ಮಂತ್ರಿಮಂಡಲ ಮಾಡುವೆ ಎಂದಿಲ್ಲ– ಸ್ಪಷ್ಟನೆ
‘ನಾನು ಮಂತ್ರಿಮಂಡಲ ರಚನೆ ಮಾಡುತ್ತೇನೆ ಎಂದು ಹೇಳಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ‘ನಿಮ್ಮ ಮಂತ್ರಿಮಂಡಲದಲ್ಲಿ ಹೊಸ ಶಾಸಕರು ಸೇರ್ಪಡೆ ಆಗಲಿದ್ದಾರೆಯೇ’ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಅವರು ಮೇಲಿನಂತೆ ಉತ್ತರಿಸಿದರು. ‘ಮುಖ್ಯಮಂತ್ರಿ ಅವರು ಸಂಪುಟ ವಿಸ್ತರಣೆ ಮಾಡುವ ಕಾರಣಕ್ಕೆ ಕೆಲವರು ಪತ್ರ ಬರೆಯುತ್ತಾರೆ, ದೆಹಲಿಗೆ ಹೋಗುತ್ತಾರೆ, ಹೊರಗಡೆ ಹೋಗುತ್ತಾರೆ’ ಎಂದು ಹೇಳಿದರು.