<p><strong>ಮಂಡ್ಯ:</strong> ‘ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಎನ್.ಚಲುವರಾಯಸ್ವಾಮಿ ನೇತೃತ್ವದ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಬೃಂದಾವನ ಉದ್ಯಾನದ ಅಣೆಕಟ್ಟೆ ಸಮೀಪ ‘ಕಾವೇರಿ ಆರತಿ’ ನಡೆಸುವ ಸಂಬಂಧ ಶುಕ್ರವಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದರು. </p><p>‘ಈ ಕಾವೇರಿ ಆರತಿಗೆ ಸರ್ಕಾರ ₹92 ಕೋಟಿ ನೀಡಲು ತೀರ್ಮಾನಿಸಿದ್ದು, ಇದರ ಜತೆಗೆ ಬೇರೆ ಇಲಾಖೆಗಳು ಅಗತ್ಯ ಸಹಕಾರ ನೀಡಲಿವೆ. ಕನಿಷ್ಠ ಸುಮಾರು 10 ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗುವುದು. ಎಷ್ಟು ದಿನ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನ ಮಾಡಲಿದೆ ಎಂದರು. </p><p><strong>ಬೃಂದಾವನ ಉನ್ನತೀಕರಣ:</strong></p><p>‘ಬೃಂದಾವನ ಉದ್ಯಾನ ಉನ್ನತೀಕರಣಕ್ಕಾಗಿ (ಅಮ್ಯೂಸ್ಮೆಂಟ್ ಪಾರ್ಕ್) ನಾನು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅಲ್ಲಿ ಯೋಜನಾ ಪ್ರಾಧಿಕಾರ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕು ಪಂಚಾಯ್ತಿ ಸೇರಿಸಲಾಗುತ್ತಿದೆ. ಪಂಚಾಯ್ತಿಗಳ ಅಸ್ಥಿತ್ವಕ್ಕೆ ತೊಂದರೆ ಆಗುವುದಿಲ್ಲ. ಅವರ ಅಧಿಕಾರ ಮೊಟಕುಗೊಳಿಸುವುದಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. </p><p>‘ಬೃಂದಾವನ ಉದ್ಯಾನ ಉನ್ನತೀಕರಣಕ್ಕೆ 7 ಸಂಸ್ಥೆಗಳಿಂದ ಅರ್ಜಿ ಬಂದಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಇದರ ರೂಪುರೇಷೆ ಸಿದ್ಧಪಡಿಸಲಾಗುವುದು. ಈ ಭಾಗದಲ್ಲಿ ಏನೇ ಉದ್ಯೋಗ ಸೃಷ್ಟಿಯಾದರೂ ಈ ಭಾಗದ ಪಂಚಾಯ್ತಿ ವ್ಯಾಪ್ತಿಯ ಜನರಿಗೆ ಮೊದಲು ಆದ್ಯತೆ ನೀಡಲು ಷರತ್ತು ಹಾಕಲಾಗಿದೆ. ಸ್ಥಳೀಯ ಯುವಕರಿಗೆ ಈ ಸಂಸ್ಥೆಗಳು ತರಬೇತಿ ನೀಡಿ ಉದ್ಯೋಗ ನೀಡಬೇಕು ಎಂದು ಸೂಚಿಸಲಾಗಿದೆ” ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಎನ್.ಚಲುವರಾಯಸ್ವಾಮಿ ನೇತೃತ್ವದ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p><p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಬೃಂದಾವನ ಉದ್ಯಾನದ ಅಣೆಕಟ್ಟೆ ಸಮೀಪ ‘ಕಾವೇರಿ ಆರತಿ’ ನಡೆಸುವ ಸಂಬಂಧ ಶುಕ್ರವಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದರು. </p><p>‘ಈ ಕಾವೇರಿ ಆರತಿಗೆ ಸರ್ಕಾರ ₹92 ಕೋಟಿ ನೀಡಲು ತೀರ್ಮಾನಿಸಿದ್ದು, ಇದರ ಜತೆಗೆ ಬೇರೆ ಇಲಾಖೆಗಳು ಅಗತ್ಯ ಸಹಕಾರ ನೀಡಲಿವೆ. ಕನಿಷ್ಠ ಸುಮಾರು 10 ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗುವುದು. ಎಷ್ಟು ದಿನ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನ ಮಾಡಲಿದೆ ಎಂದರು. </p><p><strong>ಬೃಂದಾವನ ಉನ್ನತೀಕರಣ:</strong></p><p>‘ಬೃಂದಾವನ ಉದ್ಯಾನ ಉನ್ನತೀಕರಣಕ್ಕಾಗಿ (ಅಮ್ಯೂಸ್ಮೆಂಟ್ ಪಾರ್ಕ್) ನಾನು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅಲ್ಲಿ ಯೋಜನಾ ಪ್ರಾಧಿಕಾರ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕು ಪಂಚಾಯ್ತಿ ಸೇರಿಸಲಾಗುತ್ತಿದೆ. ಪಂಚಾಯ್ತಿಗಳ ಅಸ್ಥಿತ್ವಕ್ಕೆ ತೊಂದರೆ ಆಗುವುದಿಲ್ಲ. ಅವರ ಅಧಿಕಾರ ಮೊಟಕುಗೊಳಿಸುವುದಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. </p><p>‘ಬೃಂದಾವನ ಉದ್ಯಾನ ಉನ್ನತೀಕರಣಕ್ಕೆ 7 ಸಂಸ್ಥೆಗಳಿಂದ ಅರ್ಜಿ ಬಂದಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಇದರ ರೂಪುರೇಷೆ ಸಿದ್ಧಪಡಿಸಲಾಗುವುದು. ಈ ಭಾಗದಲ್ಲಿ ಏನೇ ಉದ್ಯೋಗ ಸೃಷ್ಟಿಯಾದರೂ ಈ ಭಾಗದ ಪಂಚಾಯ್ತಿ ವ್ಯಾಪ್ತಿಯ ಜನರಿಗೆ ಮೊದಲು ಆದ್ಯತೆ ನೀಡಲು ಷರತ್ತು ಹಾಕಲಾಗಿದೆ. ಸ್ಥಳೀಯ ಯುವಕರಿಗೆ ಈ ಸಂಸ್ಥೆಗಳು ತರಬೇತಿ ನೀಡಿ ಉದ್ಯೋಗ ನೀಡಬೇಕು ಎಂದು ಸೂಚಿಸಲಾಗಿದೆ” ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>