<p>ಚೆನ್ನೈ: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವಿನ ಭಾಷಾ ವಿವಾದ ಸಮರ ಮುಂದುವರಿದಿದೆ. 2025–26ರ ರಾಜ್ಯ ಬಜೆಟ್ನ ಲಾಂಛನವನ್ನು ತಮಿಳುನಾಡು ಸರ್ಕಾರ ಗುರುವಾರ ಬಿಡುಗಡೆ ಮಾಡಿದ್ದು, ರೂಪಾಯಿ ಚಿಹ್ನೆಗೆ ಬದಲಾಗಿ ತಮಿಳು ಅಕ್ಷರ ಬಳಸಿದೆ.</p>.ತಮಿಳುನಾಡು, ಪೆರಿಯಾರ್ ಅವರನ್ನು ಕೇಂದ್ರ ಅವಮಾನಿಸಿದೆ: ಉದಯನಿಧಿ ಕಿಡಿ.<p>ಇದು ರಾಜ್ಯ ಬಿಜೆಪಿ ಘಟಕದ ಕಣ್ಣು ಕೆಂಪಾಗಿಸಿದೆ.</p><p>ತಮಿಳುನಾಡು ಹಣಕಾಸು ಸಚಿವ ತಂಗಂ ತೆನ್ನರಸು ಶುಕ್ರವಾರ 2025–26ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.</p><p>ಹೊಸ ಲಾಂಛನದಲ್ಲಿ ರೂಪಾಯಿ ಚಿಹ್ನೆ ಬದಲಿಗೆ ತಮಿಳು ಅಕ್ಷರ ‘ರೂ’ ಅನ್ನು ಬಳಸಲಾಗಿದೆ. ತಮಿಳಿನ ‘ರೂಬಾಯಿ’ಯ ಸಂಕ್ಷಿಪ್ತ ರೂಪವೇ ‘ರೂ’.</p>.ತ್ರಿಭಾಷಾ ಸೂತ್ರ ವಿಫಲ ಮಾದರಿ: ತಮಿಳುನಾಡು ಸಚಿವ ತ್ಯಾಗರಾಜನ್.<p>ಬಜೆಟ್ ಲಾಂಛನದಲ್ಲಿ ‘ಎಲ್ಲರಿಗೂ ಎಲ್ಲವೂ’ ಎನ್ನುವ ಅಡಿಬರಹ ಇದ್ದು, ಎಲ್ಲರನ್ನೂ ಒಳಗೊಳ್ಳುವುದರ ಸಂಕೇತ ಎಂದು ಡಿಎಂಕೆ ಸರ್ಕಾರ ಹೇಳಿದೆ.</p><p>ಸರ್ಕಾರದ ಈ ನಡೆಯನ್ನು ರಾಜ್ಯ ಬಿಜೆಪಿ ಘಟದ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ. </p>.ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.<p>‘ಡಿಎಂಕೆ ಸರ್ಕಾರದ 2025–26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ತಮಿಳು ವ್ಯಕ್ತಿ ನೀಡಿದ ರೂಪಾಯಿ ಚಿಹ್ನೆಯನ್ನು ಬದಲಿಸಿದೆ. ಆ ಚಿಹ್ನೆಯನ್ನು ಇಡೀ ಭಾರತ ಒಪ್ಪಿಕೊಂಡಿದೆಯಲ್ಲದೇ, ಕರೆನ್ಸಿಯಲ್ಲೂ ಸೇರಿಸಲಾಗಿದೆ. ರೂಪಾಯಿ ಚಿಹ್ನೆಯನ್ನು ರಚಿಸಿದ ಶ್ರೀ ಉದಯ್ ಕುಮಾರ್ ಅವರು ಡಿಎಂಕೆಯ ಮಾಜಿ ಶಾಸಕರ ಪುತ್ರ. ಸ್ಟಾಲಿನ್ ಅವರೇ ನೀವು ಎಷ್ಟು ಮೂರ್ಖರಾಗಿರಬಹುದು?’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p><p>ಪೋಸ್ಟ್ ಜೊತೆಗೆ ಬಜೆಟ್ನ ಲಾಂಛನವನ್ನೂ ಹಂಚಿಕೊಂಡಿದ್ದಾರೆ.</p> .ಮತ್ತೊಂದು ಭಾಷಾ ಸಮರಕ್ಕೆ ತಮಿಳುನಾಡು ಸಿದ್ಧ: ಸಿಎಂ ಸ್ಟಾಲಿನ್.<p>ಬಿಜೆಪಿಯ ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಕೂಡ, ರಾಜ್ಯ ಸರ್ಕಾರದ ಈ ನಡೆಯನ್ನು ಟೀಕಿಸಿದ್ದಾರೆ.</p>.