<p><strong>ಬೆಂಗಳೂರು</strong>: ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಜನ ಮೃತಪಟ್ಟಿರುವ ಘಟನೆ ದುರಾದೃಷ್ಟಕರವಾದದ್ದು ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.</p><p>ಟೆಲಿಕಾನ್ಫರೆನ್ಸ್ ಮೂಲಕ ಅವಘಡದ ಮಾಹಿತಿ ಪಡೆದಿರುವ ಮುಖ್ಯಮಂತ್ರಿಯವರು, ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅವರೇ ಎಲ್ಲ ಮಾಹಿತಿ ನೀಡಲಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.</p><p>ಇಂದು ಸಂಜೆಯ ವೇಳೆಗೆ ಪೊಲೀಸರ ಸಂಪೂರ್ಣ ತನಿಖಾ ವರದಿ ಟಿಟಿಡಿ ಮುಂದೆ ಇರಲಿದೆ. ಅದನ್ನು ನೋಡಿಕೊಂಡು ಏನು ಮಾಡಬೇಕು ಎಂಬುದರ ಬಗ್ಗೆ ಸಿಎಂ ಸಮ್ಮುಖದಲ್ಲಿ ತೀರ್ಮಾನಿಸುತ್ತೇವೆ ಎಂದಿದ್ದಾರೆ.</p>.<p>ಮೃತರಲ್ಲಿ ಕೆಲವರು ತಮಿಳುನಾಡು ಮತ್ತು ಕೆಲವರು ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ನಾಯ್ಡು ಹೇಳಿದರು.</p><p>ಮೃತರಲ್ಲಿ ಒಬ್ಬರ ಗುರುತು ಪತ್ತೆಯಾಗಿದ್ದು, ಇನ್ನೂ ಐವರ ಗುರುತು ಪತ್ತೆಯಾಗಬೇಕಿದೆ ಎಂದು ವಿವರಿಸಿದ್ದಾರೆ.</p><p>ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.</p><p>ಈ ಕಾಲ್ತುಳಿತ ಪ್ರಕರಣವು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿತು ಎಂದು ಹಲವು ಭಕ್ತಾದಿಗಳು ಬೇಸರ ವ್ಯಕ್ತಪಡಿಸಿದ್ದಾರೆ.</p>.ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಭಕ್ತರು ಸಾವು.ತಿರುಪತಿಯಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ ಹೇರಿದ ಟಿಟಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಜನ ಮೃತಪಟ್ಟಿರುವ ಘಟನೆ ದುರಾದೃಷ್ಟಕರವಾದದ್ದು ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.</p><p>ಟೆಲಿಕಾನ್ಫರೆನ್ಸ್ ಮೂಲಕ ಅವಘಡದ ಮಾಹಿತಿ ಪಡೆದಿರುವ ಮುಖ್ಯಮಂತ್ರಿಯವರು, ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅವರೇ ಎಲ್ಲ ಮಾಹಿತಿ ನೀಡಲಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.</p><p>ಇಂದು ಸಂಜೆಯ ವೇಳೆಗೆ ಪೊಲೀಸರ ಸಂಪೂರ್ಣ ತನಿಖಾ ವರದಿ ಟಿಟಿಡಿ ಮುಂದೆ ಇರಲಿದೆ. ಅದನ್ನು ನೋಡಿಕೊಂಡು ಏನು ಮಾಡಬೇಕು ಎಂಬುದರ ಬಗ್ಗೆ ಸಿಎಂ ಸಮ್ಮುಖದಲ್ಲಿ ತೀರ್ಮಾನಿಸುತ್ತೇವೆ ಎಂದಿದ್ದಾರೆ.</p>.<p>ಮೃತರಲ್ಲಿ ಕೆಲವರು ತಮಿಳುನಾಡು ಮತ್ತು ಕೆಲವರು ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ನಾಯ್ಡು ಹೇಳಿದರು.</p><p>ಮೃತರಲ್ಲಿ ಒಬ್ಬರ ಗುರುತು ಪತ್ತೆಯಾಗಿದ್ದು, ಇನ್ನೂ ಐವರ ಗುರುತು ಪತ್ತೆಯಾಗಬೇಕಿದೆ ಎಂದು ವಿವರಿಸಿದ್ದಾರೆ.</p><p>ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.</p><p>ಈ ಕಾಲ್ತುಳಿತ ಪ್ರಕರಣವು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿತು ಎಂದು ಹಲವು ಭಕ್ತಾದಿಗಳು ಬೇಸರ ವ್ಯಕ್ತಪಡಿಸಿದ್ದಾರೆ.</p>.ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಭಕ್ತರು ಸಾವು.ತಿರುಪತಿಯಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ ಹೇರಿದ ಟಿಟಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>