<p><strong>ಬೆಂಗಳೂರು</strong>: ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ನಿಗೂಢವಾಗಿದ್ದು, ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಲಾಗಿದೆ. </p><p>ಗ್ರೂಪ್ನ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ ಅವರ ದೂರು ಆಧರಿಸಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 194/3(4) ಅಡಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.</p>.ವಿಲಾಸಿ, ವಿವಾದ, ವಿದಾಯ: ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು.<p>ಈ ಪ್ರಕರಣದ ತನಿಖೆಗೆ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ಶನಿವಾರ ಆದೇಶಿಸಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಅವರು ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.</p><p>‘ತನಿಖೆಗೆ ಅವಶ್ಯವಿರುವ ಹೆಚ್ಚುವರಿ ಅಧಿಕಾರಿಗಳು, ಸಂಪನ್ಮೂಲಗಳನ್ನು ತಂಡಕ್ಕೆ ಸೇರಿಸಿಕೊಳ್ಳುವ ಅಧಿಕಾರವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡಲಾಗಿದೆ. ಕಾನೂನುಬದ್ಧ ಹಾಗೂ ಪರಿಣಾಮಕಾರಿಯಾಗಿ ತನಿಖೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ’ ಎಂದು ಸೀಮಾಂತ್ಕುಮಾರ್ ಸಿಂಗ್ ಹೇಳಿದರು.</p><p>ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ‘ಕಾನ್ಫಿಡೆಂಟ್ ಗ್ರೂಪ್’ನ ಕಚೇರಿಯಲ್ಲಿ ಇರುವ ಸಂದರ್ಭದಲ್ಲಿಯೇ ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ತಮ್ಮ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೇರಳ, ಕರ್ನಾಟಕ, ದುಬೈನಲ್ಲಿ ರಾಯ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. </p><p>ರಾಯ್ ಅವರ ಮೊಬೈಲ್, ಲ್ಯಾಪ್ಟಾಪ್ ಹಾಗೂ ಡೈರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅದರ ವರದಿ ನಿರೀಕ್ಷೆಯಲ್ಲಿದ್ದಾರೆ. </p>.<h2>ಎಸ್ಐಟಿಯಲ್ಲಿ ಯಾರು?</h2><ul><li><p>ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ (ಪೂರ್ವ ವಿಭಾಗ)</p></li><li><p>ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ</p></li><li><p>ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್</p></li><li><p>ಹಲಸೂರು ಉಪ ವಿಭಾಗದ ಎಸಿಪಿ ಸುಧೀರ್</p></li><li><p>ಸಿಸಿಆರ್ಬಿ ಎಸಿಪಿ ರಾಮಚಂದ್ರ</p></li><li><p>ಅಶೋಕನಗರ ಇನ್ಸ್ಪೆಕ್ಟರ್ ಕೆ.ಬಿ.ರವಿ</p></li></ul>.<p><strong>ಸ್ಥಳ ಮಹಜರು; ಸಿಬ್ಬಂದಿ ವಿಚಾರಣೆ</strong> </p><p>ಪ್ರಕರಣವು ಎಸ್ಐಟಿಗೆ ವರ್ಗಾವಣೆಯಾದ ಬೆನ್ನಲ್ಲೇ ತನಿಖೆ ಮತ್ತಷ್ಟು ಚುರುಕು ಪಡೆದಿದೆ. ಎಸ್ಐಟಿ ಅಧಿಕಾರಿಗಳು ಶನಿವಾರ ರಾತ್ರಿಯೇ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ‘ಕಾನ್ಫಿಡೆಂಟ್ ಗ್ರೂಪ್’ನ ಕಚೇರಿಗೆ ಭೇಟಿ ನೀಡಿ ಮಹಜರು ನಡೆಸಿದರು. ಅಲ್ಲದೇ ಕಚೇರಿ ಸಿಬ್ಬಂದಿಯಿಂದಲೂ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ. </p>.<div><blockquote>ತನಿಖೆ ಬಳಿಕ ರಾಯ್ ಆತ್ಮಹತ್ಯೆಗೆ ಕಾರಣ ಗೊತ್ತಾಗಲಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕೇ ಬೇಡವೇ ಎಂಬುದನ್ನು ಎಸ್ಐಟಿ ಅಧಿಕಾರಿಗಳು ನಿರ್ಧರಿಸಲಿದ್ದಾರೆ</blockquote><span class="attribution"> ಜಿ. ಪರಮೇಶ್ವರ ಗೃಹ ಸಚಿವ</span></div>.ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್ ಗ್ರೂಪ್ CEO ರಾಯ್ ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ನಿಗೂಢವಾಗಿದ್ದು, ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಲಾಗಿದೆ. </p><p>ಗ್ರೂಪ್ನ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ ಅವರ ದೂರು ಆಧರಿಸಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 194/3(4) ಅಡಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.</p>.ವಿಲಾಸಿ, ವಿವಾದ, ವಿದಾಯ: ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು.<p>ಈ ಪ್ರಕರಣದ ತನಿಖೆಗೆ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ಶನಿವಾರ ಆದೇಶಿಸಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಅವರು ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.</p><p>‘ತನಿಖೆಗೆ ಅವಶ್ಯವಿರುವ ಹೆಚ್ಚುವರಿ ಅಧಿಕಾರಿಗಳು, ಸಂಪನ್ಮೂಲಗಳನ್ನು ತಂಡಕ್ಕೆ ಸೇರಿಸಿಕೊಳ್ಳುವ ಅಧಿಕಾರವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡಲಾಗಿದೆ. ಕಾನೂನುಬದ್ಧ ಹಾಗೂ ಪರಿಣಾಮಕಾರಿಯಾಗಿ ತನಿಖೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ’ ಎಂದು ಸೀಮಾಂತ್ಕುಮಾರ್ ಸಿಂಗ್ ಹೇಳಿದರು.</p><p>ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ‘ಕಾನ್ಫಿಡೆಂಟ್ ಗ್ರೂಪ್’ನ ಕಚೇರಿಯಲ್ಲಿ ಇರುವ ಸಂದರ್ಭದಲ್ಲಿಯೇ ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ತಮ್ಮ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೇರಳ, ಕರ್ನಾಟಕ, ದುಬೈನಲ್ಲಿ ರಾಯ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. </p><p>ರಾಯ್ ಅವರ ಮೊಬೈಲ್, ಲ್ಯಾಪ್ಟಾಪ್ ಹಾಗೂ ಡೈರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅದರ ವರದಿ ನಿರೀಕ್ಷೆಯಲ್ಲಿದ್ದಾರೆ. </p>.<h2>ಎಸ್ಐಟಿಯಲ್ಲಿ ಯಾರು?</h2><ul><li><p>ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ (ಪೂರ್ವ ವಿಭಾಗ)</p></li><li><p>ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ</p></li><li><p>ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್</p></li><li><p>ಹಲಸೂರು ಉಪ ವಿಭಾಗದ ಎಸಿಪಿ ಸುಧೀರ್</p></li><li><p>ಸಿಸಿಆರ್ಬಿ ಎಸಿಪಿ ರಾಮಚಂದ್ರ</p></li><li><p>ಅಶೋಕನಗರ ಇನ್ಸ್ಪೆಕ್ಟರ್ ಕೆ.ಬಿ.ರವಿ</p></li></ul>.<p><strong>ಸ್ಥಳ ಮಹಜರು; ಸಿಬ್ಬಂದಿ ವಿಚಾರಣೆ</strong> </p><p>ಪ್ರಕರಣವು ಎಸ್ಐಟಿಗೆ ವರ್ಗಾವಣೆಯಾದ ಬೆನ್ನಲ್ಲೇ ತನಿಖೆ ಮತ್ತಷ್ಟು ಚುರುಕು ಪಡೆದಿದೆ. ಎಸ್ಐಟಿ ಅಧಿಕಾರಿಗಳು ಶನಿವಾರ ರಾತ್ರಿಯೇ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ‘ಕಾನ್ಫಿಡೆಂಟ್ ಗ್ರೂಪ್’ನ ಕಚೇರಿಗೆ ಭೇಟಿ ನೀಡಿ ಮಹಜರು ನಡೆಸಿದರು. ಅಲ್ಲದೇ ಕಚೇರಿ ಸಿಬ್ಬಂದಿಯಿಂದಲೂ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ. </p>.<div><blockquote>ತನಿಖೆ ಬಳಿಕ ರಾಯ್ ಆತ್ಮಹತ್ಯೆಗೆ ಕಾರಣ ಗೊತ್ತಾಗಲಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕೇ ಬೇಡವೇ ಎಂಬುದನ್ನು ಎಸ್ಐಟಿ ಅಧಿಕಾರಿಗಳು ನಿರ್ಧರಿಸಲಿದ್ದಾರೆ</blockquote><span class="attribution"> ಜಿ. ಪರಮೇಶ್ವರ ಗೃಹ ಸಚಿವ</span></div>.ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್ ಗ್ರೂಪ್ CEO ರಾಯ್ ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>