<p><strong>ನವದೆಹಲಿ</strong>: ಚಿಕ್ಕಮಗಳೂರಿನ ಬಾಬಾಬುಡನ್ಗಿರಿಯ ದತ್ತಪೀಠದ ಪೂಜೆಯ ಹಕ್ಕಿನ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿತು. </p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು ತನ್ನ ನಿಲುವನ್ನು ಸ್ಪಷ್ಟಪಡಿಸಲು ಕರ್ನಾಟಕ ಸರ್ಕಾರಕ್ಕೆ ಎಂಟು ವಾರಗಳ ಕೊನೆಯ ಕಾಲಾವಕಾಶ ನೀಡಿತು. ಇಲ್ಲದಿದ್ದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿತು. </p>.<p class="Briefhead">ಈ ಸಂದರ್ಭದಲ್ಲಿ ವಕೀಲರು, ‘ದತ್ತಪೀಠದಲ್ಲಿ ಹಿಂದೂ ಅರ್ಚಕರು ಹಿಂದೂ ಪದ್ಧತಿ ಪಾಲಿಸುತ್ತಿದ್ದಾರೆ ಹಾಗೂ ಮುಸ್ಲಿಂ ಪದ್ಧತಿ ಅನುಸಾರ ಆಚರಣೆ ನೋಡಿಕೊಳ್ಳಲು ಮುಜಾವರ್ ಇದ್ದಾರೆ’ ಎಂದರು. </p>.<p class="Briefhead">ಆಗ ನ್ಯಾಯಪೀಠ, ‘ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಠಿಣ. ಅದು ಸುಲಭ ಎಂದು ನಾವು ಹೇಳುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳಲು ನಾವು ಹೆಚ್ಚುವರಿ ಸಮಯ ನೀಡುತ್ತಿದ್ದೇವೆ’ ಎಂದಿತು. </p>.<p class="Briefhead">ಇದಕ್ಕೂ ಮೊದಲು ರಾಜ್ಯ ಸರ್ಕಾರವು, ‘ಈ ವಿವಾದದ ಇತ್ಯರ್ಥಕ್ಕಾಗಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಉಪಸಮಿತಿಯು ವಿವಾದದ ಪರಿಶೀಲನೆ ನಡೆಸುತ್ತಿದೆ’ ಎಂದು ಹೇಳಿತು.</p>.<p class="Briefhead">2024ರ ಸೆಪ್ಟೆಂಬರ್ 3ರಂದು ನ್ಯಾಯಪೀಠವು, 2024ರ ಜನವರಿ 25ರಂದು ಸಚಿವ ಸಂಪುಟ ಉಪಸಮಿತಿ ರಚನೆಯಾಗಿದ್ದರೂ ಯಾವುದೇ ಪ್ರಗತಿ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. </p>.<p class="Briefhead">ದತ್ತಪೀಠದ ಪೂಜೆ ನೆರವೇರಿಸಲು ಮುಜಾವರ್ ನೇಮಕ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ನ 2023ರ ಮಾರ್ಚ್ 6ರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚಿಕ್ಕಮಗಳೂರಿನ ಬಾಬಾಬುಡನ್ಗಿರಿಯ ದತ್ತಪೀಠದ ಪೂಜೆಯ ಹಕ್ಕಿನ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿತು. </p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು ತನ್ನ ನಿಲುವನ್ನು ಸ್ಪಷ್ಟಪಡಿಸಲು ಕರ್ನಾಟಕ ಸರ್ಕಾರಕ್ಕೆ ಎಂಟು ವಾರಗಳ ಕೊನೆಯ ಕಾಲಾವಕಾಶ ನೀಡಿತು. ಇಲ್ಲದಿದ್ದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿತು. </p>.<p class="Briefhead">ಈ ಸಂದರ್ಭದಲ್ಲಿ ವಕೀಲರು, ‘ದತ್ತಪೀಠದಲ್ಲಿ ಹಿಂದೂ ಅರ್ಚಕರು ಹಿಂದೂ ಪದ್ಧತಿ ಪಾಲಿಸುತ್ತಿದ್ದಾರೆ ಹಾಗೂ ಮುಸ್ಲಿಂ ಪದ್ಧತಿ ಅನುಸಾರ ಆಚರಣೆ ನೋಡಿಕೊಳ್ಳಲು ಮುಜಾವರ್ ಇದ್ದಾರೆ’ ಎಂದರು. </p>.<p class="Briefhead">ಆಗ ನ್ಯಾಯಪೀಠ, ‘ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಠಿಣ. ಅದು ಸುಲಭ ಎಂದು ನಾವು ಹೇಳುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳಲು ನಾವು ಹೆಚ್ಚುವರಿ ಸಮಯ ನೀಡುತ್ತಿದ್ದೇವೆ’ ಎಂದಿತು. </p>.<p class="Briefhead">ಇದಕ್ಕೂ ಮೊದಲು ರಾಜ್ಯ ಸರ್ಕಾರವು, ‘ಈ ವಿವಾದದ ಇತ್ಯರ್ಥಕ್ಕಾಗಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಉಪಸಮಿತಿಯು ವಿವಾದದ ಪರಿಶೀಲನೆ ನಡೆಸುತ್ತಿದೆ’ ಎಂದು ಹೇಳಿತು.</p>.<p class="Briefhead">2024ರ ಸೆಪ್ಟೆಂಬರ್ 3ರಂದು ನ್ಯಾಯಪೀಠವು, 2024ರ ಜನವರಿ 25ರಂದು ಸಚಿವ ಸಂಪುಟ ಉಪಸಮಿತಿ ರಚನೆಯಾಗಿದ್ದರೂ ಯಾವುದೇ ಪ್ರಗತಿ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. </p>.<p class="Briefhead">ದತ್ತಪೀಠದ ಪೂಜೆ ನೆರವೇರಿಸಲು ಮುಜಾವರ್ ನೇಮಕ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ನ 2023ರ ಮಾರ್ಚ್ 6ರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>