‘ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 2018ರಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು 2020ರಲ್ಲಿ ತನಿಖಾ ಪ್ರಕ್ರಿಯೆ ಆರಂಭಿಸಿದೆ. ಜಾರಿ ನಿರ್ದೇಶನಾಲಯವು ಇದೇ ಪ್ರಕರಣದಲ್ಲಿ ಮರು ತನಿಖೆ (ಇಸಿಐಆರ್) ನಡೆಸುತ್ತಿದೆ’ ಎಂದು ಆರೋಪಿಸಿ ಶಿವಕುಮಾರ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.