ಮಾದಕ ವಸ್ತುಗಳ ಕಳ್ಳಸಾಗಣೆದಾರರಿಗೆ ನೆರವು ಒದಗಿಸುವ ಮೂಲಕ ಮುಖ್ಯಮಂತ್ರಿಯವರು, ಕಳ್ಳಮಾರ್ಗದಲ್ಲಿ ತಂದ ವಸ್ತುಗಳ ವಿತರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಣ್ಣಾಮಲೈ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಮೂಲಕ ಅವರು ಮುಖ್ಯಮಂತ್ರಿಯವರು ಹೊಂದಿರುವ ಒಳ್ಳೆಯ ಹೆಸರಿಗೆ ಧಕ್ಕೆ ತಂದಿದ್ದಾರೆ. ನ್ಯಾಯಸಮ್ಮತವಲ್ಲದ ರೀತಿಯಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುವ ಕೆಟ್ಟ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂದು ದೂರಲಾಗಿದೆ.