<p><strong>ನವದೆಹಲಿ:</strong> ಮನೆ ಕೆಲಸಗಾರರಿಗೆ ಸಮಗ್ರ ಕಾನೂನು ಚೌಕಟ್ಟು ಮತ್ತು ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.</p><p>ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಗಣಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕೇಳುವ ಆದೇಶ ಹೊರಡಿಸಿ, ಶಾಸಕಾಂಗದ ಕ್ಷೇತ್ರವನ್ನು ಅತಿಕ್ರಮಿಸಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.</p><p>‘ಕಾರ್ಮಿಕರ ಶೋಷಣೆ ಇರುವುದು ನಿಜ. ಆದರೆ, ಕಾರ್ಮಿಕ ಸಂಘಟನೆಗಳು ದೇಶದ ಕೈಗಾರಿಕೀಕರಣದ ಬೆಳವಣಿಗೆಗೆ ತಡೆಯನ್ನುಂಟು ಮಾಡಿವೆ. ‘ಝಂಡಾ’ ಸಂಘಟನೆಗಳಿಂದಾಗಿ ದೇಶಾದ್ಯಂತ ಎಲ್ಲಾ ಸಾಂಪ್ರದಾಯಿಕ ಕೈಗಾರಿಕೆಗಳು ಮುಚ್ಚಿವೆ. ಅವರು ಕೆಲಸ ಮಾಡಲು ಬಯಸುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅಸಮಾಧಾನ ವ್ಯಕ್ತಪಡಿಸಿದರು.</p><p>ಆದಾಗ್ಯೂ, ಕಾರ್ಮಿಕರ ದುಃಸ್ಥಿತಿಗಳ ಬಗ್ಗೆ ಎತ್ತಿ ತೋರಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಾಯ ಪಡೆಯುವಂತೆ ಮನೆ ಕೆಲಸಗಾರರ ಸಂಘವಾದ ಪೆಣ್ ತೊಳಿಳಾಳರ್ಗಳ್ ಸಂಘಮ್ ಸೇರಿದಂತೆ ಇತರ ಅರ್ಜಿದಾರರಿಗೆ ಕೋರ್ಟ್ ಹೇಳಿದೆ.</p><p>ಮನೆ ಕೆಲಸಗಾರರಿಗೆ ಕನಿಷ್ಠ ವೇತನ ಪಾವತಿಸದಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಗುರುತಿಸುವುದು, ರಾಜ್ಯಗಳಾದ್ಯಂತ ಕನಿಷ್ಠ ವೇತನ ನಿಯಮಗಳ ಜಾರಿ ಮಾಡುವುದು ಸೇರಿದಂತೆ ಹಲವು ಪರಿಹಾರಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮನೆ ಕೆಲಸಗಾರರಿಗೆ ಸಮಗ್ರ ಕಾನೂನು ಚೌಕಟ್ಟು ಮತ್ತು ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.</p><p>ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಗಣಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕೇಳುವ ಆದೇಶ ಹೊರಡಿಸಿ, ಶಾಸಕಾಂಗದ ಕ್ಷೇತ್ರವನ್ನು ಅತಿಕ್ರಮಿಸಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.</p><p>‘ಕಾರ್ಮಿಕರ ಶೋಷಣೆ ಇರುವುದು ನಿಜ. ಆದರೆ, ಕಾರ್ಮಿಕ ಸಂಘಟನೆಗಳು ದೇಶದ ಕೈಗಾರಿಕೀಕರಣದ ಬೆಳವಣಿಗೆಗೆ ತಡೆಯನ್ನುಂಟು ಮಾಡಿವೆ. ‘ಝಂಡಾ’ ಸಂಘಟನೆಗಳಿಂದಾಗಿ ದೇಶಾದ್ಯಂತ ಎಲ್ಲಾ ಸಾಂಪ್ರದಾಯಿಕ ಕೈಗಾರಿಕೆಗಳು ಮುಚ್ಚಿವೆ. ಅವರು ಕೆಲಸ ಮಾಡಲು ಬಯಸುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅಸಮಾಧಾನ ವ್ಯಕ್ತಪಡಿಸಿದರು.</p><p>ಆದಾಗ್ಯೂ, ಕಾರ್ಮಿಕರ ದುಃಸ್ಥಿತಿಗಳ ಬಗ್ಗೆ ಎತ್ತಿ ತೋರಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಾಯ ಪಡೆಯುವಂತೆ ಮನೆ ಕೆಲಸಗಾರರ ಸಂಘವಾದ ಪೆಣ್ ತೊಳಿಳಾಳರ್ಗಳ್ ಸಂಘಮ್ ಸೇರಿದಂತೆ ಇತರ ಅರ್ಜಿದಾರರಿಗೆ ಕೋರ್ಟ್ ಹೇಳಿದೆ.</p><p>ಮನೆ ಕೆಲಸಗಾರರಿಗೆ ಕನಿಷ್ಠ ವೇತನ ಪಾವತಿಸದಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಗುರುತಿಸುವುದು, ರಾಜ್ಯಗಳಾದ್ಯಂತ ಕನಿಷ್ಠ ವೇತನ ನಿಯಮಗಳ ಜಾರಿ ಮಾಡುವುದು ಸೇರಿದಂತೆ ಹಲವು ಪರಿಹಾರಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>