<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು. </p>.ರಾಮನಗರ| ಕಾಡಾನೆಗಳ ಸಾವಿನ ಸುತ್ತ: ‘ಆನೆ ಕಾರ್ಯಪಡೆ’ಗೆ ಬೇಕಿದೆ ಸೌಕರ್ಯದ ಚಿಕಿತ್ಸೆ.<p>ಶನಿವಾರ ರಾತ್ರಿ ವಿದ್ಯುತ್ ಘಟಕದ ಬಳಿ ಸುತ್ತಾಡುತ್ತಿದ್ದ 12 ವರ್ಷದ ಗಂಡು ಕಾಡಾನೆಯು ನೀರು ಕುಡಿಯಲು ಗೇಟ್ ಮೂಲಕ ನಾಲೆಗೆ ಇಳಿದಿತ್ತು. ಆದರೆ, ನೀರಿನ ಹರಿವಿನ ರಭಸಕ್ಕೆ ವಾಪಸ್ ಕಾಲುವೆಯಿಂದ ಮೇಲೆ ಬಾರದ ಆನೆಯು ಕಳೆದ ಮೂರು ದಿನಗಳಿಂದ ಕಾಲುವೆಯಲ್ಲಿಯೇ ಓಡಾಡಿ ನಿತ್ರಾಣಗೊಂಡಿತ್ತು. </p><p>ಸೋಮವಾರ ದಿನವಿಡೀ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿರಲಿಲ್ಲ. ಮಂಗಳವಾರ ಕ್ರೇನ್ ಮತ್ತು ಡ್ರೋಣ್ ಸಹಾಯದಿಂದ ಕಾರ್ಯಾಚರಣೆ ಆರಂಭಗೊಂಡಿತು. ಬೆಂಗಳೂರಿನ ಬಂದಿದ್ದ ಬೃಹತ್ ಕ್ರೇನ್ ಹಾಗೂ ಸ್ಥಳೀಯವಾಗಿ 2 ಕ್ರೇನ್ಗಳ ಮೂಲಕ ಮೊದಲಿಗೆ ಒಂದು ಕಂಟೇನರ್ ಅನ್ನು ಕಾಲುವೆಗೆ ಇಳಿಸಿ ಆನೆಯನ್ನು ಮೇಲೆತ್ತುವ ಪ್ರಯತ್ನ ನಡೆಸಲಾಯಿತು. </p>.ಹಾರೋಬೆಲೆ ಜಲಾಶಯದ ಹಿನ್ನೀರು ದಾಟುವಾಗ ಅವಘಡ: ಕಳೆಯಲ್ಲಿ ಸಿಲುಕಿ ಎರಡು ಆನೆ ಸಾವು.<p>ಅದು ಫಲ ನೀಡದ ಹಿನ್ನೆಲೆಯಲ್ಲಿ, ಮಧ್ಯಾಹ್ನ ಪಟಾಕಿ ಸಿಡಿಸಿ ಕಾಲುವೆ ಮಧ್ಯಭಾಗಕ್ಕೆ ಆನೆ ಬಂದ ನಂತರ, ತಜ್ಞರ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದರು. ಸುಮಾರು 30 ನಿಮಿಷ ಆನೆಯು ಅಲ್ಲಿಯೇ ಓಡಾಟ ನಡೆಸಿ ಪ್ರಜ್ಞೆ ಕಳೆದುಕೊಂಡ ಬಳಿಕ, ಆನೆಗೆ ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿದರು.</p><p>ರಕ್ಷಣಾ ಸಿಬ್ಬಂದಿ ಹೈಡ್ರಾಲಿಕ್ ಕ್ರೇನ್ ಮತ್ತು ಹಗ್ಗಗಳನ್ನು ಬಳಸಿ, ಕಂಟೇನರ್ ಹಾಗೂ ಸ್ಟ್ರೆಚರ್ ಮೇಲೆ ಆನೆಯನ್ನು ಮಲಗಿಸಿ, ಅತ್ಯಂತ ಎಚ್ಚರಿಕೆಯಿಂದ 60 ಅಡಿ ಆಳದ ಕಾಲುವೆಯಿಂದ ಮೇಲೆ ತಂದರು. ಪ್ರಥಮ ಚಿಕಿತ್ಸೆ ನೀಡಿದ ನಂತರ, ಆರೋಗ್ಯ ಸ್ಥಿತಿಯನ್ನು ಖಾತ್ರಿಪಡಿಸಿಕೊಂಡು ಪಕ್ಕದಲ್ಲೇ ಇದ್ದ ಕಾವೇರಿ ವನ್ಯಜೀವಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. </p>.ಚಿಕ್ಕಮಗಳೂರು | ಆನೆ ಹಾವಳಿ: ಯುವ ಸಂಸತ್ನಲ್ಲೂ ಪ್ರಸ್ತಾಪ.<p>ಮಂಡ್ಯ ಡಿಸಿಎಫ್ ಡಿ.ರಘು ಮತ್ತು ಮೈಸೂರು ವಿಭಾಗದ ವನ್ಯಜೀವಿ ವಲಯದ ಡಿಸಿಎಫ್ ಪ್ರಭುಗೌಡ ಬಿರಾದಾರ್ ಅವರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ನಾಗರಹೊಳೆ ವನ್ಯಜೀವಿ ವಿಭಾಗದ ಡಾ.