65 ವರ್ಷದ ‘ಅರ್ಜುನ’ ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿ ಇತ್ತು. ದಸರೆಯಿಂದ ನಾಲ್ಕು ವರ್ಷಗಳ ಹಿಂದೆ ನಿವೃತ್ತಿ ನೀಡಲಾಗಿತ್ತು. ಚಿನ್ನದ ಅಂಬಾರಿ ಹೊರದೇ ಇದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ಸರಾಸರಿ 5,800 ಕೆ.ಜಿ. ತೂಕದ ಈ ಆನೆಯನ್ನು ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿತ್ತು. ಈಗ ಹಾಸನ ಜಿಲ್ಲೆಯಲ್ಲಿ ಕಾರ್ಯಾಚರಣೆ ವೇಳೆಯೇ ಅದು ಸೋಮವಾರ ಸಾವಿಗೀಡಾಗಿದೆ.
ಈ ಬಾರಿಯ ದಸರಾ ಮೆರವಣಿಗೆಯಲ್ಲಿ, ದಿಕ್ಕು ತೋರುವ ‘ನಿಶಾನೆ ಆನೆ’ಯಾಗಿ ‘ಅರ್ಜುನ’ ಸಾಗಿದ್ದ, ಲಕ್ಷಾಂತರ ಜನರ ಗಮನಸೆಳೆದಿದ್ದ.