<p><strong>ಕೋಲ್ಕತ್ತ:</strong> ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಅನುಷ್ಠಾನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ತಿಳಿಸಿದರು.</p>.<p>ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಲ್ಪಸಂಖ್ಯಾತ ಜನರನ್ನು ಮತ್ತು ಅವರ ಆಸ್ತಿಯನ್ನು ರಕ್ಷಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ವಕ್ಫ್ ತಿದ್ದುಪಡಿ ಕಾಯ್ದೆಯಿಂದ ನಿಮಗೆ ತೊಂದರೆಯಾಗಿದೆ ಎಂದು ನನಗೆ ಗೊತ್ತು. ನಂಬಿಕೆ ಇಡಿ; ಬಂಗಾಳದಲ್ಲಿ ಏನೂ ಆಗುವುದಿಲ್ಲ’ ಎಂದು ಹೇಳಿದರು.</p>.<p>ಮುರ್ಶಿದಾಬಾದ್ನಲ್ಲಿ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಡೆದ ಗಲಭೆಯನ್ನು ಪರೋಕ್ಷವಾಗಿ ಉಲ್ಲೇಖಿಸಿ, ‘ರಾಜಕೀಯ ಚಳವಳಿ ರೂಪಿಸಲು ಪ್ರಚೋದಿಸುವವರತ್ತ ಗಮನ ನೀಡಬೇಡಿ’ ಎಂದು ಕರೆ ನೀಡಿದರು.</p>.<p> ‘ಬಂಗಾಳ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಭಾರತ ಎಲ್ಲವೂ ಒಟ್ಟಿಗೇ ಇದ್ದವು, ಬಳಿಕ ವಿಭಜನೆ ಆದವು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಇರುವವರನ್ನು ರಕ್ಷಿಸುವುದು ನಮ್ಮ ಕರ್ತವ್ಯ’ ಎಂದರು.</p>.<p>ನಾನು ಎಲ್ಲ ಧರ್ಮಗಳ ಧಾರ್ಮಿಕ ಸ್ಥಳಗಳಿಗೂ ಭೇಟಿ ನೀಡುತ್ತೇನೆ. ನನ್ನನ್ನು ಕೊಂದರೂ ಸರಿ; ಈ ವಿಷಯದಲ್ಲಿ ನನ್ನ ಬದಲಾಯಿಸಲು ಸಾಧ್ಯವಿಲ್ಲ. ಪ್ರತಿ ಧರ್ಮ, ಜಾತಿ, ಪಂಥವೂ ಮಾನವೀಯತೆಗಾಗಿಯೇ ಪ್ರಾರ್ಥಿಸುತ್ತದೆ ಎಂದು ಹೇಳಿದರು.</p>.<p>ವಕ್ಫ್ ಮಸೂದೆಯು ಲೋಕಸಭೆಯಲ್ಲಿ ಏಪ್ರಿಲ್ 3ರಂದು ಮತ್ತು ರಾಜ್ಯಸಭೆಯಲ್ಲಿ ಏಪ್ರಿಲ್ 4ರಂದು ಅಂಗೀಕಾರವಾಗಿತ್ತು. ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಮಸೂದೆಗೆ ಅಂಕಿತ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಅನುಷ್ಠಾನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ತಿಳಿಸಿದರು.</p>.<p>ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಲ್ಪಸಂಖ್ಯಾತ ಜನರನ್ನು ಮತ್ತು ಅವರ ಆಸ್ತಿಯನ್ನು ರಕ್ಷಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ವಕ್ಫ್ ತಿದ್ದುಪಡಿ ಕಾಯ್ದೆಯಿಂದ ನಿಮಗೆ ತೊಂದರೆಯಾಗಿದೆ ಎಂದು ನನಗೆ ಗೊತ್ತು. ನಂಬಿಕೆ ಇಡಿ; ಬಂಗಾಳದಲ್ಲಿ ಏನೂ ಆಗುವುದಿಲ್ಲ’ ಎಂದು ಹೇಳಿದರು.</p>.<p>ಮುರ್ಶಿದಾಬಾದ್ನಲ್ಲಿ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಡೆದ ಗಲಭೆಯನ್ನು ಪರೋಕ್ಷವಾಗಿ ಉಲ್ಲೇಖಿಸಿ, ‘ರಾಜಕೀಯ ಚಳವಳಿ ರೂಪಿಸಲು ಪ್ರಚೋದಿಸುವವರತ್ತ ಗಮನ ನೀಡಬೇಡಿ’ ಎಂದು ಕರೆ ನೀಡಿದರು.</p>.<p> ‘ಬಂಗಾಳ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಭಾರತ ಎಲ್ಲವೂ ಒಟ್ಟಿಗೇ ಇದ್ದವು, ಬಳಿಕ ವಿಭಜನೆ ಆದವು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಇರುವವರನ್ನು ರಕ್ಷಿಸುವುದು ನಮ್ಮ ಕರ್ತವ್ಯ’ ಎಂದರು.</p>.<p>ನಾನು ಎಲ್ಲ ಧರ್ಮಗಳ ಧಾರ್ಮಿಕ ಸ್ಥಳಗಳಿಗೂ ಭೇಟಿ ನೀಡುತ್ತೇನೆ. ನನ್ನನ್ನು ಕೊಂದರೂ ಸರಿ; ಈ ವಿಷಯದಲ್ಲಿ ನನ್ನ ಬದಲಾಯಿಸಲು ಸಾಧ್ಯವಿಲ್ಲ. ಪ್ರತಿ ಧರ್ಮ, ಜಾತಿ, ಪಂಥವೂ ಮಾನವೀಯತೆಗಾಗಿಯೇ ಪ್ರಾರ್ಥಿಸುತ್ತದೆ ಎಂದು ಹೇಳಿದರು.</p>.<p>ವಕ್ಫ್ ಮಸೂದೆಯು ಲೋಕಸಭೆಯಲ್ಲಿ ಏಪ್ರಿಲ್ 3ರಂದು ಮತ್ತು ರಾಜ್ಯಸಭೆಯಲ್ಲಿ ಏಪ್ರಿಲ್ 4ರಂದು ಅಂಗೀಕಾರವಾಗಿತ್ತು. ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಮಸೂದೆಗೆ ಅಂಕಿತ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>