<p><strong>ಮುಂಬೈ</strong>: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭಾರತೀಯ ರಾಜಕಾರಣದ ‘ಎರಡನೇ ನೆಹರೂ’ ಎಂದು ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವುತ್ ಬಣ್ಣಿಸಿದರು.</p><p>ವಾಜಪೇಯಿ ಅವರ ಜನ್ಮ ಶತಾಮಾನೋತ್ಸವದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ‘ರಾಜಧರ್ಮಕ್ಕೆ ಧಕ್ಕೆ ಬಂದಾಗಲೆಲ್ಲಾ ದೇಶವು ವಾಜಪೇಯಿ ಅವರನ್ನು ನೆನಪಿಸಿಕೊಳ್ಳುತ್ತದೆ’ ಎಂದು ಹೇಳಿದರು.</p><p>‘ಇಂದಿನ ಬಿಜೆಪಿಯು ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪರಂಪರೆಯನ್ನು ಕೆಡಿಸುತ್ತಿದೆ. ಆದರೆ, ವಾಜಪೇಯಿ ಅವರು ದೇಶದ ರಾಜಕೀಯದ ‘ಎರಡನೇ ನೆಹರೂ’ ಆಗಿದ್ದರು. ಅವರು ಕಾಂಗ್ರೆಸ್ಸೇತರ ಪಕ್ಷಗಳ ನೆಹರೂ’ ಎಂದು ಹೇಳಿದರು.</p><p>‘ವಾಜಪೇಯಿ ಅವರು ಕಠಿಣ ಹಿಂದುತ್ವವಾದಿಯಾಗಿದ್ದರೂ ದೇಶ ಎಲ್ಲರಿಗೂ ಸೇರಿದ್ದು ಎಂದು ನಂಬಿದ್ದರು. ಅವರ ನೇತೃತ್ವದಲ್ಲಿ ಬಿಜೆಪಿ ಎಲ್ಲರನ್ನೂ ಒಳಗೊಂಡಿತ್ತು. ಪಂಡಿತ್ ನೆಹರೂ ಕೂಡ ವಾಜಪೇಯಿ ಅವರನ್ನು ಮೆಚ್ಚಿ ಆಶೀರ್ವದಿಸಿದ್ದರು’ ಎಂದು ರಾವುತ್ ತಿಳಿಸಿದರು.</p><p>‘ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರು ವಾಜಪೇಯಿ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದರು ಮತ್ತು ಅವರ ಮಾತಿಗೆ ಬೆಲೆ ಕೊಡುತ್ತಿದ್ದರು’ ಎಂದು ನೆನಪಿಸಿಕೊಂಡರು.</p><p>ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಸ್ವತಂತ್ರವಾಗಿ ಸ್ಪರ್ಧಿಸುತ್ತದೆಯೇ ಎಂಬ ಪ್ರಶ್ನೆಗೆ, ‘ಮೊದಲು ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿ... ನಂತರ ನಿಮಗೆ ತಿಳಿಯುತ್ತದೆ. ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿದ್ದೇವೆ’ ಎಂದಷ್ಟೇ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭಾರತೀಯ ರಾಜಕಾರಣದ ‘ಎರಡನೇ ನೆಹರೂ’ ಎಂದು ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವುತ್ ಬಣ್ಣಿಸಿದರು.</p><p>ವಾಜಪೇಯಿ ಅವರ ಜನ್ಮ ಶತಾಮಾನೋತ್ಸವದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ‘ರಾಜಧರ್ಮಕ್ಕೆ ಧಕ್ಕೆ ಬಂದಾಗಲೆಲ್ಲಾ ದೇಶವು ವಾಜಪೇಯಿ ಅವರನ್ನು ನೆನಪಿಸಿಕೊಳ್ಳುತ್ತದೆ’ ಎಂದು ಹೇಳಿದರು.</p><p>‘ಇಂದಿನ ಬಿಜೆಪಿಯು ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪರಂಪರೆಯನ್ನು ಕೆಡಿಸುತ್ತಿದೆ. ಆದರೆ, ವಾಜಪೇಯಿ ಅವರು ದೇಶದ ರಾಜಕೀಯದ ‘ಎರಡನೇ ನೆಹರೂ’ ಆಗಿದ್ದರು. ಅವರು ಕಾಂಗ್ರೆಸ್ಸೇತರ ಪಕ್ಷಗಳ ನೆಹರೂ’ ಎಂದು ಹೇಳಿದರು.</p><p>‘ವಾಜಪೇಯಿ ಅವರು ಕಠಿಣ ಹಿಂದುತ್ವವಾದಿಯಾಗಿದ್ದರೂ ದೇಶ ಎಲ್ಲರಿಗೂ ಸೇರಿದ್ದು ಎಂದು ನಂಬಿದ್ದರು. ಅವರ ನೇತೃತ್ವದಲ್ಲಿ ಬಿಜೆಪಿ ಎಲ್ಲರನ್ನೂ ಒಳಗೊಂಡಿತ್ತು. ಪಂಡಿತ್ ನೆಹರೂ ಕೂಡ ವಾಜಪೇಯಿ ಅವರನ್ನು ಮೆಚ್ಚಿ ಆಶೀರ್ವದಿಸಿದ್ದರು’ ಎಂದು ರಾವುತ್ ತಿಳಿಸಿದರು.</p><p>‘ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರು ವಾಜಪೇಯಿ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದರು ಮತ್ತು ಅವರ ಮಾತಿಗೆ ಬೆಲೆ ಕೊಡುತ್ತಿದ್ದರು’ ಎಂದು ನೆನಪಿಸಿಕೊಂಡರು.</p><p>ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಸ್ವತಂತ್ರವಾಗಿ ಸ್ಪರ್ಧಿಸುತ್ತದೆಯೇ ಎಂಬ ಪ್ರಶ್ನೆಗೆ, ‘ಮೊದಲು ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿ... ನಂತರ ನಿಮಗೆ ತಿಳಿಯುತ್ತದೆ. ಚುನಾವಣೆಗೆ ಸಿದ್ಧತೆ ಪ್ರಾರಂಭಿಸಿದ್ದೇವೆ’ ಎಂದಷ್ಟೇ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>