‘ಪೊಲೀಸರ ಸ್ಥಳ ನಿಯೋಜನೆ ಬದಲಾಯಿಸಿದ್ದೇ ಕಾಲ್ತುಳಿತಕ್ಕೆ ಕಾರಣ’
ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಜ.6ರಿಂದ 8 ವರೆಗೆ ಕುಪ್ಪಂನಲ್ಲಿ ಇದ್ದರು. ಅವರ ಕಾರ್ಯಕ್ರಮದ ಭದ್ರತೆಗಾಗಿ ಪೊಲೀಸರನ್ನು
ಕುಪ್ಪಂನಲ್ಲಿ ನಿಯೋಜನೆ ಮಾಡಿ, ತಿರುಪತಿಯಲ್ಲಿನ ಜನದಟ್ಟಣೆ ನಿರ್ವಹಣೆಗೆ ಕ್ರಮ ಕೈಗೊಳ್ಳ
ದಿರುವುದೇ ಕಾಲ್ತುಳಿತಕ್ಕೆ ಕಾರಣ ಎಂದು ವೈ.ಎಸ್.ಆರ್ ಕಾಂಗ್ರೆಸ್ ಮುಖ್ಯಸ್ಥ ವೈ.ಎಸ್.ಜಗನ್ ಮೋಹನ್ ರೆಡ್ಡಿ ಗುರುವಾರ ಆರೋಪಿಸಿದ್ದಾರೆ.
ಈ ಘಟನೆ ಕುರಿತು ಸರ್ಕಾರ, ಟಿಟಿಡಿ ಆಡಳಿತ ಮತ್ತು ಜಿಲ್ಲೆಯ ಅಧಿಕಾರಿಗಳಿಗೆ ಉತ್ತರದಾಯಿತ್ವ ನಿಗದಿ ಮಾಡಬೇಕು ಎಂದೂ ಆಗ್ರಹಿಸಿದ್ದಾರೆ.
ಭೇಟಿ: ತಿರುಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.