<p><strong>ಶ್ರೀನಗರ</strong>: ದೆಹಲಿ ಸ್ಫೋಟದ ತನಿಖೆ ಭಾಗವಾಗಿ ಪೊಲೀಸರು ವಿಚಾರಣೆ ನಡೆಸಿದ ತರುವಾಯ ಬೆಂಕಿ ಹಚ್ಚಿಕೊಂಡಿದ್ದ ಖಾಜಿಗಂದ್ನ ಒಣಹಣ್ಣು (ಡ್ರೈ ಫ್ರೂಟ್) ವ್ಯಾಪಾರಿ ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತ ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ. ತೀವ್ರ ಸುಟ್ಟಗಾಯಗೊಂಡಿದ್ದ ಅವರು ಭಾನುವಾರ ರಾತ್ರಿ ಮೃತಪಟ್ಟರು ಎಂದು ವೈದ್ಯರು ಖಚಿತಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ವಾನಿ ಮತ್ತು ಅವರ ಪುತ್ರ ಜಾಸಿರ್ ಬಿಲಾಲ್ ಅವರನ್ನು ವೈಟ್ ಕಾಲರ್ ಭಯೋತ್ಪಾದಕ ಜಾಲದ ನಂಟಿನ ಶಂಕೆ ಮೇಲೆ ವಿಚಾರಣೆ ನಡೆಸಲಾಗಿತ್ತು. ಭಾನುವಾರ ಮಧ್ಯಾಹ್ನವೇ ವಾನಿ ಅವರನ್ನು ಬಿಟ್ಟು ಕಳಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಜಾಸಿರ್ ಪೊಲೀಸ್ ವಶದಲ್ಲಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.<p>ಸ್ಫೋಟದ ಪ್ರಮುಖ ಸೂತ್ರಧಾರಿ ಎನ್ನಲಾದ ಡಾ.ಮುಜಫರ್ ರಾತರ್ ನಿವಾಸದ ಸಮೀಪ ವಾನಿ ಅವರ ಮನೆಯೂ ಇತ್ತು. ಹೀಗಾಗಿ ವಿಚಾರಣೆ ನಡೆದಿದೆ. ಮುಜಫರ್ ಅಫ್ಗಾನಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆತನ ಸೋದರ ಡಾ.ಅದೀಲ್ ರಾತರ್ ಅವರನ್ನು ಉತ್ತರಪ್ರದೇಶದ ಸಹರಾನ್ಪುರದಲ್ಲಿ ಬಂಧಿಸಲಾಗಿದೆ.</p>.<p>ವಾನಿ ಬೆಂಕಿ ಹಚ್ಚಿಕೊಂಡು ಮೃತಪಟ್ಟ ಘಟನೆ ಸಂಬಂಧ ತನಿಖಾಧಿಕಾರಿಗಳು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಘಟನೆಯಿಂದ ಗಾಬರಿಗೊಂಡಿರುವ ಖಾಜಿಗಂದ್ ಜನರು, ಸ್ಥಳೀಯ ಅಧಿಕಾರಿಗಳು ಕಾರಣ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>‘ಇದು ಸಾಮಾನ್ಯವಾಗಿ ನಡೆಸುವ ಕಾನೂನು ಪ್ರಕ್ರಿಯೆಯಾಗಿದೆ. ಪ್ರಕರಣದ ಒಳಹೊಕ್ಕು ಪರಿಶೀಲಿಸಿದಾಗ ಮತ್ತಷ್ಟು ಮಾಹಿತಿ ಬಯಲಾಗಲಿದೆ’ ಎಂದು ಸ್ಥಳೀಯ ಪೊಲೀಸ್ ಮೂಲಗಳು ಹೇಳುತ್ತಿವೆ.</p> .ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ದೆಹಲಿ ಸ್ಫೋಟದ ತನಿಖೆ ಭಾಗವಾಗಿ ಪೊಲೀಸರು ವಿಚಾರಣೆ ನಡೆಸಿದ ತರುವಾಯ ಬೆಂಕಿ ಹಚ್ಚಿಕೊಂಡಿದ್ದ ಖಾಜಿಗಂದ್ನ ಒಣಹಣ್ಣು (ಡ್ರೈ ಫ್ರೂಟ್) ವ್ಯಾಪಾರಿ ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೃತ ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ. ತೀವ್ರ ಸುಟ್ಟಗಾಯಗೊಂಡಿದ್ದ ಅವರು ಭಾನುವಾರ ರಾತ್ರಿ ಮೃತಪಟ್ಟರು ಎಂದು ವೈದ್ಯರು ಖಚಿತಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ವಾನಿ ಮತ್ತು ಅವರ ಪುತ್ರ ಜಾಸಿರ್ ಬಿಲಾಲ್ ಅವರನ್ನು ವೈಟ್ ಕಾಲರ್ ಭಯೋತ್ಪಾದಕ ಜಾಲದ ನಂಟಿನ ಶಂಕೆ ಮೇಲೆ ವಿಚಾರಣೆ ನಡೆಸಲಾಗಿತ್ತು. ಭಾನುವಾರ ಮಧ್ಯಾಹ್ನವೇ ವಾನಿ ಅವರನ್ನು ಬಿಟ್ಟು ಕಳಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಜಾಸಿರ್ ಪೊಲೀಸ್ ವಶದಲ್ಲಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.<p>ಸ್ಫೋಟದ ಪ್ರಮುಖ ಸೂತ್ರಧಾರಿ ಎನ್ನಲಾದ ಡಾ.ಮುಜಫರ್ ರಾತರ್ ನಿವಾಸದ ಸಮೀಪ ವಾನಿ ಅವರ ಮನೆಯೂ ಇತ್ತು. ಹೀಗಾಗಿ ವಿಚಾರಣೆ ನಡೆದಿದೆ. ಮುಜಫರ್ ಅಫ್ಗಾನಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆತನ ಸೋದರ ಡಾ.ಅದೀಲ್ ರಾತರ್ ಅವರನ್ನು ಉತ್ತರಪ್ರದೇಶದ ಸಹರಾನ್ಪುರದಲ್ಲಿ ಬಂಧಿಸಲಾಗಿದೆ.</p>.<p>ವಾನಿ ಬೆಂಕಿ ಹಚ್ಚಿಕೊಂಡು ಮೃತಪಟ್ಟ ಘಟನೆ ಸಂಬಂಧ ತನಿಖಾಧಿಕಾರಿಗಳು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಘಟನೆಯಿಂದ ಗಾಬರಿಗೊಂಡಿರುವ ಖಾಜಿಗಂದ್ ಜನರು, ಸ್ಥಳೀಯ ಅಧಿಕಾರಿಗಳು ಕಾರಣ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>‘ಇದು ಸಾಮಾನ್ಯವಾಗಿ ನಡೆಸುವ ಕಾನೂನು ಪ್ರಕ್ರಿಯೆಯಾಗಿದೆ. ಪ್ರಕರಣದ ಒಳಹೊಕ್ಕು ಪರಿಶೀಲಿಸಿದಾಗ ಮತ್ತಷ್ಟು ಮಾಹಿತಿ ಬಯಲಾಗಲಿದೆ’ ಎಂದು ಸ್ಥಳೀಯ ಪೊಲೀಸ್ ಮೂಲಗಳು ಹೇಳುತ್ತಿವೆ.</p> .ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>