<p><strong>ಠಾಣೆ(ಮಹಾರಾಷ್ಟ್ರ):</strong> ಇಲ್ಲಿನ ದೇಸಾಯಿ ಗ್ರಾಮದ ಬಳಿ ಸೇತುವೆ ಕೆಳಗೆ ಸಿಕ್ಕ ಸೂಟ್ಕೇಸ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಸಹಜೀವನ (ಲಿವ್–ಇನ್ ರಿಲೇಷನ್ಶಿಪ್) ಸಂಗಾತಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಪ್ರಿಯಾಂಕಾ ವಿಶ್ವಕರ್ಮ(22) ಕೊಲೆಯಾದ ಮಹಿಳೆ. ಆಕೆಯ ಶವ ಸೋಮವಾರ ಸೇತುವೆ ಕೆಳಗೆ ಪತ್ತೆಯಾಗಿತ್ತು. ಮೃತಳ ಮಣಿಕಟ್ಟಿನ ಮೇಲೆ ‘ಪಿ. ವಿ. ಎಸ್’ ಎಂದು ಹೆಚ್ಚೆ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸ್ಥಳೀಯ ಸಿಸಿಟಿವಿ ಸಹಾಯದಿಂದ ಆರೋಪಿ ವಿನೋದ್ ಶ್ರೀನಿವಾಸ್ ವಿಶ್ವಕರ್ಮನನ್ನು ಬಂಧಿಸಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಪ್ರಿಯಾಂಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.</p><p>ಕಳೆದ ಐದು ವರ್ಷಗಳಿಂದ ವಿನೋದ್ ಶ್ರೀನಿವಾಸ್ ಜೊತೆ ಪ್ರಿಯಾಂಕಾ ಸಹಜೀವನ ನಡೆಸುತ್ತಿದ್ದರು. ನವೆಂಬರ್ 21ರ ನಡುವೆ ಇಬ್ಬರ ನಡುವೆ ಜಗಳವಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ. </p><p>ಕೊಲೆಯಾದ ದಿನ ಶವವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪಿ, ಅದು ಕೊಳೆಯಲು ಪ್ರಾರಂಭಿಸಿ ದುರ್ವಾಸನೆ ಹರಡುತ್ತಿದ್ದಂತೆ, ಶವವನ್ನು ಸೂಟ್ಕೇಸ್ಗೆ ತುಂಬಿ ಸೇತುವೆಯ ಕೆಳಗೆ ಎಸೆದಿದ್ದಾನೆ.</p><p>ಆರೋಪಿ ವಿರುದ್ಧ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ(ಮಹಾರಾಷ್ಟ್ರ):</strong> ಇಲ್ಲಿನ ದೇಸಾಯಿ ಗ್ರಾಮದ ಬಳಿ ಸೇತುವೆ ಕೆಳಗೆ ಸಿಕ್ಕ ಸೂಟ್ಕೇಸ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಸಹಜೀವನ (ಲಿವ್–ಇನ್ ರಿಲೇಷನ್ಶಿಪ್) ಸಂಗಾತಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಪ್ರಿಯಾಂಕಾ ವಿಶ್ವಕರ್ಮ(22) ಕೊಲೆಯಾದ ಮಹಿಳೆ. ಆಕೆಯ ಶವ ಸೋಮವಾರ ಸೇತುವೆ ಕೆಳಗೆ ಪತ್ತೆಯಾಗಿತ್ತು. ಮೃತಳ ಮಣಿಕಟ್ಟಿನ ಮೇಲೆ ‘ಪಿ. ವಿ. ಎಸ್’ ಎಂದು ಹೆಚ್ಚೆ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸ್ಥಳೀಯ ಸಿಸಿಟಿವಿ ಸಹಾಯದಿಂದ ಆರೋಪಿ ವಿನೋದ್ ಶ್ರೀನಿವಾಸ್ ವಿಶ್ವಕರ್ಮನನ್ನು ಬಂಧಿಸಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಪ್ರಿಯಾಂಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.</p><p>ಕಳೆದ ಐದು ವರ್ಷಗಳಿಂದ ವಿನೋದ್ ಶ್ರೀನಿವಾಸ್ ಜೊತೆ ಪ್ರಿಯಾಂಕಾ ಸಹಜೀವನ ನಡೆಸುತ್ತಿದ್ದರು. ನವೆಂಬರ್ 21ರ ನಡುವೆ ಇಬ್ಬರ ನಡುವೆ ಜಗಳವಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ. </p><p>ಕೊಲೆಯಾದ ದಿನ ಶವವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪಿ, ಅದು ಕೊಳೆಯಲು ಪ್ರಾರಂಭಿಸಿ ದುರ್ವಾಸನೆ ಹರಡುತ್ತಿದ್ದಂತೆ, ಶವವನ್ನು ಸೂಟ್ಕೇಸ್ಗೆ ತುಂಬಿ ಸೇತುವೆಯ ಕೆಳಗೆ ಎಸೆದಿದ್ದಾನೆ.</p><p>ಆರೋಪಿ ವಿರುದ್ಧ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>