ರಮೇಶ್, ಡಾ.ಆದರ್ಶ, ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದ ನಿರ್ದೇಶಕಿ ಅನುಷಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ತಹಶೀಲ್ದಾರ್ ಎಸ್.ವಿ.ಲೋಕೇಶ್, ಹಲಗೂರು ಸಿಪಿಐ ಬಿ.ಎಸ್. ಶ್ರೀಧರ್, ವಲಯ ಅರಣ್ಯ ಅಧಿಕಾರಿ ಗವಿಯಪ್ಪ ಹಾಗೂ ಅರಿವಳಿಕೆ ತಜ್ಞರಾದ ರಂಜನ್, ಅಕ್ರಂ, ಚಿರತೆ ಕಾರ್ಯಪಡೆ ಸೇರಿದಂತೆ 100ಕ್ಕೂ ಅಧಿಕ ಮಂದಿ ಕಾರ್ಯಾಚರಣೆ ನಡೆಸಿದರು.</p><p>ಉಪ ಸಂರಕ್ಷಣಾಧಿಕಾರಿ ಡಿ.ರಘು ಮಾತನಾಡಿ, ‘ಹಿರಿಯ ಅಧಿಕಾರಿಗಳ ಸಲಹೆ ಹಾಗೂ ತಜ್ಞ ವೈದ್ಯರ ನೆರವಿನಿಂದ ಅತ್ಯಂತ ಸವಾಲಿನ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಅರಣ್ಯ ಸಚಿವರು ಆನೆಯ ಸುಕ್ಷರತೆಗೆ ಸೂಚನೆ ನೀಡಿದ್ದರು. ಆನೆಯು ಆಹಾರ ಅರಸಿ ಬಂದಿರುವ ಸಾಧ್ಯತೆ ಇದೆ. ಸುತ್ತಮುತ್ತಲಿನ ಜನರು ಜಾಗೃತಿ ವಹಿಸಬೇಕು’ ಎಂದು ಹೇಳಿದರು.</p> .ವಿದ್ಯುತ್ ಸ್ಪರ್ಶದಿಂದ ಎರಡು ಆನೆ ಸಾವು:ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ‘ಪಯನಿಯರ್ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರ’ದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಮೇಲೆ ತರಲಾಯಿತು. </p>.ರಾಮನಗರ| ಕಾಡಾನೆಗಳ ಸಾವಿನ ಸುತ್ತ: ‘ಆನೆ ಕಾರ್ಯಪಡೆ’ಗೆ ಬೇಕಿದೆ ಸೌಕರ್ಯದ ಚಿಕಿತ್ಸೆ.<p>ಶನಿವಾರ ರಾತ್ರಿ ವಿದ್ಯುತ್ ಘಟಕದ ಬಳಿ ಸುತ್ತಾಡುತ್ತಿದ್ದ 12 ವರ್ಷದ ಗಂಡು ಕಾಡಾನೆಯು ನೀರು ಕುಡಿಯಲು ಗೇಟ್ ಮೂಲಕ ನಾಲೆಗೆ ಇಳಿದಿತ್ತು. ಆದರೆ, ನೀರಿನ ಹರಿವಿನ ರಭಸಕ್ಕೆ ವಾಪಸ್ ಕಾಲುವೆಯಿಂದ ಮೇಲೆ ಬಾರದ ಆನೆಯು ಕಳೆದ ಮೂರು ದಿನಗಳಿಂದ ಕಾಲುವೆಯಲ್ಲಿಯೇ ಓಡಾಡಿ ನಿತ್ರಾಣಗೊಂಡಿತ್ತು. </p><p>ಸೋಮವಾರ ದಿನವಿಡೀ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿರಲಿಲ್ಲ. ಮಂಗಳವಾರ ಕ್ರೇನ್ ಮತ್ತು ಡ್ರೋಣ್ ಸಹಾಯದಿಂದ ಕಾರ್ಯಾಚರಣೆ ಆರಂಭಗೊಂಡಿತು. ಬೆಂಗಳೂರಿನ ಬಂದಿದ್ದ ಬೃಹತ್ ಕ್ರೇನ್ ಹಾಗೂ ಸ್ಥಳೀಯವಾಗಿ 2 ಕ್ರೇನ್ಗಳ ಮೂಲಕ ಮೊದಲಿಗೆ ಒಂದು ಕಂಟೇನರ್ ಅನ್ನು ಕಾಲುವೆಗೆ ಇಳಿಸಿ ಆನೆಯನ್ನು ಮೇಲೆತ್ತುವ ಪ್ರಯತ್ನ ನಡೆಸಲಾಯಿತು. </p>.ಹಾರೋಬೆಲೆ ಜಲಾಶಯದ ಹಿನ್ನೀರು ದಾಟುವಾಗ ಅವಘಡ: ಕಳೆಯಲ್ಲಿ ಸಿಲುಕಿ ಎರಡು ಆನೆ ಸಾವು.