<p><strong>ಇಂಫಾಲ್/ಚುರಾಚಾಂದಪುರ</strong>: ಮಣಿಪುರದಲ್ಲಿ ನೂತನವಾಗಿ ರಚನೆಯಾದ ಸರ್ಕಾರದಲ್ಲಿ ಕುಕಿ ಸಮುದಾಯದ ಶಾಸಕರು ಭಾಗಿಯಾಗಿದ್ದನ್ನು ಖಂಡಿಸಿ ಕುಕಿ ಬುಡಕಟ್ಟು ಸಮುದಾಯದ ಎರಡು ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಚುರಾಚಾಂದಪುರ ಜಿಲ್ಲಾ ಬಂದ್ ಯಶಸ್ವಿಯಾಯಿತು.</p>.<p>ಕುಕಿ ಸಮುದಾಯದ ಪ್ರಾಬಲ್ಯ ಹೊಂದಿರುವ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ವಾಹನಗಳ ಸಂಚಾರ ಬಹುಪಾಲು ಸ್ಥಗಿತಗೊಂಡಿತ್ತು. ಇದರ ಹೊರತಾಗಿಯೂ ಓಡಾಡಿದ ವಾಹನಗಳನ್ನು ತಡೆದ ಸಂಘಟನೆಯ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದರು.</p>.<p class="title">‘ಜಿಲ್ಲೆಯ ಬಹುತೇಕ ಮಾರುಕಟ್ಟೆಗಳು ಸ್ಥಗಿತಗೊಂಡಿತ್ತು. ರಸ್ತೆಗಳು ಖಾಲಿ ಖಾಲಿಯಾಗಿದ್ದವು. ಶಾಲಾ– ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ತೀವ್ರ ಕಡಿಮೆಯಾಗಿತ್ತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p class="title">ಕುಕಿ ಚುರಾಚಾಂದಪುರ ವಿದ್ಯಾರ್ಥಿ ಸಂಘಟನೆಯು ಶುಕ್ರವಾರ ಮಧ್ಯರಾತ್ರಿಯಿಂದಲೇ ಇಡೀ ಜಿಲ್ಲೆಯ ಬಂದ್ಗೆ ಕರೆ ನೀಡಿತ್ತು. ಏಳು ಸಂಘಟನೆಗಳ ಜಂಟಿ ಒಕ್ಕೂಟ (ಜೆಎಫ್–7) ಕುಕಿ ಬಹುಸಂಖ್ಯಾತ ಪ್ರದೇಶಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಘೋಷಿಸಿತ್ತು. </p>.<p class="bodytext">‘ಜಿಲ್ಲಾ ಕೇಂದ್ರವಾದ ತುಯಿಬಾಂಗ್ ಪ್ರದೇಶದಲ್ಲಿ ಬಂದ್ ಹೆಚ್ಚು ಪರಿಣಾಮಕಾರಿಯಾಗಿತ್ತು. ಜಿಲ್ಲೆಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಕುಕಿ ಸಮುದಾಯದ 10 ಮಂದಿ ಶಾಸಕರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್/ಚುರಾಚಾಂದಪುರ</strong>: ಮಣಿಪುರದಲ್ಲಿ ನೂತನವಾಗಿ ರಚನೆಯಾದ ಸರ್ಕಾರದಲ್ಲಿ ಕುಕಿ ಸಮುದಾಯದ ಶಾಸಕರು ಭಾಗಿಯಾಗಿದ್ದನ್ನು ಖಂಡಿಸಿ ಕುಕಿ ಬುಡಕಟ್ಟು ಸಮುದಾಯದ ಎರಡು ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಚುರಾಚಾಂದಪುರ ಜಿಲ್ಲಾ ಬಂದ್ ಯಶಸ್ವಿಯಾಯಿತು.</p>.<p>ಕುಕಿ ಸಮುದಾಯದ ಪ್ರಾಬಲ್ಯ ಹೊಂದಿರುವ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ವಾಹನಗಳ ಸಂಚಾರ ಬಹುಪಾಲು ಸ್ಥಗಿತಗೊಂಡಿತ್ತು. ಇದರ ಹೊರತಾಗಿಯೂ ಓಡಾಡಿದ ವಾಹನಗಳನ್ನು ತಡೆದ ಸಂಘಟನೆಯ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದರು.</p>.<p class="title">‘ಜಿಲ್ಲೆಯ ಬಹುತೇಕ ಮಾರುಕಟ್ಟೆಗಳು ಸ್ಥಗಿತಗೊಂಡಿತ್ತು. ರಸ್ತೆಗಳು ಖಾಲಿ ಖಾಲಿಯಾಗಿದ್ದವು. ಶಾಲಾ– ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ತೀವ್ರ ಕಡಿಮೆಯಾಗಿತ್ತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p class="title">ಕುಕಿ ಚುರಾಚಾಂದಪುರ ವಿದ್ಯಾರ್ಥಿ ಸಂಘಟನೆಯು ಶುಕ್ರವಾರ ಮಧ್ಯರಾತ್ರಿಯಿಂದಲೇ ಇಡೀ ಜಿಲ್ಲೆಯ ಬಂದ್ಗೆ ಕರೆ ನೀಡಿತ್ತು. ಏಳು ಸಂಘಟನೆಗಳ ಜಂಟಿ ಒಕ್ಕೂಟ (ಜೆಎಫ್–7) ಕುಕಿ ಬಹುಸಂಖ್ಯಾತ ಪ್ರದೇಶಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಘೋಷಿಸಿತ್ತು. </p>.<p class="bodytext">‘ಜಿಲ್ಲಾ ಕೇಂದ್ರವಾದ ತುಯಿಬಾಂಗ್ ಪ್ರದೇಶದಲ್ಲಿ ಬಂದ್ ಹೆಚ್ಚು ಪರಿಣಾಮಕಾರಿಯಾಗಿತ್ತು. ಜಿಲ್ಲೆಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಕುಕಿ ಸಮುದಾಯದ 10 ಮಂದಿ ಶಾಸಕರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>