<p> <strong>ಬುದೌನ್:</strong> ಬಡ ಮತ್ತು ಶೋಷಿತ ಮುಸ್ಲಿಮರ ಹಿತದೃಷ್ಟಿಯಿಂದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ತರಲಾಗಿದೆ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ ಬಿ.ಎಲ್. ವರ್ಮಾ, ಸುಪ್ರೀಂ ಕೋರ್ಟ್ನಲ್ಲಿ ಅದನ್ನು ಪ್ರಶ್ನಿಸುವುದರಿಂದ ಪ್ರಯೋಜನವಾಗದು ಎಂದು ಭಾನುವಾರ ಹೇಳಿದ್ದಾರೆ. </p>.ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಮಾನತ್ ಉಲ್ಲಾ ಖಾನ್.<p>ಮಸೂದೆಗೆ ಸಂಸತ್ತಿನಲ್ಲಿ ಅಗಾಧವಾದ ಬೆಂಬಲ ದೊರೆತಿದೆ. ಅದು ನರೇಂದ್ರ ಮೋದಿ ಸರ್ಕಾರದ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ವರ್ಮಾ ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ.</p><p>‘ವಕ್ಫ್ (ತಿದ್ದುಪಡಿ) ಮಸೂದೆಯನ್ನು ಭಾರಿ ಬಹುಮತದಿಂದ ಅಂಗೀಕರಿಸಲಾಗಿದೆ. ಕೆಲವರು ಇದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಹೋಗಬಹುದು, ಆದರೆ ಏನೂ ಆಗುವುದಿಲ್ಲ’ ಎಂದು ಅವರು ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.ವಕ್ಫ್ ವಸೂದೆ: ಭವಿಷ್ಯದಲ್ಲಿ ಇತರೆ ಸಮುದಾಯಗಳ ಮೇಲಿನ ದಾಳಿಗೆ ಮುನ್ಸೂಚನೆ; ರಾಹುಲ್. <p>ಮಸೂದೆಯಿಂದ ಮುಸ್ಲಿಂ ಸಮುದಾಯದ ದುರ್ಬಲ ವರ್ಗಗಳಿಗೆ, ವಿಶೇಷವಾಗಿ ಬಡವರಿಗೆ ಮತ್ತು ಪಾಸ್ಮಾಂಡಾ ಮುಸ್ಲಿಮರಿಗೆ ಪ್ರಯೋಜನವಾಗಲಿದೆ ಎಂದು ವರ್ಮಾ ಒತ್ತಿ ಹೇಳಿದ್ದಾರೆ.</p><p>‘ಈ ಕಾನೂನು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸುತ್ತದೆ. ಅಂತಿಮವಾಗಿ ಸವಲತ್ತುರಹಿತ ಮುಸ್ಲಿಮರಿಗೆ ಇದು ಉಪಯೋಗ ಆಗಲಿದೆ’ ಎಂದು ಹೇಳಿದ್ದಾರೆ.</p>.ನಾವು ಅಧಿಕಾರಕ್ಕೆ ಬಂದರೆ ವಕ್ಫ್ ಮಸೂದೆ ಕಸದ ಬುಟ್ಟಿ ಸೇರಲಿದೆ: ತೇಜಸ್ವಿ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಬುದೌನ್:</strong> ಬಡ ಮತ್ತು ಶೋಷಿತ ಮುಸ್ಲಿಮರ ಹಿತದೃಷ್ಟಿಯಿಂದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ತರಲಾಗಿದೆ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ ಬಿ.ಎಲ್. ವರ್ಮಾ, ಸುಪ್ರೀಂ ಕೋರ್ಟ್ನಲ್ಲಿ ಅದನ್ನು ಪ್ರಶ್ನಿಸುವುದರಿಂದ ಪ್ರಯೋಜನವಾಗದು ಎಂದು ಭಾನುವಾರ ಹೇಳಿದ್ದಾರೆ. </p>.ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಮಾನತ್ ಉಲ್ಲಾ ಖಾನ್.<p>ಮಸೂದೆಗೆ ಸಂಸತ್ತಿನಲ್ಲಿ ಅಗಾಧವಾದ ಬೆಂಬಲ ದೊರೆತಿದೆ. ಅದು ನರೇಂದ್ರ ಮೋದಿ ಸರ್ಕಾರದ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ವರ್ಮಾ ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ.</p><p>‘ವಕ್ಫ್ (ತಿದ್ದುಪಡಿ) ಮಸೂದೆಯನ್ನು ಭಾರಿ ಬಹುಮತದಿಂದ ಅಂಗೀಕರಿಸಲಾಗಿದೆ. ಕೆಲವರು ಇದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಹೋಗಬಹುದು, ಆದರೆ ಏನೂ ಆಗುವುದಿಲ್ಲ’ ಎಂದು ಅವರು ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.ವಕ್ಫ್ ವಸೂದೆ: ಭವಿಷ್ಯದಲ್ಲಿ ಇತರೆ ಸಮುದಾಯಗಳ ಮೇಲಿನ ದಾಳಿಗೆ ಮುನ್ಸೂಚನೆ; ರಾಹುಲ್. <p>ಮಸೂದೆಯಿಂದ ಮುಸ್ಲಿಂ ಸಮುದಾಯದ ದುರ್ಬಲ ವರ್ಗಗಳಿಗೆ, ವಿಶೇಷವಾಗಿ ಬಡವರಿಗೆ ಮತ್ತು ಪಾಸ್ಮಾಂಡಾ ಮುಸ್ಲಿಮರಿಗೆ ಪ್ರಯೋಜನವಾಗಲಿದೆ ಎಂದು ವರ್ಮಾ ಒತ್ತಿ ಹೇಳಿದ್ದಾರೆ.</p><p>‘ಈ ಕಾನೂನು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸುತ್ತದೆ. ಅಂತಿಮವಾಗಿ ಸವಲತ್ತುರಹಿತ ಮುಸ್ಲಿಮರಿಗೆ ಇದು ಉಪಯೋಗ ಆಗಲಿದೆ’ ಎಂದು ಹೇಳಿದ್ದಾರೆ.</p>.ನಾವು ಅಧಿಕಾರಕ್ಕೆ ಬಂದರೆ ವಕ್ಫ್ ಮಸೂದೆ ಕಸದ ಬುಟ್ಟಿ ಸೇರಲಿದೆ: ತೇಜಸ್ವಿ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>