‘ಕಾವೇರಿ ನದಿಯಲ್ಲಿ ನೀರು ಎಷ್ಟು ಹರಿಯುತ್ತಿದೆ, ಅಣೆಕಟ್ಟೆಯಲ್ಲಿ ಎಷ್ಟು ನೀರು ಕಡಿಮೆಯಾಗಿದೆ ಎನ್ನುವುದು ತೆರೆದ ಪುಸ್ತಕ. ಬೆಂಗಳೂರಿನ ಜನತೆಗೆ ಕುಡಿಯಲು ನಾವು ನೀರನ್ನು ಉಳಿಸಿಕೊಳ್ಳಬೇಕು. ಬರದ ಈ ಸನ್ನಿವೇಶದ ಸಂದರ್ಭದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯೂಎಂಎ) ಸಹ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಸಂಕಷ್ಟದ ಸೂತ್ರ ಕಂಡುಹಿಡಿಯಲು ಸುಪ್ರೀಂಕೋರ್ಟ್ ಮತ್ತು ಸಿಡಬ್ಲ್ಯೂಎಂಎಗೆ ನಾವು ಒತ್ತಾಯ ಮಾಡುತ್ತಲೇ ಇದ್ದೇವೆ’ ಎಂದು ಹೇಳಿದರು.
‘ಇಂಡಿಯಾ ಒಕ್ಕೂಟ ಬಲಗೊಳಿಸಿಕೊಳ್ಳಲು ಕಾಂಗ್ರೆಸ್ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿದೆ’ ಎನ್ನುವ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಪಾಟೀಲ, ‘ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಜೆಪಿ ಬಿಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಯತ್ನಿಸಬೇಕು. ಇದು ರಾಜ್ಯಗಳ ನಡುವಿನ ವಿಶ್ವಾಸ ವೃದ್ಧಿಸಲು ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.
‘ಹೆಚ್ಚುವರಿ ಡಿಸಿಎಂ ಕುರಿತು ಮಾತನಾಡಬಾರದು ಎಂದು ಹೈಕಮಾಂಡ್ ಎಚ್ಚರಿಕೆ ನೀಡಿದೆ. ಅಂತಹ ಹೇಳಿಕೆ ಪಕ್ಷಕ್ಕೆ ಬಲತರುವಂತಹದ್ದೂ ಅಲ್ಲ’ ಎಂದು ಶಾಸಕ ಬಸವರಾಜ ರಾಯರಡ್ಡಿ ಅವರ ಆರು ಡಿಸಿಎಂ ಹೇಳಿಕೆಗೆ ಸಚಿವ ಪಾಟೀಲ ಪ್ರತಿಕ್ರಿಯಿಸಿದರು.