<p>ಅದು ಫಲ ನೀಡದ ಹಿನ್ನೆಲೆಯಲ್ಲಿ, ಮಧ್ಯಾಹ್ನ ಪಟಾಕಿ ಸಿಡಿಸಿ ಕಾಲುವೆ ಮಧ್ಯಭಾಗಕ್ಕೆ ಆನೆ ಬಂದ ನಂತರ, ತಜ್ಞರ ತಂಡ ಕಾಡಾನೆಗೆ ಅರಿವಳಿಕೆ ಮದ್ದು ನೀಡಿದರು. ಸುಮಾರು 30 ನಿಮಿಷ ಆನೆಯು ಅಲ್ಲಿಯೇ ಓಡಾಟ ನಡೆಸಿ ಪ್ರಜ್ಞೆ ಕಳೆದುಕೊಂಡ ಬಳಿಕ, ಆನೆಗೆ ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿದರು.</p><p>ರಕ್ಷಣಾ ಸಿಬ್ಬಂದಿ ಹೈಡ್ರಾಲಿಕ್ ಕ್ರೇನ್ ಮತ್ತು ಹಗ್ಗಗಳನ್ನು ಬಳಸಿ, ಕಂಟೇನರ್ ಹಾಗೂ ಸ್ಟ್ರೆಚರ್ ಮೇಲೆ ಆನೆಯನ್ನು ಮಲಗಿಸಿ, ಅತ್ಯಂತ ಎಚ್ಚರಿಕೆಯಿಂದ 60 ಅಡಿ ಆಳದ ಕಾಲುವೆಯಿಂದ ಮೇಲೆ ತಂದರು. ಪ್ರಥಮ ಚಿಕಿತ್ಸೆ ನೀಡಿದ ನಂತರ, ಆರೋಗ್ಯ ಸ್ಥಿತಿಯನ್ನು ಖಾತ್ರಿಪಡಿಸಿಕೊಂಡು ಪಕ್ಕದಲ್ಲೇ ಇದ್ದ ಕಾವೇರಿ ವನ್ಯಜೀವಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. </p>.ಚಿಕ್ಕಮಗಳೂರು | ಆನೆ ಹಾವಳಿ: ಯುವ ಸಂಸತ್ನಲ್ಲೂ ಪ್ರಸ್ತಾಪ.<p>ಮಂಡ್ಯ ಡಿಸಿಎಫ್ ಡಿ.ರಘು ಮತ್ತು ಮೈಸೂರು ವಿಭಾಗದ ವನ್ಯಜೀವಿ ವಲಯದ ಡಿಸಿಎಫ್ ಪ್ರಭುಗೌಡ ಬಿರಾದಾರ್ ಅವರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ನಾಗರಹೊಳೆ ವನ್ಯಜೀವಿ ವಿಭಾಗದ ಡಾ.ರಮೇಶ್, ಡಾ.ಆದರ್ಶ, ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದ ನಿರ್ದೇಶಕಿ ಅನುಷಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ತಹಶೀಲ್ದಾರ್ ಎಸ್.ವಿ.ಲೋಕೇಶ್, ಹಲಗೂರು ಸಿಪಿಐ ಬಿ.ಎಸ್. ಶ್ರೀಧರ್, ವಲಯ ಅರಣ್ಯ ಅಧಿಕಾರಿ ಗವಿಯಪ್ಪ ಹಾಗೂ ಅರಿವಳಿಕೆ ತಜ್ಞರಾದ ರಂಜನ್, ಅಕ್ರಂ, ಚಿರತೆ ಕಾರ್ಯಪಡೆ ಸೇರಿದಂತೆ 100ಕ್ಕೂ ಅಧಿಕ ಮಂದಿ ಕಾರ್ಯಾಚರಣೆ ನಡೆಸಿದರು.</p><p>ಉಪ ಸಂರಕ್ಷಣಾಧಿಕಾರಿ ಡಿ.ರಘು ಮಾತನಾಡಿ, ‘ಹಿರಿಯ ಅಧಿಕಾರಿಗಳ ಸಲಹೆ ಹಾಗೂ ತಜ್ಞ ವೈದ್ಯರ ನೆರವಿನಿಂದ ಅತ್ಯಂತ ಸವಾಲಿನ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಅರಣ್ಯ ಸಚಿವರು ಆನೆಯ ಸುಕ್ಷರತೆಗೆ ಸೂಚನೆ ನೀಡಿದ್ದರು. ಆನೆಯು ಆಹಾರ ಅರಸಿ ಬಂದಿರುವ ಸಾಧ್ಯತೆ ಇದೆ. ಸುತ್ತಮುತ್ತಲಿನ ಜನರು ಜಾಗೃತಿ ವಹಿಸಬೇಕು’ ಎಂದು ಹೇಳಿದರು.</p> .ವಿದ್ಯುತ್ ಸ್ಪರ್ಶದಿಂದ ಎರಡು ಆನೆ ಸಾವು:ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