<p>‘ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಅವರ ನೇತೃತ್ವದ ಸರ್ಕಾರದ ಈ ವರ್ತನೆ ಅಸಹ್ಯಕರ’ ಎಂದು ಅವರು ಪಿಟಿಐ ವಿಡಿಯೊಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಬಿಜೆಪಿ ಟೀಕೆಗಳಿಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ,‘ಯಾವುದೇ ನಿಯಮವು ತಮಿಳು ಅಕ್ಷರ ‘ರೂ’ ಅನ್ನು ಬಜೆಟ್ ಪ್ರತಿಗಳಲ್ಲಿ ಬಳಸುವುದನ್ನು ವಿರೋಧಿಸಿಲ್ಲ ಇಲ್ಲವೇ ತಡೆದಿಲ್ಲ. ಹೀಗಾಗಿ ಈ ಆಕ್ರೋಶ ಏಕೆ’ ಎಂದಿದ್ದಾರೆ.</p>.<p>ರೂಪಾಯಿ ಚಿಹ್ನೆಯನ್ನು 2010ರ ಜುಲೈ 15ರಂದು ಕೇಂದ್ರ ಸರ್ಕಾರ ಅಳಡಿಸಿಕೊಂಡಿದೆ.</p>.<h2>‘₹ ವಿನ್ಯಾಸಗೊಳಿಸಿದ್ದು ಡಿಕೆಎಂ ಶಾಸಕರ ಪುತ್ರ‘ </h2><p>‘ತಮಿಳು ಭಾಷಿಕ ವಿನ್ಯಾಸ ಮಾಡಿರುವ ರೂಪಾಯಿ ಚಿಹ್ನೆಯನ್ನು ಭಾರತದ ಕರೆನ್ಸಿಯಲ್ಲಿ ಅಳವಡಿಸಿಕೊಳ್ಳಲಾಗಿದೆ’ ಎಂದು ಅಣ್ಣಾಮಲೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ‘ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿರುವ ಉದಯಕುಮಾರ್ ಅವರು ಡಿಎಂಕೆಯ ಮಾಜಿ ಶಾಸಕರೊಬ್ಬರ ಪುತ್ರ. ಈಗ ಈ ಚಿಹ್ನೆಯನ್ನು ಬಳಸದಿರುವ ನೀವು ಎಂತಹ ಅಜ್ಞಾನಿ ಸ್ಟಾಲಿನ್ ಅವರೇ’ ಎಂದೂ ಅಣ್ಣಾಮಲೈ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವಿನ ಭಾಷಾ ವಿವಾದ ಸಮರ ಮುಂದುವರಿದಿದೆ. 2025–26ರ ರಾಜ್ಯ ಬಜೆಟ್ನ ಲಾಂಛನವನ್ನು ತಮಿಳುನಾಡು ಸರ್ಕಾರ ಗುರುವಾರ ಬಿಡುಗಡೆ ಮಾಡಿದ್ದು, ರೂಪಾಯಿ ಚಿಹ್ನೆಗೆ ಬದಲಾಗಿ ತಮಿಳು ಅಕ್ಷರ ಬಳಸಿದೆ.</p>.ತಮಿಳುನಾಡು, ಪೆರಿಯಾರ್ ಅವರನ್ನು ಕೇಂದ್ರ ಅವಮಾನಿಸಿದೆ: ಉದಯನಿಧಿ ಕಿಡಿ.<p>ಇದು ರಾಜ್ಯ ಬಿಜೆಪಿ ಘಟಕದ ಕಣ್ಣು ಕೆಂಪಾಗಿಸಿದೆ.</p><p>ತಮಿಳುನಾಡು ಹಣಕಾಸು ಸಚಿವ ತಂಗಂ ತೆನ್ನರಸು ಶುಕ್ರವಾರ 2025–26ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.</p><p>ಹೊಸ ಲಾಂಛನದಲ್ಲಿ ರೂಪಾಯಿ ಚಿಹ್ನೆ ಬದಲಿಗೆ ತಮಿಳು ಅಕ್ಷರ ‘ರೂ’ ಅನ್ನು ಬಳಸಲಾಗಿದೆ. ತಮಿಳಿನ ‘ರೂಬಾಯಿ’ಯ ಸಂಕ್ಷಿಪ್ತ ರೂಪವೇ ‘ರೂ’.</p>.ತ್ರಿಭಾಷಾ ಸೂತ್ರ ವಿಫಲ ಮಾದರಿ: ತಮಿಳುನಾಡು ಸಚಿವ ತ್ಯಾಗರಾಜನ್.<p>ಬಜೆಟ್ ಲಾಂಛನದಲ್ಲಿ ‘ಎಲ್ಲರಿಗೂ ಎಲ್ಲವೂ’ ಎನ್ನುವ ಅಡಿಬರಹ ಇದ್ದು, ಎಲ್ಲರನ್ನೂ ಒಳಗೊಳ್ಳುವುದರ ಸಂಕೇತ ಎಂದು ಡಿಎಂಕೆ ಸರ್ಕಾರ ಹೇಳಿದೆ.</p><p>ಸರ್ಕಾರದ ಈ ನಡೆಯನ್ನು ರಾಜ್ಯ ಬಿಜೆಪಿ ಘಟದ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ. </p>.ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.<p>‘ಡಿಎಂಕೆ ಸರ್ಕಾರದ 2025–26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ತಮಿಳು ವ್ಯಕ್ತಿ ನೀಡಿದ ರೂಪಾಯಿ ಚಿಹ್ನೆಯನ್ನು ಬದಲಿಸಿದೆ. ಆ ಚಿಹ್ನೆಯನ್ನು ಇಡೀ ಭಾರತ ಒಪ್ಪಿಕೊಂಡಿದೆಯಲ್ಲದೇ, ಕರೆನ್ಸಿಯಲ್ಲೂ ಸೇರಿಸಲಾಗಿದೆ. ರೂಪಾಯಿ ಚಿಹ್ನೆಯನ್ನು ರಚಿಸಿದ ಶ್ರೀ ಉದಯ್ ಕುಮಾರ್ ಅವರು ಡಿಎಂಕೆಯ ಮಾಜಿ ಶಾಸಕರ ಪುತ್ರ. ಸ್ಟಾಲಿನ್ ಅವರೇ ನೀವು ಎಷ್ಟು ಮೂರ್ಖರಾಗಿರಬಹುದು?’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p><p>ಪೋಸ್ಟ್ ಜೊತೆಗೆ ಬಜೆಟ್ನ ಲಾಂಛನವನ್ನೂ ಹಂಚಿಕೊಂಡಿದ್ದಾರೆ.</p> .ಮತ್ತೊಂದು ಭಾಷಾ ಸಮರಕ್ಕೆ ತಮಿಳುನಾಡು ಸಿದ್ಧ: ಸಿಎಂ ಸ್ಟಾಲಿನ್.<p>ಬಿಜೆಪಿಯ ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಕೂಡ, ರಾಜ್ಯ ಸರ್ಕಾರದ ಈ ನಡೆಯನ್ನು ಟೀಕಿಸಿದ್ದಾರೆ.</p>.<p>‘ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಅವರ ನೇತೃತ್ವದ ಸರ್ಕಾರದ ಈ ವರ್ತನೆ ಅಸಹ್ಯಕರ’ ಎಂದು ಅವರು ಪಿಟಿಐ ವಿಡಿಯೊಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಬಿಜೆಪಿ ಟೀಕೆಗಳಿಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ,‘ಯಾವುದೇ ನಿಯಮವು ತಮಿಳು ಅಕ್ಷರ ‘ರೂ’ ಅನ್ನು ಬಜೆಟ್ ಪ್ರತಿಗಳಲ್ಲಿ ಬಳಸುವುದನ್ನು ವಿರೋಧಿಸಿಲ್ಲ ಇಲ್ಲವೇ ತಡೆದಿಲ್ಲ. ಹೀಗಾಗಿ ಈ ಆಕ್ರೋಶ ಏಕೆ’ ಎಂದಿದ್ದಾರೆ.</p>.<p>ರೂಪಾಯಿ ಚಿಹ್ನೆಯನ್ನು 2010ರ ಜುಲೈ 15ರಂದು ಕೇಂದ್ರ ಸರ್ಕಾರ ಅಳಡಿಸಿಕೊಂಡಿದೆ.</p>.<h2>‘₹ ವಿನ್ಯಾಸಗೊಳಿಸಿದ್ದು ಡಿಕೆಎಂ ಶಾಸಕರ ಪುತ್ರ‘ </h2><p>‘ತಮಿಳು ಭಾಷಿಕ ವಿನ್ಯಾಸ ಮಾಡಿರುವ ರೂಪಾಯಿ ಚಿಹ್ನೆಯನ್ನು ಭಾರತದ ಕರೆನ್ಸಿಯಲ್ಲಿ ಅಳವಡಿಸಿಕೊಳ್ಳಲಾಗಿದೆ’ ಎಂದು ಅಣ್ಣಾಮಲೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ‘ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿರುವ ಉದಯಕುಮಾರ್ ಅವರು ಡಿಎಂಕೆಯ ಮಾಜಿ ಶಾಸಕರೊಬ್ಬರ ಪುತ್ರ. ಈಗ ಈ ಚಿಹ್ನೆಯನ್ನು ಬಳಸದಿರುವ ನೀವು ಎಂತಹ ಅಜ್ಞಾನಿ ಸ್ಟಾಲಿನ್ ಅವರೇ’ ಎಂದೂ ಅಣ್ಣಾಮಲೈ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>