<p><strong>ಚೆನ್ನೈ:</strong> ಕ್ಷೇತ್ರ ಮರುವಿಂಗಡನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಆಯೋಜಿಸಿರುವ ಜಂಟಿ ಕಾರ್ಯಪಡೆ ಸಮಿತಿಯ ಮುಂದಿನ ಸಭೆಯು ಹೈದರಾಬಾದ್ನಲ್ಲಿ ನಡೆಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.</p><p>‘ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆಗೆ ಮುಂದಾಗಿರುವ ಕೇಂದ್ರ ಸರ್ಕಾರವು, ಲೋಕಸಭೆಯಲ್ಲಿ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯವನ್ನು ಕುಂಠಿತಗೊಳಿಸುವ ಷಡ್ಯಂತ್ರ ನಡೆಸಿದೆ. ಇದನ್ನು ಪ್ರತಿಭಟಿಸುವಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಹೋರಾಡಬೇಕಿದೆ’ ಎಂದಿದ್ದಾರೆ.</p><p>‘ನ್ಯಾಯಯುತವಾದ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಗೆ ಕಾನೂನು ತಜ್ಞರ ಸಮಿತಿ ರಚಿಸುವ ಅಗತ್ಯವಿದೆ. ಜತೆಗೆ ಕಾನೂನಿನ ಮಾರ್ಗದಲ್ಲೇ ರಾಜಕೀಯ ಹೆಜ್ಜೆಗಳನ್ನಿಡುವ ಕುರಿತು ಸಮಿತಿಯ ಸದಸ್ಯರು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು. ನಾವು ಒಗ್ಗಟ್ಟಿನಿಂದ ಹೋರಾಡಿದರೆ ಮಾತ್ರ, ಗೆಲುವು ಸಾಧಿಸಲು ಸಾಧ್ಯ’ ಎಂದಿದ್ದಾರೆ.</p><p>‘ನ್ಯಾಯಯುತ ಬೇಡಿಕೆಗೆ ಒಗ್ಗಟ್ಟಿನಿಂದ ಹೋರಾಡೋಣ. ನಮ್ಮ ಪ್ರಾತಿನಿಧ್ಯ ಯಾವುದೇ ಹಂತದಲ್ಲೂ ಕುಂಠಿತವಾಗದಂತೆ ಎಚ್ಚರವಹಿಸೋಣ. ನ್ಯಾಯಯುತ ಕ್ಷೇತ್ರ ಪುನರ್ವಿಂಗಡನೆ ಆಗುವವರೆಗೂ ಎಲ್ಲರೂ ಹೋರಾಡೋಣ’ ಎಂದಿದ್ದಾರೆ.</p><p>‘ಜನಸಂಖ್ಯೆ ನಿಯಂತ್ರಣದಲ್ಲಿ ದಕ್ಷಿಣದ ರಾಜ್ಯಗಳು ಸಾಕಷ್ಟು ಉತ್ತಮ ಕ್ರಮ ವಹಿಸಿವೆ. ಈಗ ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದರೆ, ಅದು ತಮಿಳುನಾಡು ಒಳಗೊಂಡಂತೆ ಈ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಲೋಕಸಭೆಯಲ್ಲಿ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾದರೆ, ಅದು ನೇರವಾಗಿ ರಾಜ್ಯದ ರಾಜಕೀಯ ಬಲದ ಮೇಲೆ ಪರಿಣಾಮ ಬೀರಲಿದೆ. ಬಹುಮತವೇ ಇಲ್ಲದೆ ನಮಗೆ ಧ್ವನಿಯೇ ಇಲ್ಲದಂತಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p><p>‘ಕ್ಷೇತ್ರ ಪುನರ್ ವಿಂಗಡನೆಗೆ ವಿರೋಧಪಕ್ಷಗಳ ವಿರೋಧವಿಲ್ಲ. ಬದಲಿಗೆ ಅದನ್ನು ನ್ಯಾಯಯುತವಾಗಿ ನಡೆಸಿ ಮತ್ತು ಯಾವುದೇ ರಾಜಕೀಯ ದುರುದ್ದೇಶ ನುಸುಳದಂತೆ ಎಚ್ಚರವಹಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆ’ ಎಂದು ಸ್ಟಾಲಿನ್ ಹೇಳಿದರು.