<p><strong>ನವದೆಹಲಿ:</strong> ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿ ಹಾಕಿದೆ. </p><p>ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ ಆರೋಪವು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಅದು ಹೇಳಿದೆ.</p><p>'ರಾಹುಲ್ ಆರೋಪವು ನಿರಾಧಾರವಾಗಿದ್ದು, ಅವರು ಅಂದುಕೊಂಡಂತೆ ಆನ್ಲೈನ್ನಲ್ಲಿ ಸಾರ್ವಜನಿಕರಿಗೆ ಯಾವುದೇ ಮತವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಮತದಾರರಿಗೆ ಮಾಹಿತಿ ನೀಡದೇ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ' ಎಂದು ಹೇಳಿದೆ. </p><p>'ಮತ ಕಳ್ಳತನ' ಆರೋಪ ಸಂಬಂಧ ಇಂದು (ಗುರುವಾರ) ಮತ್ತೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಚುನಾವಣಾ ಆಯೋಗವು ರಕ್ಷಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿ ಹಾಕಲಾಗುತ್ತಿದೆ. ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು' ಎಂದು ರಾಹುಲ್ ಆರೋಪಿಸಿದ್ದಾರೆ.</p> .ಆಳಂದದಲ್ಲಿ 6,018 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಯತ್ನ: ರಾಹುಲ್ .ಮತ ಕಳ್ಳತನ | ಹೈಡ್ರೋಜನ್ ಬಾಂಬ್ ಇನ್ನು ಬರಬೇಕಷ್ಟೇ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿ ಹಾಕಿದೆ. </p><p>ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ ಆರೋಪವು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಅದು ಹೇಳಿದೆ.</p><p>'ರಾಹುಲ್ ಆರೋಪವು ನಿರಾಧಾರವಾಗಿದ್ದು, ಅವರು ಅಂದುಕೊಂಡಂತೆ ಆನ್ಲೈನ್ನಲ್ಲಿ ಸಾರ್ವಜನಿಕರಿಗೆ ಯಾವುದೇ ಮತವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಮತದಾರರಿಗೆ ಮಾಹಿತಿ ನೀಡದೇ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ' ಎಂದು ಹೇಳಿದೆ. </p><p>'ಮತ ಕಳ್ಳತನ' ಆರೋಪ ಸಂಬಂಧ ಇಂದು (ಗುರುವಾರ) ಮತ್ತೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಚುನಾವಣಾ ಆಯೋಗವು ರಕ್ಷಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿ ಹಾಕಲಾಗುತ್ತಿದೆ. ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು' ಎಂದು ರಾಹುಲ್ ಆರೋಪಿಸಿದ್ದಾರೆ.</p> .ಆಳಂದದಲ್ಲಿ 6,018 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಯತ್ನ: ರಾಹುಲ್ .ಮತ ಕಳ್ಳತನ | ಹೈಡ್ರೋಜನ್ ಬಾಂಬ್ ಇನ್ನು ಬರಬೇಕಷ್ಟೇ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>