ಲಖನೌ: ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸುವುದಾಗಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗುರಿಯಾಗಿಸಿ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ತಾಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಬಂಧಿತರು. ಉತ್ತರಪ್ರದೇಶದ ಎಸ್ಟಿಎಫ್, ಗೋಮತಿನಗರದ ವಿಭೂತಿಖಂಡ ಪ್ರದೇಶದಲ್ಲಿ ಈ ಇಬ್ಬರನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರು ಗೊಂಡ ನಗರದ ನಿವಾಸಿಗಳಾಗಿದ್ದು, ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆ ನಡೆಯುತ್ತಿದೆ ಎಂದೂ ತಿಳಿಸಿದ್ದಾರೆ.