<p><strong>ಚೆನ್ನೈ</strong>: ‘ಮತ್ತೊಂದು ಭಾಷಾ ಸಮರಕ್ಕೆ ರಾಜ್ಯ ಸಿದ್ಧವಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p><p>ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ‘ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಹೋರಾಡಲು ನಾವು ಸದಾ ಸಿದ್ಧ’ ಎಂದರು.</p><p>ಹಿಂದಿ ಹೇರಿಕೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಆಡಳಿತರೂಢ ಡಿಎಂಕೆ ಸರ್ಕಾರ ಕೋಟಿ ಕೊಟ್ಟರೂ ಎನ್ಇಪಿ ಜಾರಿಗೆ ತರುವುದಿಲ್ಲ ಎಂದು ಹೇಳಿತ್ತು.</p><p><strong>‘ಕೇಂದ್ರದಿಂದ ಕ್ಷೇತ್ರ ಪುನರ್ ವಿಂಗಡಣೆ ಬೆದರಿಕೆ’</strong></p><p>‘ಎಲ್ಲಾ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ನಂತರ ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುವ ಬೆದರಿಕೆ ಎದುರಿಸುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.</p><p>ಈ ವಿಷಯದ ಬಗ್ಗೆ ಚರ್ಚಿಸಲು ಮಾರ್ಚ್ 5ರಂದು ಸರ್ವ ಪಕ್ಷ ಸಭೆ ಕರೆಯಲು ತಿರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.</p><p>ಕ್ಷೇತ್ರ ಪುನರ್ ವಿಂಗಡಣೆಯ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದರು.</p><p>‘ರಾಷ್ಟ್ರೀಯ ಶಿಕ್ಷಣ ನೀತಿ, ನೀಟ್ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲು ಸಾಕಷ್ಟು ಸಂಖ್ಯೆಯ ಸಂಸದರ ಅಗತ್ಯವಿದೆ. ಆದರೆ ಇದಕ್ಕೆ ಕ್ಷೇತ್ರ ಪುನರ್ ವಿಂಗಡಣೆ ಅಡ್ಡಿಯಾಗುತ್ತದೆ’ ಎಂದೂ ಹೇಳಿದರು.</p><p>‘ಜನಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳುವ ಸ್ಥಿತಿ ಇಂದು ನಿರ್ಮಾಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ನಂತರ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳಲಿದ್ದು, ಲೋಕಾಸಭಾ ಸದಸ್ಯರ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ’ ಎಂದು ಆತಂಕ ಹೊರಹಾಕಿದರು.</p><p>‘ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆ ಮಾಡುವ ಮೂಲಕ ತಮಿಳರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಇದು ತಮಿಳುನಾಡಿನ ಜನರ ಹಕ್ಕಿನ ಪ್ರಶ್ನೆಯಾಗಿದ್ದು, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ದನಿ ಎತ್ತಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ಮತ್ತೊಂದು ಭಾಷಾ ಸಮರಕ್ಕೆ ರಾಜ್ಯ ಸಿದ್ಧವಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p><p>ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ‘ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಹೋರಾಡಲು ನಾವು ಸದಾ ಸಿದ್ಧ’ ಎಂದರು.</p><p>ಹಿಂದಿ ಹೇರಿಕೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಆಡಳಿತರೂಢ ಡಿಎಂಕೆ ಸರ್ಕಾರ ಕೋಟಿ ಕೊಟ್ಟರೂ ಎನ್ಇಪಿ ಜಾರಿಗೆ ತರುವುದಿಲ್ಲ ಎಂದು ಹೇಳಿತ್ತು.</p><p><strong>‘ಕೇಂದ್ರದಿಂದ ಕ್ಷೇತ್ರ ಪುನರ್ ವಿಂಗಡಣೆ ಬೆದರಿಕೆ’</strong></p><p>‘ಎಲ್ಲಾ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ನಂತರ ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುವ ಬೆದರಿಕೆ ಎದುರಿಸುತ್ತಿದೆ’ ಎಂದು ಸ್ಟಾಲಿನ್ ಹೇಳಿದರು.</p><p>ಈ ವಿಷಯದ ಬಗ್ಗೆ ಚರ್ಚಿಸಲು ಮಾರ್ಚ್ 5ರಂದು ಸರ್ವ ಪಕ್ಷ ಸಭೆ ಕರೆಯಲು ತಿರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.</p><p>ಕ್ಷೇತ್ರ ಪುನರ್ ವಿಂಗಡಣೆಯ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದರು.</p><p>‘ರಾಷ್ಟ್ರೀಯ ಶಿಕ್ಷಣ ನೀತಿ, ನೀಟ್ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲು ಸಾಕಷ್ಟು ಸಂಖ್ಯೆಯ ಸಂಸದರ ಅಗತ್ಯವಿದೆ. ಆದರೆ ಇದಕ್ಕೆ ಕ್ಷೇತ್ರ ಪುನರ್ ವಿಂಗಡಣೆ ಅಡ್ಡಿಯಾಗುತ್ತದೆ’ ಎಂದೂ ಹೇಳಿದರು.</p><p>‘ಜನಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳುವ ಸ್ಥಿತಿ ಇಂದು ನಿರ್ಮಾಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ನಂತರ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳಲಿದ್ದು, ಲೋಕಾಸಭಾ ಸದಸ್ಯರ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ’ ಎಂದು ಆತಂಕ ಹೊರಹಾಕಿದರು.</p><p>‘ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆ ಮಾಡುವ ಮೂಲಕ ತಮಿಳರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಇದು ತಮಿಳುನಾಡಿನ ಜನರ ಹಕ್ಕಿನ ಪ್ರಶ್ನೆಯಾಗಿದ್ದು, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ದನಿ ಎತ್ತಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>