<p><strong>ಬೆಂಗಳೂರು:</strong> ‘ಗುತ್ತಿಗೆದಾರರ ಬಾಕಿ ಮೊತ್ತ (ಬಿಲ್) ಪಾವತಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಸಚಿವರಾದ ಸತೀಶ ಜಾರಕಿಹೊಳಿ, ಎಸ್.ಎನ್. ಬೋಸರಾಜು ಭಾಗಿಯಾಗಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಬಾಕಿ ಪಾವತಿ ವಿಚಾರವಾಗಿ ಗುತ್ತಿಗೆದಾರರು ಸಚಿವರನ್ನು ಏಕೆ ಪ್ರಶ್ನಿಸಬೇಕು? ಇಲಾಖೆಯ ಬಜೆಟ್ನ ಅರಿವಿರಲಿಲ್ಲವೇ? ಅನುದಾನ ಬಿಡುಗಡೆಯಾಗದೆ ಇದ್ದಾಗಲೂ ಅವರು ಗುತ್ತಿಗೆ ಹೇಗೆ ಪಡೆದರು. ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಜಲಸಂಪನ್ಮೂಲ ಇಲಾಖೆಯಲ್ಲೇ ₹1 ಲಕ್ಷ ಕೋಟಿಗೂ ಅಧಿಕ ಮೊತ್ತದ ಗುತ್ತಿಗೆ ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿಗೆ ಶಾಸಕರ ಮೂಲಕ ಒತ್ತಡ ತರುತ್ತಿದ್ದಾರೆ’ ಎಂದರು</p>.<p>‘ವಿಧಾನಸಭೆ ಚುನಾವಣೆಗೂ ಒಂದು ವರ್ಷ ಮುಂಚಿತವಾಗಿ ಗುತ್ತಿಗೆದಾರರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿತ್ತು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ವಿನಂತಿಸಿದ್ದೆವು. ಆದರೂ, ಮಾತು ಕೇಳಲಿಲ್ಲ. ಈಗ ಬಿಜೆಪಿ ನಾಯಕರ ಸೂಚನೆಯಂತೆ ಪತ್ರ ಬರೆಯುತ್ತಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗುತ್ತಿಗೆದಾರರ ಬಾಕಿ ಮೊತ್ತ (ಬಿಲ್) ಪಾವತಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಸಚಿವರಾದ ಸತೀಶ ಜಾರಕಿಹೊಳಿ, ಎಸ್.ಎನ್. ಬೋಸರಾಜು ಭಾಗಿಯಾಗಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಬಾಕಿ ಪಾವತಿ ವಿಚಾರವಾಗಿ ಗುತ್ತಿಗೆದಾರರು ಸಚಿವರನ್ನು ಏಕೆ ಪ್ರಶ್ನಿಸಬೇಕು? ಇಲಾಖೆಯ ಬಜೆಟ್ನ ಅರಿವಿರಲಿಲ್ಲವೇ? ಅನುದಾನ ಬಿಡುಗಡೆಯಾಗದೆ ಇದ್ದಾಗಲೂ ಅವರು ಗುತ್ತಿಗೆ ಹೇಗೆ ಪಡೆದರು. ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಜಲಸಂಪನ್ಮೂಲ ಇಲಾಖೆಯಲ್ಲೇ ₹1 ಲಕ್ಷ ಕೋಟಿಗೂ ಅಧಿಕ ಮೊತ್ತದ ಗುತ್ತಿಗೆ ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿಗೆ ಶಾಸಕರ ಮೂಲಕ ಒತ್ತಡ ತರುತ್ತಿದ್ದಾರೆ’ ಎಂದರು</p>.<p>‘ವಿಧಾನಸಭೆ ಚುನಾವಣೆಗೂ ಒಂದು ವರ್ಷ ಮುಂಚಿತವಾಗಿ ಗುತ್ತಿಗೆದಾರರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿತ್ತು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ವಿನಂತಿಸಿದ್ದೆವು. ಆದರೂ, ಮಾತು ಕೇಳಲಿಲ್ಲ. ಈಗ ಬಿಜೆಪಿ ನಾಯಕರ ಸೂಚನೆಯಂತೆ ಪತ್ರ ಬರೆಯುತ್ತಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>