<p><strong>ಬೆಂಗಳೂರು</strong>: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.</p><p>ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.</p><p>ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.</p><p>ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.</p><p>ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆದಿದೆ.</p><p>ನೀಲಂ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್ಗೆ ಈ ವಾಹನ ಬರುತ್ತಿತ್ತು, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಜಮ್ಮು ಮತ್ತು ಕಾಶ್ಮೀರ: ರಸ್ತೆ ಅಪಘಾತದಲ್ಲಿ ಐವರು ಯೋಧರು ಮೃತ.<p><strong>ಬೆಳಗಾವಿ ವರದಿ</strong></p><p>ತಾಲ್ಲೂಕಿನ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕೂಡ ಮೃತಪಟ್ಟಿದ್ದಾರೆ.</p><p>ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ 150 ಅಡಿ ಆಳಕ್ಕೆ ವಾಹನ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.</p><p>ಸುಬೇದಾರ್ ದಯಾನಂದ ಅವರು, ಕೆಲವರು ವರ್ಷಗಳಿಂದ ಸೇನೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬರುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.</p>.ಜಮ್ಮು- ಕಾಶ್ಮೀರ: ಪೂಂಚ್ನಲ್ಲಿ ಕಣಿವೆಗೆ ಉರುಳಿದ ಸೇನಾ ವಾಹನ; 8 ಯೋಧರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.</p><p>ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.</p><p>ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.</p><p>ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.</p><p>ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆದಿದೆ.</p><p>ನೀಲಂ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್ಗೆ ಈ ವಾಹನ ಬರುತ್ತಿತ್ತು, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಜಮ್ಮು ಮತ್ತು ಕಾಶ್ಮೀರ: ರಸ್ತೆ ಅಪಘಾತದಲ್ಲಿ ಐವರು ಯೋಧರು ಮೃತ.<p><strong>ಬೆಳಗಾವಿ ವರದಿ</strong></p><p>ತಾಲ್ಲೂಕಿನ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕೂಡ ಮೃತಪಟ್ಟಿದ್ದಾರೆ.</p><p>ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ 150 ಅಡಿ ಆಳಕ್ಕೆ ವಾಹನ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.</p><p>ಸುಬೇದಾರ್ ದಯಾನಂದ ಅವರು, ಕೆಲವರು ವರ್ಷಗಳಿಂದ ಸೇನೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬರುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.</p>.ಜಮ್ಮು- ಕಾಶ್ಮೀರ: ಪೂಂಚ್ನಲ್ಲಿ ಕಣಿವೆಗೆ ಉರುಳಿದ ಸೇನಾ ವಾಹನ; 8 ಯೋಧರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>