<p><strong>ಅಲಿಗಢ</strong>: ಹೋಳಿ ಹಬ್ಬದ ದಿನ ಮಸೀದಿಗೆ ಹೋಗುವ ಮುಸ್ಲಿಂ ಪುರುಷರು ಟಾರ್ಪಲ್ ಮುಚ್ಚಿಕೊಳ್ಳಲಿ ಎಂದು ಉತ್ತರ ಪ್ರದೇಶ ಸಚಿವ ರಘುರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.</p><p>‘ಹೋಳಿ ಬಣ್ಣ ಮೈಗೆ ಸೋಕಬಾರದು ಎಂದಿದ್ದರೆ ಟಾರ್ಪಲ್ ಹಾಕಿಕೊಂಡು ಶುಕ್ರವಾರದ ಪ್ರಾರ್ಥನೆಗೆ ಹೋಗಲಿ’ ಎಂದು ಸಚಿವರು ಹೇಳಿದ್ದಾರೆ.</p><p>ಈ ಬಗ್ಗೆ ಸುದ್ದಿಗಾರರಗೊಂದಿಗೆ ಮಾತನಾಡಿದ ಸಿಂಗ್, ‘ಸನಾತನಿಗಳಿಗೆ ಹೋಳಿ ಹಬ್ಬ ವರ್ಷಕ್ಕೆ ಒಂದು ಬಾರಿ ಬರುವ ಹಬ್ಬವಾಗಿದೆ. ಮಸೀದಿಗಳ ಸಮೀಪವಿರುವ ಕೆಲವು ನಿರ್ಬಂಧಿತ ಸ್ಥಳಗಳಲ್ಲಿ ಹೋಳಿ ಆಡಬಾರದು ಎಂದು ನಿರೀಕ್ಷಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ.</p><p>‘ಹೋಳಿ ಆಚರಣೆಗೆ ಅಡ್ಡಿಪಡಿಸುವವರಿಗೆ ಮೂರು ಆಯ್ಕೆಗಳಿವೆ; ಜೈಲಿಗೆ ಹೋಗುವುದು, ರಾಜ್ಯ ತೊರೆಯುವುದು ಅಥವಾ ಯಮರಾಜನ ಬಳಿಗೆ ತೆರಳುವುದು’ ಎಂದು ಹೇಳಿದ್ದಾರೆ.</p><p>‘ಹೋಳಿ ದಿನ ಮುಸ್ಲಿಮರು ಮನೆಯಲ್ಲಿಯೇ ಹಬ್ಬವನ್ನು ಆಚರಿಸಿಕೊಳ್ಳಲಿ’ ಎಂದು ಸಂಭಾಲ್ ಉಪ ಪೊಲೀಸ್ ವರಿಷ್ಠಾಧಿಕಾರಿ ಅನುಜ್ ಕುಮಾರ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವರಿಂದ ಈ ಹೇಳಿಕೆ ಬಂದಿದೆ.</p><p>ಅನುಜ್ ಕುಮಾರ್ ಅವರ ಹೇಳಿಕೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಬೆಂಬಲಿಸಿದ್ದು, ಹೋಳಿ ಹಬ್ಬ ವರ್ಷಕ್ಕೆ ಒಂದೇ ಬಾರಿ ಬರುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಿಗಢ</strong>: ಹೋಳಿ ಹಬ್ಬದ ದಿನ ಮಸೀದಿಗೆ ಹೋಗುವ ಮುಸ್ಲಿಂ ಪುರುಷರು ಟಾರ್ಪಲ್ ಮುಚ್ಚಿಕೊಳ್ಳಲಿ ಎಂದು ಉತ್ತರ ಪ್ರದೇಶ ಸಚಿವ ರಘುರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.</p><p>‘ಹೋಳಿ ಬಣ್ಣ ಮೈಗೆ ಸೋಕಬಾರದು ಎಂದಿದ್ದರೆ ಟಾರ್ಪಲ್ ಹಾಕಿಕೊಂಡು ಶುಕ್ರವಾರದ ಪ್ರಾರ್ಥನೆಗೆ ಹೋಗಲಿ’ ಎಂದು ಸಚಿವರು ಹೇಳಿದ್ದಾರೆ.</p><p>ಈ ಬಗ್ಗೆ ಸುದ್ದಿಗಾರರಗೊಂದಿಗೆ ಮಾತನಾಡಿದ ಸಿಂಗ್, ‘ಸನಾತನಿಗಳಿಗೆ ಹೋಳಿ ಹಬ್ಬ ವರ್ಷಕ್ಕೆ ಒಂದು ಬಾರಿ ಬರುವ ಹಬ್ಬವಾಗಿದೆ. ಮಸೀದಿಗಳ ಸಮೀಪವಿರುವ ಕೆಲವು ನಿರ್ಬಂಧಿತ ಸ್ಥಳಗಳಲ್ಲಿ ಹೋಳಿ ಆಡಬಾರದು ಎಂದು ನಿರೀಕ್ಷಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ.</p><p>‘ಹೋಳಿ ಆಚರಣೆಗೆ ಅಡ್ಡಿಪಡಿಸುವವರಿಗೆ ಮೂರು ಆಯ್ಕೆಗಳಿವೆ; ಜೈಲಿಗೆ ಹೋಗುವುದು, ರಾಜ್ಯ ತೊರೆಯುವುದು ಅಥವಾ ಯಮರಾಜನ ಬಳಿಗೆ ತೆರಳುವುದು’ ಎಂದು ಹೇಳಿದ್ದಾರೆ.</p><p>‘ಹೋಳಿ ದಿನ ಮುಸ್ಲಿಮರು ಮನೆಯಲ್ಲಿಯೇ ಹಬ್ಬವನ್ನು ಆಚರಿಸಿಕೊಳ್ಳಲಿ’ ಎಂದು ಸಂಭಾಲ್ ಉಪ ಪೊಲೀಸ್ ವರಿಷ್ಠಾಧಿಕಾರಿ ಅನುಜ್ ಕುಮಾರ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವರಿಂದ ಈ ಹೇಳಿಕೆ ಬಂದಿದೆ.</p><p>ಅನುಜ್ ಕುಮಾರ್ ಅವರ ಹೇಳಿಕೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಬೆಂಬಲಿಸಿದ್ದು, ಹೋಳಿ ಹಬ್ಬ ವರ್ಷಕ್ಕೆ ಒಂದೇ ಬಾರಿ ಬರುವುದು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>