ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

Published 14 ಸೆಪ್ಟೆಂಬರ್ 2023, 11:12 IST
Last Updated 14 ಸೆಪ್ಟೆಂಬರ್ 2023, 11:12 IST
ಅಕ್ಷರ ಗಾತ್ರ

ಮಂಗಳೂರು: ಚೈತ್ರಾ ಕುಂದಾಪುರ ಪ್ರಕರಣ ಹಾಗೂ ಅವರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಸಮಗ್ರ ತನಿಖೆ ಆಗಬೇಕು, ಯಾರೇ ಇದರಲ್ಲಿ ಭಾಗಿಯಾಗಿದ್ದರೂ ಶಿಕ್ಷೆ ಆಗಲಿ ಎಂದರು.

ಸ್ವಾಮೀಜಿಯಷ್ಟೇ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು.

ಟಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನುವುದು ಮಾತ್ರ ಸ್ಪಷ್ಟ ಎಂದು ಬೊಮ್ಮಾಯಿ ಹೇಳಿದರು.

ಹಲವರು ಹೋರಾಟ ಮಾಡುತ್ತಾರೆ. ಆದರೆ ಅದಕ್ಕೂ ಪಕ್ಷಕ್ಕೂ ಸಂಬಂಧ ಇರುವುದಿಲ್ಲ ಎಂದ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆದು ಸತ್ಯ ಹೊರ ಬರಲಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT