<p><strong>ನವದೆಹಲಿ</strong>: ಯಾರನ್ನಾದರೂ ಅವರ ಸೈದ್ಧಾಂತಿಕ ವಿಚಾರಕ್ಕಾಗಿ ಜೈಲಿಗೆ ಹಾಕಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪೊಲೀಸರಿಗೆ ಸುಪ್ರೀಂಕೋರ್ಟ್ ನಿನ್ನೆ ಜಾಡಿಸಿದೆ.</p><p>2022ರಲ್ಲಿ ಕೇರಳದಲ್ಲಿ ನಡೆದಿದ್ದ ಆರ್ಎಸ್ಎಸ್ ಕಾರ್ಯಕರ್ತ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಎನ್ಐಎ ಮೇಲೆ ಅಸಮಾಧಾನ ವ್ಯಕ್ತಪಡಿಸಿತು.</p><p>ಇತ್ತೀಚೆಗೆ ಸೈದ್ಧಾಂತಿಕ ವಿಚಾರಕ್ಕಾಗಿ ವ್ಯಕ್ತಿಗಳನ್ನು ಜೈಲಿಗೆ ಹಾಕುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಆದರೆ, ಇದು ಸರಿಯಾದ ನಡವಳಿಕೆ ಅಲ್ಲ ಎಂದು ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ಆರೋಪಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಅಭಯ್ ಒಕಾ ಹಾಗೂ ಉಜ್ಜಲ್ ಭುಯಾನ್ ಅವರ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿರುವ ಆರೋಪಿಯ ನೇರ ಪಾತ್ರವಿಲ್ಲ. ಹೀಗಾಗಿ ಜಾಮೀನು ನೀಡಬಹುದು ಎಂದು ಆದೇಶ ನೀಡಿದೆ.</p><p>ಶ್ರೀನಿವಾಸನ್ ಹತ್ಯೆ ಪ್ರಕರಣವನ್ನು 2022 ಡಿಸೆಂಬರ್ನಲ್ಲಿ ಕೇಂದ್ರ ಸರ್ಕಾರ ಎನ್ಐಎಗೆ ವಹಿಸಿತ್ತು. ತನಿಖೆ ನಡೆಸಿದ್ದ ಎನ್ಐಎ, 26 ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಇದರಲ್ಲಿ 9 ಆರೋಪಿಗಳನ್ನು ಹೊರತುಪಡಿಸಿ ಉಳಿದ 17 ಆರೋಪಿಗಳಿಗೆ ಕೇರಳ ಹೈಕೋರ್ಟ್ 2024ರ ಜೂನ್ನಲ್ಲಿ ಜಾಮೀನು ಮಂಜೂರು ಮಾಡಿತ್ತು.</p><p>ಉಳಿದ 9 ಆರೋಪಿಗಳಲ್ಲಿ ಕೆಲವರು ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದಾರೆ. ಇದರಲ್ಲಿ ಕೇರಳ ಪಿಎಫ್ಐ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಯಾರನ್ನಾದರೂ ಅವರ ಸೈದ್ಧಾಂತಿಕ ವಿಚಾರಕ್ಕಾಗಿ ಜೈಲಿಗೆ ಹಾಕಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪೊಲೀಸರಿಗೆ ಸುಪ್ರೀಂಕೋರ್ಟ್ ನಿನ್ನೆ ಜಾಡಿಸಿದೆ.</p><p>2022ರಲ್ಲಿ ಕೇರಳದಲ್ಲಿ ನಡೆದಿದ್ದ ಆರ್ಎಸ್ಎಸ್ ಕಾರ್ಯಕರ್ತ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಎನ್ಐಎ ಮೇಲೆ ಅಸಮಾಧಾನ ವ್ಯಕ್ತಪಡಿಸಿತು.</p><p>ಇತ್ತೀಚೆಗೆ ಸೈದ್ಧಾಂತಿಕ ವಿಚಾರಕ್ಕಾಗಿ ವ್ಯಕ್ತಿಗಳನ್ನು ಜೈಲಿಗೆ ಹಾಕುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಆದರೆ, ಇದು ಸರಿಯಾದ ನಡವಳಿಕೆ ಅಲ್ಲ ಎಂದು ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ಆರೋಪಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಅಭಯ್ ಒಕಾ ಹಾಗೂ ಉಜ್ಜಲ್ ಭುಯಾನ್ ಅವರ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿರುವ ಆರೋಪಿಯ ನೇರ ಪಾತ್ರವಿಲ್ಲ. ಹೀಗಾಗಿ ಜಾಮೀನು ನೀಡಬಹುದು ಎಂದು ಆದೇಶ ನೀಡಿದೆ.</p><p>ಶ್ರೀನಿವಾಸನ್ ಹತ್ಯೆ ಪ್ರಕರಣವನ್ನು 2022 ಡಿಸೆಂಬರ್ನಲ್ಲಿ ಕೇಂದ್ರ ಸರ್ಕಾರ ಎನ್ಐಎಗೆ ವಹಿಸಿತ್ತು. ತನಿಖೆ ನಡೆಸಿದ್ದ ಎನ್ಐಎ, 26 ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಇದರಲ್ಲಿ 9 ಆರೋಪಿಗಳನ್ನು ಹೊರತುಪಡಿಸಿ ಉಳಿದ 17 ಆರೋಪಿಗಳಿಗೆ ಕೇರಳ ಹೈಕೋರ್ಟ್ 2024ರ ಜೂನ್ನಲ್ಲಿ ಜಾಮೀನು ಮಂಜೂರು ಮಾಡಿತ್ತು.</p><p>ಉಳಿದ 9 ಆರೋಪಿಗಳಲ್ಲಿ ಕೆಲವರು ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದಾರೆ. ಇದರಲ್ಲಿ ಕೇರಳ ಪಿಎಫ್ಐ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಆರೋಪಿಗೆ ಜಾಮೀನು ಮಂಜೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>