<p><strong>ಮುಂಬೈ: </strong>ಇಲ್ಲಿನ ಎಲ್ಫಿನ್ಸ್ಟನ್ ರೋಡ್ ಮತ್ತು ಪರೇಲ್ ರೈಲು ನಿಲ್ದಾಣಗಳ ಮಧ್ಯೆ ಸಂಪರ್ಕ ಕಲ್ಪಿಸುವ ಪಾದಚಾರಿ ಸೇತುವೆಯ ಮೇಲೆ ಶುಕ್ರವಾರ ಬೆಳಿಗ್ಗೆ ಕಾಲ್ತುಳಿತ ಸಂಭವಿಸಿ 23 ಮಂದಿ ಮೃತಪಟ್ಟಿದ್ದಾರೆ. 39 ಜನರು ಗಾಯಗೊಂಡಿದ್ದಾರೆ.</p>.<p>ಮೃತರಲ್ಲಿ 14 ಪುರುಷರು, 11 ವರ್ಷದ ಒಬ್ಬ ಬಾಲಕ ಮತ್ತು ಎಂಟು ಮಹಿಳೆಯರು ಸೇರಿದ್ದಾರೆ. ಎಂಟು ಮಹಿಳೆಯರಲ್ಲಿ ಇಬ್ಬರು ಮಂಗಳೂರಿನವರು.</p>.<p>ಮಳೆ ಸುರಿಯುತ್ತಿದ್ದುದ್ದರಿಂದ ತುಂಬಾ ಜನ ಸೇತುವೆಯ ಚಾವಣಿಯ ಆಶ್ರಯ ಪಡೆದಿದ್ದರು. ಅಷ್ಟರಲ್ಲೇ ಎರಡೂ ನಿಲ್ದಾಣಗಳಿಗೆ ಐದು ರೈಲುಗಳು ಬಂದವು. ಅವುಗಳಿಂದ ಇಳಿದ ಪ್ರಯಾಣಿಕರು ಸೇತುವೆಯತ್ತ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆದರೆ ಕಾಲ್ತುಳಿತಕ್ಕೆ ‘ಇದೇ ಕಾರಣ’ ಎಂದು ರೈಲ್ವೆ ಪೊಲೀಸರಾಗಲೀ, ಪೊಲೀಸರಾಗಲೀ ದೃಢಪಡಿಸಿಲ್ಲ. ರೈಲ್ವೆ ಸಚಿವ ಪೀಯೂಷ್ ಗೋಯೆಲ್ ಅವರು ಅವಘಡದ ತನಿಖೆ ನಡೆಸಲು ಉನ್ನತಾಧಿಕಾರಿಗಳ ತಂಡವನ್ನು ರಚಿಸಿದ್ದಾರೆ. ಜತೆಗೆ ಮುಂಬೈ ನಗರದ 136 ರೈಲು ನಿಲ್ದಾಣಗಳ ಸಾಮರ್ಥ್ಯ ಪರಿಶೀಲನೆ ನಡೆಸುವಂತೆ ಆದೇಶಿಸಿದ್ದಾರೆ.</p>.<p>ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯ ತಲಾ ₹ 5 ಲಕ್ಷ ಪರಿಹಾರ ಘೋಷಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಇಲ್ಲಿನ ಎಲ್ಫಿನ್ಸ್ಟನ್ ರೋಡ್ ಮತ್ತು ಪರೇಲ್ ರೈಲು ನಿಲ್ದಾಣಗಳ ಮಧ್ಯೆ ಸಂಪರ್ಕ ಕಲ್ಪಿಸುವ ಪಾದಚಾರಿ ಸೇತುವೆಯ ಮೇಲೆ ಶುಕ್ರವಾರ ಬೆಳಿಗ್ಗೆ ಕಾಲ್ತುಳಿತ ಸಂಭವಿಸಿ 23 ಮಂದಿ ಮೃತಪಟ್ಟಿದ್ದಾರೆ. 39 ಜನರು ಗಾಯಗೊಂಡಿದ್ದಾರೆ.</p>.<p>ಮೃತರಲ್ಲಿ 14 ಪುರುಷರು, 11 ವರ್ಷದ ಒಬ್ಬ ಬಾಲಕ ಮತ್ತು ಎಂಟು ಮಹಿಳೆಯರು ಸೇರಿದ್ದಾರೆ. ಎಂಟು ಮಹಿಳೆಯರಲ್ಲಿ ಇಬ್ಬರು ಮಂಗಳೂರಿನವರು.</p>.<p>ಮಳೆ ಸುರಿಯುತ್ತಿದ್ದುದ್ದರಿಂದ ತುಂಬಾ ಜನ ಸೇತುವೆಯ ಚಾವಣಿಯ ಆಶ್ರಯ ಪಡೆದಿದ್ದರು. ಅಷ್ಟರಲ್ಲೇ ಎರಡೂ ನಿಲ್ದಾಣಗಳಿಗೆ ಐದು ರೈಲುಗಳು ಬಂದವು. ಅವುಗಳಿಂದ ಇಳಿದ ಪ್ರಯಾಣಿಕರು ಸೇತುವೆಯತ್ತ ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಗಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಆದರೆ ಕಾಲ್ತುಳಿತಕ್ಕೆ ‘ಇದೇ ಕಾರಣ’ ಎಂದು ರೈಲ್ವೆ ಪೊಲೀಸರಾಗಲೀ, ಪೊಲೀಸರಾಗಲೀ ದೃಢಪಡಿಸಿಲ್ಲ. ರೈಲ್ವೆ ಸಚಿವ ಪೀಯೂಷ್ ಗೋಯೆಲ್ ಅವರು ಅವಘಡದ ತನಿಖೆ ನಡೆಸಲು ಉನ್ನತಾಧಿಕಾರಿಗಳ ತಂಡವನ್ನು ರಚಿಸಿದ್ದಾರೆ. ಜತೆಗೆ ಮುಂಬೈ ನಗರದ 136 ರೈಲು ನಿಲ್ದಾಣಗಳ ಸಾಮರ್ಥ್ಯ ಪರಿಶೀಲನೆ ನಡೆಸುವಂತೆ ಆದೇಶಿಸಿದ್ದಾರೆ.</p>.<p>ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯ ತಲಾ ₹ 5 ಲಕ್ಷ ಪರಿಹಾರ ಘೋಷಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>