<p><strong>ಲಖನೌ:</strong> ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ಆದೇಶಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ತಲಾ ₹25 ಲಕ್ಷ ಪರಿಹಾರವನ್ನೂ ಘೋಷಿಸಿದ್ದಾರೆ. </p>.<p>ಮಹಾಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಕಾರಣಗಳ ಬಗ್ಗೆ ಮೂವರು ಸದಸ್ಯರ ಸಮಿತಿಯು ತನಿಖೆ ನಡೆಸಲಿದೆ.</p>.<p>ದುರಂತದಿಂದ ಭಾವುಕಗೊಂಡಿರುವ ಯೋಗಿ ಆದಿತ್ಯನಾಥ ಅವರು ‘ಈ ಘಟನೆ ದುರದೃಷ್ಟಕರ. ಮನಸ್ಸನ್ನು ಘಾಸಿಗೊಳಿಸಿದೆ. ಇದು ನಮಗೆ ಒಂದು ಪಾಠ. ನಾವು ಏನೆಲ್ಲಾ ಸಾಧ್ಯವಿತ್ತೋ ಆ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದೆವು. ನಾವು ಮೇಳದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಹೇಳಿದ್ದಾರೆ. </p>.<p>ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಮೇಳ ಅಧಿಕಾರಿಗಳೊಂದಿಗೆ ಚರ್ಚಿಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಮತ್ತು ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಅವರು ಪ್ರಯಾಗ್ರಾಜ್ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ಆದೇಶಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ತಲಾ ₹25 ಲಕ್ಷ ಪರಿಹಾರವನ್ನೂ ಘೋಷಿಸಿದ್ದಾರೆ. </p>.<p>ಮಹಾಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಕಾರಣಗಳ ಬಗ್ಗೆ ಮೂವರು ಸದಸ್ಯರ ಸಮಿತಿಯು ತನಿಖೆ ನಡೆಸಲಿದೆ.</p>.<p>ದುರಂತದಿಂದ ಭಾವುಕಗೊಂಡಿರುವ ಯೋಗಿ ಆದಿತ್ಯನಾಥ ಅವರು ‘ಈ ಘಟನೆ ದುರದೃಷ್ಟಕರ. ಮನಸ್ಸನ್ನು ಘಾಸಿಗೊಳಿಸಿದೆ. ಇದು ನಮಗೆ ಒಂದು ಪಾಠ. ನಾವು ಏನೆಲ್ಲಾ ಸಾಧ್ಯವಿತ್ತೋ ಆ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದೆವು. ನಾವು ಮೇಳದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಹೇಳಿದ್ದಾರೆ. </p>.<p>ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಮೇಳ ಅಧಿಕಾರಿಗಳೊಂದಿಗೆ ಚರ್ಚಿಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಮತ್ತು ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಅವರು ಪ್ರಯಾಗ್ರಾಜ್ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>