ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚುತ್ತಿರುವ ಮತ್ತು ವಿಸ್ತರಿಸುತ್ತಿರುವ ಬರದ ತೀವ್ರತೆಯನ್ನು ಗಮನಿಸಿ, ಕುಡಿಯುವ ನೀರಿನ ಅಗತ್ಯತೆಗಳು ಮತ್ತು ನೀರಾವರಿಯ ಕನಿಷ್ಠ ಅಗತ್ಯತೆಗಳಿಗೆ ನೀರಿನ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಒಳಹರಿವು ಸುಧಾರಿಸದ ಹೊರತು ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಕರ್ನಾಟಕವು ಪ್ರಾಧಿಕಾರಕ್ಕೆ ತಿಳಿಸಿತ್ತು.
ಪ್ರತಿಯಾಗಿ ತಮಿಳುನಾಡು, 6,500 ಕ್ಯೂಸೆಕ್ ಬಾಕಿಯನ್ನು ಒಳಗೊಂಡಂತೆ ಮುಂದಿನ 15 ದಿನಗಳವರೆಗೆ ಒಟ್ಟು 12,500 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು
ಅಂತಿಮವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಲು ಆದೇಶಿಸಿದೆ.
ಆದೇಶದ ಬೆನ್ನಲ್ಲೇ ಸಿಎಂ ಡಿಸಿಎಂ ಕರ್ನಾಟಕ ಭವನದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.