ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ನಡೆದಿದ್ದ ಆಂದೋಲನದಲ್ಲಿ ಈ ಇಬ್ಬರೂ ನಾಯಕರು ಮುಂಚೂಣಿಯಲ್ಲಿದ್ದರು. ಆದರೆ, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರತಿನಿಧಿಗಳು ಕೋರಿದ್ದು, ವಿವಾದಕ್ಕೆ ಕಾರಣವಾಗಿತ್ತು. ಇದನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ವಿಎಚ್ಪಿ ಮುಂದಾಗಿದ್ದು, ಈ ಇಬ್ಬರು ನಾಯಕರಿಗೂ ಆಹ್ವಾನ ನೀಡಿದೆ.