<p>ಬೆಂಗಳೂರು: ದಲಿತ ಸಚಿವರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಸಭೆ ಸೇರಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p><p>ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ದಲಿತ ಮುಖ್ಯಮಂತ್ರಿ’ ಹಕ್ಕು ಮಂಡನೆಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾನ ತ್ಯಜಿಸುವ ಸಂದರ್ಭ ಬಂದರೆ ದಲಿತರೊಬ್ಬರನ್ನು ಆ ಸ್ಥಾನಕ್ಕೆ ಪರಿಗಣಿಸುವಂತೆ ಒತ್ತಡ ಹಾಕುವ ಬಗ್ಗೆಯೂ ಸಭೆಯಲ್ಲಿ ವಿಚಾರ ವಿನಿಮಯ ನಡೆದಿದೆ ಎನ್ನಲಾಗಿದೆ.</p><p>ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಬಳಕೆ, ಬಜೆಟ್ನಲ್ಲಿ ದಲಿತ ಸಮುದಾಯಕ್ಕೆ ವಿಶೇಷ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆದಿದೆ.</p><p>ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಕೆ.ಎನ್. ರಾಜಣ್ಣ ಮುಂತಾದವರು ಸಭೆಯಲ್ಲಿ ಇದ್ದರು.</p><p>ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ವಿಷಯ ಪ್ರಸ್ತಾಪಿಸುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಅವರು ದಲಿತ ನಾಯಕರನ್ನು ಮುಂದೆ ಬಿಟ್ಟು 'ದಲಿತ ಮುಖ್ಯಮಂತ್ರಿ' ಚರ್ಚೆಯನ್ನು ಮುನ್ನಲೆಗೆ ತಂದಿದ್ದಾರೆ ಎನ್ನಲಾಗಿದೆ.</p>
<p>ಬೆಂಗಳೂರು: ದಲಿತ ಸಚಿವರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಸಭೆ ಸೇರಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p><p>ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ದಲಿತ ಮುಖ್ಯಮಂತ್ರಿ’ ಹಕ್ಕು ಮಂಡನೆಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾನ ತ್ಯಜಿಸುವ ಸಂದರ್ಭ ಬಂದರೆ ದಲಿತರೊಬ್ಬರನ್ನು ಆ ಸ್ಥಾನಕ್ಕೆ ಪರಿಗಣಿಸುವಂತೆ ಒತ್ತಡ ಹಾಕುವ ಬಗ್ಗೆಯೂ ಸಭೆಯಲ್ಲಿ ವಿಚಾರ ವಿನಿಮಯ ನಡೆದಿದೆ ಎನ್ನಲಾಗಿದೆ.</p><p>ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಬಳಕೆ, ಬಜೆಟ್ನಲ್ಲಿ ದಲಿತ ಸಮುದಾಯಕ್ಕೆ ವಿಶೇಷ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆದಿದೆ.</p><p>ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಕೆ.ಎನ್. ರಾಜಣ್ಣ ಮುಂತಾದವರು ಸಭೆಯಲ್ಲಿ ಇದ್ದರು.</p><p>ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ವಿಷಯ ಪ್ರಸ್ತಾಪಿಸುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಅವರು ದಲಿತ ನಾಯಕರನ್ನು ಮುಂದೆ ಬಿಟ್ಟು 'ದಲಿತ ಮುಖ್ಯಮಂತ್ರಿ' ಚರ್ಚೆಯನ್ನು ಮುನ್ನಲೆಗೆ ತಂದಿದ್ದಾರೆ ಎನ್ನಲಾಗಿದೆ.</p>