<p><strong>ನ್ಯೂಯಾರ್ಕ್</strong>: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ರಾಣಾ ಅವರನ್ನು ಅಮೆರಿಕದಿಂದ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.</p><p>ಭಾರತದ ಸರ್ಕಾರಿ ಮೂಲಗಳ ಪ್ರಕಾರ, ಭಾರತದ ಬಹು ಏಜೆನ್ಸಿ ತಂಡವು ಅಮೆರಿಕಕ್ಕೆ ತೆರಳಿದ್ದು, ಎಲ್ಲ ದಾಖಲೆಗಳು ಮತ್ತು ಕಾನೂನುಬದ್ಧತೆಗಳನ್ನು ಅಮೆರಿಕದ ಅಧಿಕಾರಿಗಳೊಂದಿಗೆ ಪೂರ್ಣಗೊಳಿಸಲಾಗುತ್ತಿದೆ.</p><p>ರಾಣಾ ಅವರನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ ತುಂಬಾ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ರಾಣಾ ಅವರನ್ನು ಬುಧವಾರ ಭಾರತಕ್ಕೆ ಕರೆತರುತ್ತಿಲ್ಲ. ಆದರೆ, ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.</p><p>ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ರಾಣಾ ಅರ್ಜಿಯನ್ನು ತಿರಸ್ಕರಿಸಿದ ನಂತರ ಭಾರತಕ್ಕೆ ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ಉಗ್ರನ ಕೊನೆಯ ಪ್ರಯತ್ನ ವಿಫಲವಾಗಿದ್ದು, ಅದಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಆಗುತ್ತಿದೆ. </p><p>ಪ್ರಸ್ತುತ ರಾಣಾ ಲಾಸ್ ಏಂಜಲೀಸ್ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್ನಲ್ಲಿದ್ದಾನೆ.</p><p>ರಾಣಾ ತನ್ನ ಹಸ್ತಾಂತರ ತಡೆಯಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು. ಆದರೆ, ನ್ಯಾಯಮೂರ್ತಿ ಕಗನ್ ಮಾರ್ಚ್ 6ರಂದು ಅದನ್ನು ನಿರಾಕರಿಸಿದರು ಎಂದು ನ್ಯೂಯಾರ್ಕ್ ಮೂಲದ ಭಾರತೀಯ-ಅಮೆರಿಕನ್ ವಕೀಲ ರವಿ ಬಾತ್ರಾ ಪಿಟಿಐಗೆ ತಿಳಿಸಿದ್ದಾರೆ.</p>.ಹಸ್ತಾಂತರಕ್ಕೆ ತಡೆ: ತಹವ್ವುರ್ ರಾಣಾ ಅರ್ಜಿ ತಿರಸ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong>: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ರಾಣಾ ಅವರನ್ನು ಅಮೆರಿಕದಿಂದ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.</p><p>ಭಾರತದ ಸರ್ಕಾರಿ ಮೂಲಗಳ ಪ್ರಕಾರ, ಭಾರತದ ಬಹು ಏಜೆನ್ಸಿ ತಂಡವು ಅಮೆರಿಕಕ್ಕೆ ತೆರಳಿದ್ದು, ಎಲ್ಲ ದಾಖಲೆಗಳು ಮತ್ತು ಕಾನೂನುಬದ್ಧತೆಗಳನ್ನು ಅಮೆರಿಕದ ಅಧಿಕಾರಿಗಳೊಂದಿಗೆ ಪೂರ್ಣಗೊಳಿಸಲಾಗುತ್ತಿದೆ.</p><p>ರಾಣಾ ಅವರನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ ತುಂಬಾ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ರಾಣಾ ಅವರನ್ನು ಬುಧವಾರ ಭಾರತಕ್ಕೆ ಕರೆತರುತ್ತಿಲ್ಲ. ಆದರೆ, ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.</p><p>ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ರಾಣಾ ಅರ್ಜಿಯನ್ನು ತಿರಸ್ಕರಿಸಿದ ನಂತರ ಭಾರತಕ್ಕೆ ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ಉಗ್ರನ ಕೊನೆಯ ಪ್ರಯತ್ನ ವಿಫಲವಾಗಿದ್ದು, ಅದಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಆಗುತ್ತಿದೆ. </p><p>ಪ್ರಸ್ತುತ ರಾಣಾ ಲಾಸ್ ಏಂಜಲೀಸ್ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್ನಲ್ಲಿದ್ದಾನೆ.</p><p>ರಾಣಾ ತನ್ನ ಹಸ್ತಾಂತರ ತಡೆಯಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು. ಆದರೆ, ನ್ಯಾಯಮೂರ್ತಿ ಕಗನ್ ಮಾರ್ಚ್ 6ರಂದು ಅದನ್ನು ನಿರಾಕರಿಸಿದರು ಎಂದು ನ್ಯೂಯಾರ್ಕ್ ಮೂಲದ ಭಾರತೀಯ-ಅಮೆರಿಕನ್ ವಕೀಲ ರವಿ ಬಾತ್ರಾ ಪಿಟಿಐಗೆ ತಿಳಿಸಿದ್ದಾರೆ.</p>.ಹಸ್ತಾಂತರಕ್ಕೆ ತಡೆ: ತಹವ್ವುರ್ ರಾಣಾ ಅರ್ಜಿ ತಿರಸ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>