<p><strong>ತಿರುವನಂತಪುರ:</strong> ವಯನಾಡ್ ಭೂಕುಸಿತದಲ್ಲಿ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರದಿಂದ ಇದುವರೆಗೆ ಯಾವುದೇ ನೆರವು ಬಂದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಹೇಳಿದ್ದಾರೆ.</p><p>ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಲ್ಲಿ ಸಂಗ್ರಹವಾಗಿರುವ ₹712.98 ಕೋಟಿ ಹಣವನ್ನು ಸಂತ್ರಸ್ತರಿಗೆ ನೆರವಾಗಲು ಬಳಸಿಕೊಳ್ಳಲಾಗುವುದು ಎಂದು ವಿಜಯನ್ ಹೇಳಿದ್ದಾರೆ.</p><p>ರಾಜ್ಯ ಸರ್ಕಾರವು ಆರಂಭದಲ್ಲಿ ಪುನರ್ವಸತಿ ಕಾರ್ಯಕ್ಕೆ ಕೇಂದ್ರದಿಂದ ₹2,221 ಕೋಟಿ ಕೇಳಿತ್ತು. ಆದರೆ ವಿಪತ್ತು ನಂತರದ ಅಗತ್ಯಗಳ ಪರಿಶೀಲನಾ ವರದಿಯ ಪ್ರಕಾರ ಹೆಚ್ಚಿನ ಮೊತ್ತವನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>‘ವಯನಾಡ್ ದುರಂತವನ್ನು ಕೇಂದ್ರ ಸರ್ಕಾರವು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿರುವ ಕಾರಣ ದೇಶದ ಯಾವುದೇ ಸಂಸದ ₹1 ಕೋಟಿಯವರೆಗೆ ನೆರವು ನೀಡಬಹುದು. ನೆರವು ಕೋರಿ ನಾನು ಎಲ್ಲ ಸಂಸದರಿಗೆ ಪತ್ರ ಬರೆದಿದ್ದೇನೆ’ ಎಂದು ಅವರು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದ್ದಾರೆ.</p>.ವಯನಾಡ್ ಸಂತ್ರಸ್ತರಿಗೆ ಟೌನ್ಶಿಪ್ ನಿರ್ಮಿಸಲು 2 ಜಾಗಗಳು ಅಂತಿಮ: ಕೇರಳ ಸಚಿವ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಯನಾಡ್ ಭೂಕುಸಿತದಲ್ಲಿ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರದಿಂದ ಇದುವರೆಗೆ ಯಾವುದೇ ನೆರವು ಬಂದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಹೇಳಿದ್ದಾರೆ.</p><p>ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಲ್ಲಿ ಸಂಗ್ರಹವಾಗಿರುವ ₹712.98 ಕೋಟಿ ಹಣವನ್ನು ಸಂತ್ರಸ್ತರಿಗೆ ನೆರವಾಗಲು ಬಳಸಿಕೊಳ್ಳಲಾಗುವುದು ಎಂದು ವಿಜಯನ್ ಹೇಳಿದ್ದಾರೆ.</p><p>ರಾಜ್ಯ ಸರ್ಕಾರವು ಆರಂಭದಲ್ಲಿ ಪುನರ್ವಸತಿ ಕಾರ್ಯಕ್ಕೆ ಕೇಂದ್ರದಿಂದ ₹2,221 ಕೋಟಿ ಕೇಳಿತ್ತು. ಆದರೆ ವಿಪತ್ತು ನಂತರದ ಅಗತ್ಯಗಳ ಪರಿಶೀಲನಾ ವರದಿಯ ಪ್ರಕಾರ ಹೆಚ್ಚಿನ ಮೊತ್ತವನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>‘ವಯನಾಡ್ ದುರಂತವನ್ನು ಕೇಂದ್ರ ಸರ್ಕಾರವು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿರುವ ಕಾರಣ ದೇಶದ ಯಾವುದೇ ಸಂಸದ ₹1 ಕೋಟಿಯವರೆಗೆ ನೆರವು ನೀಡಬಹುದು. ನೆರವು ಕೋರಿ ನಾನು ಎಲ್ಲ ಸಂಸದರಿಗೆ ಪತ್ರ ಬರೆದಿದ್ದೇನೆ’ ಎಂದು ಅವರು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕರೊಬ್ಬರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದ್ದಾರೆ.</p>.ವಯನಾಡ್ ಸಂತ್ರಸ್ತರಿಗೆ ಟೌನ್ಶಿಪ್ ನಿರ್ಮಿಸಲು 2 ಜಾಗಗಳು ಅಂತಿಮ: ಕೇರಳ ಸಚಿವ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>