<p><strong>ನವದೆಹಲಿ:</strong> ಬೀದಿ ನಾಯಿ ಸಮಸ್ಯೆಯ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಮುಂದಿನ ಕ್ರಮ ಕೈಗೊಳ್ಳಲು ಸದ್ಯದಲ್ಲೇ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ದೆಹಲಿಯ ಎಲ್ಲಾ ನಿವಾಸಿ ಕಲ್ಯಾಣ ಸಂಘಗಳ(ಆರ್ಡಬ್ಲ್ಯೂಎ) ಸಭೆ ಕರೆಯಲಾಗಿದೆ ಎಂದು ಬಿಜೆಪಿ ನಾಯಕ ವಿಜಯ್ ಗೋಯಲ್ ಅವರು ಬುಧವಾರ ತಿಳಿಸಿದ್ದಾರೆ.</p><p>ದೆಹಲಿಯ ಬಂಗಾಳಿ ಮಾರುಕಟ್ಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದ್ದಾರೆ. </p><p>ದೆಹಲಿಯಲ್ಲಿರುವ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಆಗಸ್ಟ್ 11ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. </p><p>ಸುಪ್ರೀಂ ಕೋರ್ಟ್ನ ತೀರ್ಪನ್ನು ಸ್ವಾಗತಿಸಿರುವ ಗೋಯಲ್, ‘ದೆಹಲಿಯ ಬೀದಿಗಳ ಸುರಕ್ಷತೆಗಾಗಿ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ಗೆ ಧನ್ಯವಾದಗಳು. ಇದನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಬೀದಿ ನಾಯಿ ಸಮಸ್ಯೆಯ ಕುರಿತು ಆರ್ಡಬ್ಲ್ಯೂಎ ನನ್ನ ಗಮನಕ್ಕೆ ತಂದಿತ್ತು. ಕಳೆದ ಎರಡು ವರ್ಷಗಳಿಂದ ‘ಲೋಕ ಅಭಿಯಾನ’ ಹೆಸರಿನ ಎನ್ಜಿಒ ಮೂಲಕ, ಇದರ ವಿರುದ್ಧ ಚಳುವಳಿ ಮಾಡುತ್ತಿದ್ದೇವೆ. ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.</p><p>ಬೀದಿ ನಾಯಿಗಳ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಬೇಕು ಎಂದು ಗೋಯಲ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೀದಿ ನಾಯಿ ಸಮಸ್ಯೆಯ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಮುಂದಿನ ಕ್ರಮ ಕೈಗೊಳ್ಳಲು ಸದ್ಯದಲ್ಲೇ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ದೆಹಲಿಯ ಎಲ್ಲಾ ನಿವಾಸಿ ಕಲ್ಯಾಣ ಸಂಘಗಳ(ಆರ್ಡಬ್ಲ್ಯೂಎ) ಸಭೆ ಕರೆಯಲಾಗಿದೆ ಎಂದು ಬಿಜೆಪಿ ನಾಯಕ ವಿಜಯ್ ಗೋಯಲ್ ಅವರು ಬುಧವಾರ ತಿಳಿಸಿದ್ದಾರೆ.</p><p>ದೆಹಲಿಯ ಬಂಗಾಳಿ ಮಾರುಕಟ್ಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದ್ದಾರೆ. </p><p>ದೆಹಲಿಯಲ್ಲಿರುವ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಆಗಸ್ಟ್ 11ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. </p><p>ಸುಪ್ರೀಂ ಕೋರ್ಟ್ನ ತೀರ್ಪನ್ನು ಸ್ವಾಗತಿಸಿರುವ ಗೋಯಲ್, ‘ದೆಹಲಿಯ ಬೀದಿಗಳ ಸುರಕ್ಷತೆಗಾಗಿ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ಗೆ ಧನ್ಯವಾದಗಳು. ಇದನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಬೀದಿ ನಾಯಿ ಸಮಸ್ಯೆಯ ಕುರಿತು ಆರ್ಡಬ್ಲ್ಯೂಎ ನನ್ನ ಗಮನಕ್ಕೆ ತಂದಿತ್ತು. ಕಳೆದ ಎರಡು ವರ್ಷಗಳಿಂದ ‘ಲೋಕ ಅಭಿಯಾನ’ ಹೆಸರಿನ ಎನ್ಜಿಒ ಮೂಲಕ, ಇದರ ವಿರುದ್ಧ ಚಳುವಳಿ ಮಾಡುತ್ತಿದ್ದೇವೆ. ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.</p><p>ಬೀದಿ ನಾಯಿಗಳ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಬೇಕು ಎಂದು ಗೋಯಲ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>