<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ವಿಧಾನ ಪರಿಷತ್ನಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ‘ಸೂಳೆ’ ಪದ ಬಳಸಿ ನಿಂದಿಸಿದ ಆರೋಪದ ಮೇಲೆ, ಬಂಧಿಸಲಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು.</p><p>ಎಫ್ಐಆರ್ ಆದ ನಂತರ ಸುವರ್ಣ ವಿಧಾನಸೌಧಕ್ಕೆ ಬಂದ ಹಿರೇಬಾಗೇವಾಡಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದರು. ನೇರವಾಗಿ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು. ಅಲ್ಲಿ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡರು.</p><p>ಸಿ.ಟಿ.ರವಿ ವಿರುದ್ಧ ಘೋಷಣೆ ಮೊಳಗಿಸಿದರು. ಅವರ ಫೋಟೊಗೆ ಚಪ್ಪಲಿಯಿಂದ ಹೊಡೆದರು. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.</p><p>ಕಾರ್ಯಕರ್ತರು ಠಾಣೆಗೆ ನುಗ್ಗಬಹುದು ಎಂಬ ಮುನ್ನೆಚ್ಚರಿಕೆಯಿಂದಾಗಿ ಸಿ.ಟಿ.ರವಿ ಅವರನ್ನು ತಕ್ಷಣ ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು.</p><p><strong>ಬಿಜೆಪಿ ನಾಯಕರೂ ವಶ:</strong></p><p>ಸಿ.ಟಿ.ರವಿ ಬಂಧನ ಖಂಡಿಸಿ ಧರಣಿ ಸುವರ್ಣ ಸೌಧದಲ್ಲಿ ಧರಣಿ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್, ವಿಪಕ್ಷ ಉಪನಾಯಕ ಚೆಲುವಾದಿ ನಾರಾಯಣಸ್ವಾಮಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ, ಆರಗ ಜ್ಞಾನೇಂದ್ರ ಅವರನ್ನೂ ವಶಕ್ಕೆ ಪಡೆದರು.</p><p>ಎಲ್ಲರನ್ನೂ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ವಿಧಾನ ಪರಿಷತ್ನಲ್ಲಿ ಗುರುವಾರ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ‘ಸೂಳೆ’ ಪದ ಬಳಸಿ ನಿಂದಿಸಿದ ಆರೋಪದ ಮೇಲೆ, ಬಂಧಿಸಲಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು.</p><p>ಎಫ್ಐಆರ್ ಆದ ನಂತರ ಸುವರ್ಣ ವಿಧಾನಸೌಧಕ್ಕೆ ಬಂದ ಹಿರೇಬಾಗೇವಾಡಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದರು. ನೇರವಾಗಿ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು. ಅಲ್ಲಿ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡರು.</p><p>ಸಿ.ಟಿ.ರವಿ ವಿರುದ್ಧ ಘೋಷಣೆ ಮೊಳಗಿಸಿದರು. ಅವರ ಫೋಟೊಗೆ ಚಪ್ಪಲಿಯಿಂದ ಹೊಡೆದರು. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.</p><p>ಕಾರ್ಯಕರ್ತರು ಠಾಣೆಗೆ ನುಗ್ಗಬಹುದು ಎಂಬ ಮುನ್ನೆಚ್ಚರಿಕೆಯಿಂದಾಗಿ ಸಿ.ಟಿ.ರವಿ ಅವರನ್ನು ತಕ್ಷಣ ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು.</p><p><strong>ಬಿಜೆಪಿ ನಾಯಕರೂ ವಶ:</strong></p><p>ಸಿ.ಟಿ.ರವಿ ಬಂಧನ ಖಂಡಿಸಿ ಧರಣಿ ಸುವರ್ಣ ಸೌಧದಲ್ಲಿ ಧರಣಿ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್, ವಿಪಕ್ಷ ಉಪನಾಯಕ ಚೆಲುವಾದಿ ನಾರಾಯಣಸ್ವಾಮಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ, ಆರಗ ಜ್ಞಾನೇಂದ್ರ ಅವರನ್ನೂ ವಶಕ್ಕೆ ಪಡೆದರು.</p><p>ಎಲ್ಲರನ್ನೂ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>