಿ ಮಿಜೋರಾಂ ಪೊಲೀಸರ ನೆರವಿನೊಂದಿಗೆ ಅರೆಸೇನಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಿಸಲಾಗಿದ್ದ 600 ವಿದೇಶಿ ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ವಶಪಡಿಸಿಕೊಂಡಿರುವ ₹7.8 ಕೋಟಿ ಮೌಲ್ಯದ ಸಿಗರೇಟ್ಗಳನ್ನು ಅದೇ ದಿನ ನೆರೆಯ ಹ್ನಾಥಿಯಲ್ ಜಿಲ್ಲೆಯ ಥಿಂಗ್ಸೈ ಗ್ರಾಮದಲ್ಲಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಮತ್ತೊಂದು ಕಾರ್ಯಾಚರಣೆಯಲ್ಲಿ, ಚಂಫೈ ಜಿಲ್ಲೆಯ ಹ್ಮುಹ್ಮೆಲ್ತಾದಲ್ಲಿ ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ಅಧಿಕಾರಿಗಳ ಜಂಟಿ ತಂಡವು ಕಳ್ಳಸಾಗಣೆ ಮಾಡುತ್ತಿದ್ದ 4,400 ಕೆ.ಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>₹30.8 ಲಕ್ಷ ಮೌಲ್ಯದ ಸರಕುಗಳನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಜ್ವಾಲ್</strong>: ಮಿಜೋರಾಂನ ಚಂಫೈ ಮತ್ತು ಲಾಂಗ್ಟ್ಲೈ ಜಿಲ್ಲೆಗಳ ಭಾರತ ಮತ್ತು ಮ್ಯಾನ್ಮಾರ್ ಗಡಿಯ ಬಳಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹8 ಕೋಟಿಗೂ ಹೆಚ್ಚು ಮೌಲ್ಯದ ವಿದೇಶಿ ಸಿಗರೇಟ್ ಮತ್ತು ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಬುಧವಾರ ಲಾಂಗ್ಟ್ಲೈ ಜಿಲ್ಲೆಯ ಚೆರ್ಹ್ಲುನ್ ಪ್ರದೇಶದಲ್ಲಿ ಮಿಜೋರಾಂ ಪೊಲೀಸರ ನೆರವಿನೊಂದಿಗೆ ಅರೆಸೇನಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಿಸಲಾಗಿದ್ದ 600 ವಿದೇಶಿ ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ವಶಪಡಿಸಿಕೊಂಡಿರುವ ₹7.8 ಕೋಟಿ ಮೌಲ್ಯದ ಸಿಗರೇಟ್ಗಳನ್ನು ಅದೇ ದಿನ ನೆರೆಯ ಹ್ನಾಥಿಯಲ್ ಜಿಲ್ಲೆಯ ಥಿಂಗ್ಸೈ ಗ್ರಾಮದಲ್ಲಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.</p><p>ಮತ್ತೊಂದು ಕಾರ್ಯಾಚರಣೆಯಲ್ಲಿ, ಚಂಫೈ ಜಿಲ್ಲೆಯ ಹ್ಮುಹ್ಮೆಲ್ತಾದಲ್ಲಿ ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ಅಧಿಕಾರಿಗಳ ಜಂಟಿ ತಂಡವು ಕಳ್ಳಸಾಗಣೆ ಮಾಡುತ್ತಿದ್ದ 4,400 ಕೆ.ಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>₹30.8 ಲಕ್ಷ ಮೌಲ್ಯದ ಸರಕುಗಳನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>