ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

CT Ravi Arrest | ಮಾನಹಾನಿ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ

Published : 19 ಡಿಸೆಂಬರ್ 2024, 13:22 IST
Last Updated : 19 ಡಿಸೆಂಬರ್ 2024, 13:22 IST
ಫಾಲೋ ಮಾಡಿ
Comments
ವಿಧಾನಸಭೆಯಲ್ಲಿ ಹಕ್ಕುಬಾಧ್ಯತಾ ಸಮಿತಿಗೆ
ಲಕ್ಷ್ಮಿ ಹೆಬ್ಬಾಳಕರ ಅವರನ್ನು ಸಿ.ಟಿ.ರವಿ ನಿಂದಿಸಿದ ಪ್ರಕರಣವನ್ನು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಶರತ್ ಬಚ್ಚೇಗೌಡ ಪ್ರಸ್ತಾಪಿಸಿದರು. ಇದು ಬಿಜೆಪಿ–ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ಕಾರಣವಾಯಿತು. ಆಗ ಮಧ್ಯ ಪ್ರವೇಶಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು, ‘ಲಕ್ಷ್ಮೀ ಹೆಬ್ಬಾಳಕರ ಅವರು ಈ ಮನೆಯ ಸದಸ್ಯರಾಗಿದ್ದು, ಅವರಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ. ಆದ್ದರಿಂದ ಈ ವಿಷಯವನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಬೇಕು’ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ವಿಷಯವನ್ನು ಹಕ್ಕು ಬಾಧ್ಯತಾ ಸಮಿತಿಗೆ ಒಪ್ಪಿಸಿದರು.
ಕ್ರಿಮಿನಲ್ ಅಪರಾಧ: ಸಿದ್ದರಾಮಯ್ಯ
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಲಕ್ಷ್ಮೀ ಹೆಬ್ಬಾಳಕರ ಅವರು ವಿಧಾನಪರಿಷತ್ ಸಭಾಪತಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ’ ಎಂದರು. ಸಿ. ಟಿ. ರವಿ ಅವರು ಆರೋಪವನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಈ ವಿಚಾರದಲ್ಲಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಭಾರತ ಮಾತೆಗೆ ಅವಮಾನ’
‘ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲೂ ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಏನು ಪ್ರಕರಣ?
ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್‌) ಕಲಂ 75ರಡಿ (ಲೈಂಗಿಕ ಕಿರುಕುಳ) ಹಾಗೂ ಬಿಎನ್‌ಎಸ್‌ ಕಲಂ 79ರಡಿ (ಮಹಿಳೆಯ ಮಾನಕ್ಕೆ ಕುಂದು ಉಂಟು ಮಾಡುವ ಉದ್ಧೇಶವಿರುವ ಪದ ಬಳಕೆ ಸನ್ನೆ ಅಥವಾ ಕೃತ್ಯ) ಪ್ರಕರಣ ದಾಖಲಾಗಿದೆ. ಈ ಕಲಂಗಳಡಿ ದಾಖಲಾಗುವ ಪ್ರಕರಣಗಳು ಸಾಬೀತಾದರೆ ಮೂರು ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.
ಯಾರು ಏನಂದರು?
ರವಿ ಅವರು ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ‘ಪ್ರಾಸ್ಟಿಟ್ಯೂಟ್‌ ಪದ ಬಳಸಿದರು. ಇದು ದೇಶದ ಮಹಿಳೆಯರಿಗೆ ಮಾಡಿದ ಅಪಮಾನ. ಅಂಥವರನ್ನು ಸದನದಿಂದ ಹೊರಹಾಕಬೇಕು.
–ಉಮಾಶ್ರೀ, ಕಾಂಗ್ರೆಸ್‌ ಸದಸ್ಯೆ
ಇಂತಹ ಮಾತುಗಳನ್ನು ಸದನದಲ್ಲಿ ಕೇಳಿಸಿಕೊಳ್ಳಲೂ ಅಸಹ್ಯವಾಗುತ್ತದೆ. ರಾಹುಲ್‌ ಗಾಂಧಿ ಅವರನ್ನು ಸಿ.ಟಿ. ರವಿ ಡ್ರಗ್ಗಿಸ್ಟ್ ಅಂತಿದ್ದರಿಂದ ಲಕ್ಷ್ಮೀ ಅವರು, ರವಿ ಅವರನ್ನು ಕೊಲೆಗಡುಕ ಎಂದರು. ಅದಕ್ಕೆ ಅಂತಹ ಕೀಳು ಪದ ಬಳಕೆ ಮಾಡಿದರು..
–ಬಲ್ಕೀಸ್‌ ಬಾನು, ಕಾಂಗ್ರೆಸ್‌ ಸದಸ್ಯೆ
ಲಕ್ಷ್ಮೀ ಹೆಬ್ಬಾಳಕರ ಅವರು ಸಿ.ಟಿ. ರವಿಗೆ ಕೊಲೆಗಾರ ಎನ್ನುವ ಪದ ಬಳಕೆ ಮಾಡಿದ್ದಾರೆ. ಆಗ ರವಿ ಕೂಡಾ ಲಕ್ಷ್ಮೀ ಹೆಬ್ಬಾಳಕರಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ..
–ನಾಗರಾಜ್ ಯಾದವ್, ಕಾಂಗ್ರೆಸ್‌ ಸದಸ್ಯ
ಸಭಾಪತಿ ಕಲಾಪವನ್ನು 10 ನಿಮಿಷ ಮುಂದೂಡಿದರು. ಆಗ ಕೊಲೆಗಡುಕ, ಡ್ರಗ್ಗಿಸ್ಟ್ ಪದ ಬಂತು. ಯಾವುದೇ ಅಶ್ಲೀಲ ಪದ ಬಳಕೆ ನನ್ನ ಗಮನಕ್ಕೆ ಬಂದಿಲ್ಲ.
–ಟಿ.ಎ. ಶರವಣ, ಜೆಡಿಎಸ್‌ ಸದಸ್ಯ
ಸುವರ್ಣಸೌಧದ ಒಳಗೇ ಹಲ್ಲೆ ನಡೆಸಲು ಯತ್ನಿಸಿರುವುದು ಗಂಬೀರ ಲೋಪ. ಆವರಣದಲ್ಲೇ ಭದ್ರತೆ ಇಲ್ಲ ಎಂದಾದರೆ, ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎನ್ನುವುದನ್ನು ಗ್ರಹಿಸಬಹುದು.
–ಡಿ.ಎಸ್‌. ಅರುಣ್‌, ಬಿಜೆಪಿ ಸದಸ್ಯ
ಸಿ.ಟಿ. ರವಿ ಕೀಳು ಅಭಿರುಚಿಯ ಪದ ಬಳಸಿಲ್ಲ, ಕಾಂಗ್ರೆಸ್‌ ವಿಷಯಾಂತರ ಮಾಡಲು ಯಾವಾಗಲೂ ಇಂತಹ ತಂತ್ರ ಅನುಸರಿಸುತ್ತದೆ.
–ಎನ್‌. ರವಿಕುಮಾರ್, ಬಿಜೆಪಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT