<p><strong>ಗುವಾಹಟಿ:</strong> 'ಮನುಷ್ಯರು ಪಾಪ ಮಾಡಿದ್ದರೆ ಅವರಿಗೆ ಕ್ಯಾನ್ಸರ್ ಬರುತ್ತದೆ' -ಹೀಗೆ ಹೇಳಿದ್ದು ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಸರ್ಮಾ.<br /> ಮಂಗಳವಾರ ಹೊಸತಾಗಿ ಉದ್ಯೋಗಕ್ಕೆ ಸೇರ್ಪಡೆಯಾದ ಶಾಲಾಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಪಾಪ. ದೇವರ ನ್ಯಾಯಾಲಯದಲ್ಲಿ ಯಾರೊಬ್ಬರಿಗೂ ಶಿಕ್ಷೆಯಾಗದೇ ಇರುವುದಿಲ್ಲ. ಕೆಲವರು ಕ್ಯಾನ್ಸರ್ಗೊಳಗಾಗುತ್ತಾರೆ, ಇನ್ನು ಕೆಲವರು ಅಪಘಾತದಲ್ಲಿ ಸಾವಿಗೀಡಾಗುತ್ತಾರೆ. ಇದೆಲ್ಲವೂ ಪಾಪದ ಫಲ ಎಂದಿದ್ದಾರೆ.</p>.<p>ಬಿಸ್ವಾ ಅವರ ಮಾತನ್ನು ಖಂಡಿಸಿದ ಎಐಯುಡಿಎಫ್, ವಿಜ್ಞಾನ ಮತ್ತು ತಂತ್ರಜ್ಞಾನದ ಈ ಯುಗದಲ್ಲಿ ಸಚಿವರು ಈ ರೀತಿ ಹೇಳಿರುವುದು ಹಾಸ್ಯಾಸ್ಪದ. ಕ್ಯಾನ್ಸರ್ ತಡೆಗಟ್ಟುವುದಕ್ಕಾಗಿ ಕೆಲವು ವರ್ಷಗಳ ಹಿಂದೆಯೇ ಸರ್ಮಾ ಅವರು ತಂಬಾಕು ನಿಷೇಧ ಕಾನೂನು ತಂದಿದ್ದರು. ಇದೀಗ ಅವರು ಹೇಳಿರುವ ಮಾತುಗಳು ಕ್ಯಾನ್ಸರ್ ರೋಗಿಗಳಿಗೆ ನೋವುಂಟು ಮಾಡುತ್ತದೆ ಎಂದು ಎಐಯುಡಿಎಫ್ ವಕ್ತಾರ ಅಮಿನುಲ್ ಇಸ್ಲಾಂ ಹೇಳಿದ್ದಾರೆ.</p>.<p>ಸರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಒಬ್ಬ ವ್ಯಕ್ತಿ ಪಕ್ಷದಿಂದ ಪಕ್ಷಕ್ಕೆ ಜಿಗಿದರೆ ಹೀಗಾಗುತ್ತದೆ ಟ್ವೀಟ್ ಮಾಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> 'ಮನುಷ್ಯರು ಪಾಪ ಮಾಡಿದ್ದರೆ ಅವರಿಗೆ ಕ್ಯಾನ್ಸರ್ ಬರುತ್ತದೆ' -ಹೀಗೆ ಹೇಳಿದ್ದು ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಸರ್ಮಾ.<br /> ಮಂಗಳವಾರ ಹೊಸತಾಗಿ ಉದ್ಯೋಗಕ್ಕೆ ಸೇರ್ಪಡೆಯಾದ ಶಾಲಾಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಪಾಪ. ದೇವರ ನ್ಯಾಯಾಲಯದಲ್ಲಿ ಯಾರೊಬ್ಬರಿಗೂ ಶಿಕ್ಷೆಯಾಗದೇ ಇರುವುದಿಲ್ಲ. ಕೆಲವರು ಕ್ಯಾನ್ಸರ್ಗೊಳಗಾಗುತ್ತಾರೆ, ಇನ್ನು ಕೆಲವರು ಅಪಘಾತದಲ್ಲಿ ಸಾವಿಗೀಡಾಗುತ್ತಾರೆ. ಇದೆಲ್ಲವೂ ಪಾಪದ ಫಲ ಎಂದಿದ್ದಾರೆ.</p>.<p>ಬಿಸ್ವಾ ಅವರ ಮಾತನ್ನು ಖಂಡಿಸಿದ ಎಐಯುಡಿಎಫ್, ವಿಜ್ಞಾನ ಮತ್ತು ತಂತ್ರಜ್ಞಾನದ ಈ ಯುಗದಲ್ಲಿ ಸಚಿವರು ಈ ರೀತಿ ಹೇಳಿರುವುದು ಹಾಸ್ಯಾಸ್ಪದ. ಕ್ಯಾನ್ಸರ್ ತಡೆಗಟ್ಟುವುದಕ್ಕಾಗಿ ಕೆಲವು ವರ್ಷಗಳ ಹಿಂದೆಯೇ ಸರ್ಮಾ ಅವರು ತಂಬಾಕು ನಿಷೇಧ ಕಾನೂನು ತಂದಿದ್ದರು. ಇದೀಗ ಅವರು ಹೇಳಿರುವ ಮಾತುಗಳು ಕ್ಯಾನ್ಸರ್ ರೋಗಿಗಳಿಗೆ ನೋವುಂಟು ಮಾಡುತ್ತದೆ ಎಂದು ಎಐಯುಡಿಎಫ್ ವಕ್ತಾರ ಅಮಿನುಲ್ ಇಸ್ಲಾಂ ಹೇಳಿದ್ದಾರೆ.</p>.<p>ಸರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಒಬ್ಬ ವ್ಯಕ್ತಿ ಪಕ್ಷದಿಂದ ಪಕ್ಷಕ್ಕೆ ಜಿಗಿದರೆ ಹೀಗಾಗುತ್ತದೆ ಟ್ವೀಟ್ ಮಾಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>