<p><strong>ಬೆಂಗಳೂರು</strong>: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಗೆ ಕೆಲ ಸಮುದಾಯಗಳ ವಿರೋಧದ ಹಿನ್ನಲೆಯಲ್ಲಿ ಶಾಸಕಾಂಗ ಸಭೆ ಕರೆದು ಚರ್ಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವರದಿಯ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಆಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸರ್ಕಾರ ಆ ಗೊಂದಲವನ್ನು ಬಗೆಹರಿಸಬೇಕು’ ಎಂದರು.</p>.<p>‘ಒಕ್ಕಲಿಗರು ಒಂದು, ಒಂದೂವರೆ ಕೋಟಿ ಇದ್ದೇವೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿರುವ ಜನಸಂಖ್ಯೆಯಲ್ಲಿ ಅವರ ಸಂಖ್ಯೆಯೇ ಒಂದು ಕೋಟಿಯಾದರೆ ಉಳಿದವರ ಸಂಖ್ಯೆ ಎಷ್ಟಿರಬಹುದೆಂದು ನೀವೇ ಹೇಳಿ’ ಎಂದು ಮರು ಪ್ರಶ್ನೆ ಹಾಕಿದರು.</p>.<p>ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಸಮಾಧಾನ ಕುರಿತ ಪ್ರಶ್ನೆಗೆ, ‘ಅವರಿಗೆ ವಯಸ್ಸಾಗಿದೆ, ಏನೇನೋ ಮಾತನಾಡುತ್ತಿದ್ದಾರೆ. ಅವರ ವಾದ, ವಿವಾದ ಇದ್ದೇ ಇರುತ್ತದೆ. ಹಿಂದೆಯೂ ಅದನ್ನೇ ಹೇಳಿದ್ದಾರೆ. ವರದಿಯಲ್ಲಿ ಸಣ್ಣಪುಟ್ಟ ಗೊಂದಲ ಇದ್ದರೆ ಬಗೆಹರಿಸಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಗೆ ಕೆಲ ಸಮುದಾಯಗಳ ವಿರೋಧದ ಹಿನ್ನಲೆಯಲ್ಲಿ ಶಾಸಕಾಂಗ ಸಭೆ ಕರೆದು ಚರ್ಚಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವರದಿಯ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಆಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸರ್ಕಾರ ಆ ಗೊಂದಲವನ್ನು ಬಗೆಹರಿಸಬೇಕು’ ಎಂದರು.</p>.<p>‘ಒಕ್ಕಲಿಗರು ಒಂದು, ಒಂದೂವರೆ ಕೋಟಿ ಇದ್ದೇವೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿರುವ ಜನಸಂಖ್ಯೆಯಲ್ಲಿ ಅವರ ಸಂಖ್ಯೆಯೇ ಒಂದು ಕೋಟಿಯಾದರೆ ಉಳಿದವರ ಸಂಖ್ಯೆ ಎಷ್ಟಿರಬಹುದೆಂದು ನೀವೇ ಹೇಳಿ’ ಎಂದು ಮರು ಪ್ರಶ್ನೆ ಹಾಕಿದರು.</p>.<p>ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಸಮಾಧಾನ ಕುರಿತ ಪ್ರಶ್ನೆಗೆ, ‘ಅವರಿಗೆ ವಯಸ್ಸಾಗಿದೆ, ಏನೇನೋ ಮಾತನಾಡುತ್ತಿದ್ದಾರೆ. ಅವರ ವಾದ, ವಿವಾದ ಇದ್ದೇ ಇರುತ್ತದೆ. ಹಿಂದೆಯೂ ಅದನ್ನೇ ಹೇಳಿದ್ದಾರೆ. ವರದಿಯಲ್ಲಿ ಸಣ್ಣಪುಟ್ಟ ಗೊಂದಲ ಇದ್ದರೆ ಬಗೆಹರಿಸಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>