</p>.<h3>ಕೇಂದ್ರದ ಕ್ಷುಲ್ಲಕ ರಾಜಕೀಯ ಹಿತಾಸಕ್ತಿ: ಪಿಣರಾಯಿ ವಿಜಯನ್</h3><p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತನಾಡಿ, ‘ಯಾವ ರಾಜ್ಯವನ್ನೂ ಸಂಪರ್ಕಿಸದೇ ಏಕಾಏಕಿ ಕ್ಷೇತ್ರ ಪುನರ್ ವಿಂಗಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿರುವುದು ಸಂವಿಧಾನದ ತತ್ವ ಪಾಲನೆ ಇಲ್ಲದ ಕ್ಷಲ್ಲಕ ರಾಜಕೀಯ ಹಿತಾಸಕ್ತಿಯಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.</p><p>‘ಜನಸಂಖ್ಯೆ ಆಧಾರದಲ್ಲೇ ಕ್ಷೇತ್ರ ಪುನರ್ ವಿಂಗಡನೆ ಮಾಡುವುದಾದರೆ, ಈಗಿರುವ ಕ್ಷೇತ್ರಗಳ ಸಂಖ್ಯೆ ಕಳೆದುಕೊಳ್ಳುವ ರಾಜ್ಯಗಳಲ್ಲಿ ಕೇರಳವೂ ಸೇರಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p><p>ಸಭೆಯಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ ದಾಸ್ ಮತ್ತು ಬಿಜು ಜನತಾ ದಳ ಮುಖಂಡ ಸಂಜಯ್ ಕುಮಾರ್ ದಾಸ್ ಬರ್ಮಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕ್ಷೇತ್ರ ಮರುವಿಂಗಡನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಆಯೋಜಿಸಿರುವ ಜಂಟಿ ಕಾರ್ಯಪಡೆ ಸಮಿತಿಯ ಮುಂದಿನ ಸಭೆಯು ಹೈದರಾಬಾದ್ನಲ್ಲಿ ನಡೆಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.</p><p>‘ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆಗೆ ಮುಂದಾಗಿರುವ ಕೇಂದ್ರ ಸರ್ಕಾರವು, ಲೋಕಸಭೆಯಲ್ಲಿ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯವನ್ನು ಕುಂಠಿತಗೊಳಿಸುವ ಷಡ್ಯಂತ್ರ ನಡೆಸಿದೆ. ಇದನ್ನು ಪ್ರತಿಭಟಿಸುವಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಹೋರಾಡಬೇಕಿದೆ’ ಎಂದಿದ್ದಾರೆ.</p><p>‘ನ್ಯಾಯಯುತವಾದ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಗೆ ಕಾನೂನು ತಜ್ಞರ ಸಮಿತಿ ರಚಿಸುವ ಅಗತ್ಯವಿದೆ. ಜತೆಗೆ ಕಾನೂನಿನ ಮಾರ್ಗದಲ್ಲೇ ರಾಜಕೀಯ ಹೆಜ್ಜೆಗಳನ್ನಿಡುವ ಕುರಿತು ಸಮಿತಿಯ ಸದಸ್ಯರು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು. ನಾವು ಒಗ್ಗಟ್ಟಿನಿಂದ ಹೋರಾಡಿದರೆ ಮಾತ್ರ, ಗೆಲುವು ಸಾಧಿಸಲು ಸಾಧ್ಯ’ ಎಂದಿದ್ದಾರೆ.</p><p>‘ನ್ಯಾಯಯುತ ಬೇಡಿಕೆಗೆ ಒಗ್ಗಟ್ಟಿನಿಂದ ಹೋರಾಡೋಣ. ನಮ್ಮ ಪ್ರಾತಿನಿಧ್ಯ ಯಾವುದೇ ಹಂತದಲ್ಲೂ ಕುಂಠಿತವಾಗದಂತೆ ಎಚ್ಚರವಹಿಸೋಣ. ನ್ಯಾಯಯುತ ಕ್ಷೇತ್ರ ಪುನರ್ವಿಂಗಡನೆ ಆಗುವವರೆಗೂ ಎಲ್ಲರೂ ಹೋರಾಡೋಣ’ ಎಂದಿದ್ದಾರೆ.</p><p>‘ಜನಸಂಖ್ಯೆ ನಿಯಂತ್ರಣದಲ್ಲಿ ದಕ್ಷಿಣದ ರಾಜ್ಯಗಳು ಸಾಕಷ್ಟು ಉತ್ತಮ ಕ್ರಮ ವಹಿಸಿವೆ. ಈಗ ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದರೆ, ಅದು ತಮಿಳುನಾಡು ಒಳಗೊಂಡಂತೆ ಈ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಲೋಕಸಭೆಯಲ್ಲಿ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾದರೆ, ಅದು ನೇರವಾಗಿ ರಾಜ್ಯದ ರಾಜಕೀಯ ಬಲದ ಮೇಲೆ ಪರಿಣಾಮ ಬೀರಲಿದೆ. ಬಹುಮತವೇ ಇಲ್ಲದೆ ನಮಗೆ ಧ್ವನಿಯೇ ಇಲ್ಲದಂತಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p><p>‘ಕ್ಷೇತ್ರ ಪುನರ್ ವಿಂಗಡನೆಗೆ ವಿರೋಧಪಕ್ಷಗಳ ವಿರೋಧವಿಲ್ಲ. ಬದಲಿಗೆ ಅದನ್ನು ನ್ಯಾಯಯುತವಾಗಿ ನಡೆಸಿ ಮತ್ತು ಯಾವುದೇ ರಾಜಕೀಯ ದುರುದ್ದೇಶ ನುಸುಳದಂತೆ ಎಚ್ಚರವಹಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆ’ ಎಂದು ಸ್ಟಾಲಿನ್ ಹೇಳಿದರು.</p>.<h3>ಕೇಂದ್ರದ ಕ್ಷುಲ್ಲಕ ರಾಜಕೀಯ ಹಿತಾಸಕ್ತಿ: ಪಿಣರಾಯಿ ವಿಜಯನ್</h3><p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತನಾಡಿ, ‘ಯಾವ ರಾಜ್ಯವನ್ನೂ ಸಂಪರ್ಕಿಸದೇ ಏಕಾಏಕಿ ಕ್ಷೇತ್ರ ಪುನರ್ ವಿಂಗಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿರುವುದು ಸಂವಿಧಾನದ ತತ್ವ ಪಾಲನೆ ಇಲ್ಲದ ಕ್ಷಲ್ಲಕ ರಾಜಕೀಯ ಹಿತಾಸಕ್ತಿಯಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.</p><p>‘ಜನಸಂಖ್ಯೆ ಆಧಾರದಲ್ಲೇ ಕ್ಷೇತ್ರ ಪುನರ್ ವಿಂಗಡನೆ ಮಾಡುವುದಾದರೆ, ಈಗಿರುವ ಕ್ಷೇತ್ರಗಳ ಸಂಖ್ಯೆ ಕಳೆದುಕೊಳ್ಳುವ ರಾಜ್ಯಗಳಲ್ಲಿ ಕೇರಳವೂ ಸೇರಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p><p>ಸಭೆಯಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ ದಾಸ್ ಮತ್ತು ಬಿಜು ಜನತಾ ದಳ ಮುಖಂಡ ಸಂಜಯ್ ಕುಮಾರ್ ದಾಸ್ ಬರ್ಮಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>