<p><strong>ಬೆಂಗಳೂರು:</strong> ಇಲ್ಲಿನ ಜೆ.ಪಿ ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p><p>ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್ ಘಟಕ, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಇಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹ ಜ್ಯೋತಿಗೆ ಅರ್ಜಿ ಹಾಕಬಹುದಿತ್ತು ಎಂದು ಚಾಟಿ ಬೀಸಿದೆ.</p>.<p>‘ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಕುಮಾರಸ್ವಾಮಿಯವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ಗಳಿವೆಯಲ್ಲವೇ’ ಎಂದು ಛೇಡಿಸಿದೆ.</p>.ಕರ್ನಾಟಕ ಡಿಕೆಶಿ ಗಣರಾಜ್ಯವೆ?: ಕುಮಾರಸ್ವಾಮಿ ಪ್ರಶ್ನೆ.<p>‘ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ‘ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p> .<div><blockquote>ಅದೇನೋ ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?</blockquote><span class="attribution">– ಕಾಂಗ್ರೆಸ್ ಟ್ವೀಟ್</span></div>.ಗ್ಯಾರಂಟಿ ಅನುಷ್ಠಾನದಲ್ಲಿ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ. <p>ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಪ್ರಶ್ನಿಸಿದೆ.</p> .ವಿದ್ಯುತ್ ಕಳ್ಳತನ ಆರೋಪ– ದಂಡ ಕಟ್ಟುವೆ, ಯಾವುದೇ ಕ್ರಮಕ್ಕೆ ಸಿದ್ಧ: ಕುಮಾರಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಲ್ಲಿನ ಜೆ.ಪಿ ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p><p>ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್ ಘಟಕ, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಇಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹ ಜ್ಯೋತಿಗೆ ಅರ್ಜಿ ಹಾಕಬಹುದಿತ್ತು ಎಂದು ಚಾಟಿ ಬೀಸಿದೆ.</p>.<p>‘ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಕುಮಾರಸ್ವಾಮಿಯವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ಗಳಿವೆಯಲ್ಲವೇ’ ಎಂದು ಛೇಡಿಸಿದೆ.</p>.ಕರ್ನಾಟಕ ಡಿಕೆಶಿ ಗಣರಾಜ್ಯವೆ?: ಕುಮಾರಸ್ವಾಮಿ ಪ್ರಶ್ನೆ.<p>‘ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ‘ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p> .<div><blockquote>ಅದೇನೋ ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?</blockquote><span class="attribution">– ಕಾಂಗ್ರೆಸ್ ಟ್ವೀಟ್</span></div>.ಗ್ಯಾರಂಟಿ ಅನುಷ್ಠಾನದಲ್ಲಿ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ. <p>ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಪ್ರಶ್ನಿಸಿದೆ.</p> .ವಿದ್ಯುತ್ ಕಳ್ಳತನ ಆರೋಪ– ದಂಡ ಕಟ್ಟುವೆ, ಯಾವುದೇ ಕ್ರಮಕ್ಕೆ ಸಿದ್ಧ: ಕುಮಾರಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>