ಅಕ್ಕಿಆಲೂರಿನ ಸಂತೆ ವ್ಯಾಪಾರಿ ಸಾದಿಕ್ ಬಾಬುಸಾಬ್ ಅಗಸಿಮನಿ (29) ಮತ್ತು ನಿಯಾಜ್ ಅಹ್ಮದ್ ಮುಲ್ಲಾ (19) ಬಂಧಿತ ಆರೋಪಿಗಳು.
ಅಕ್ಕಿಆಲೂರಿನ ಇಮ್ರಾನ್ ಬಶೀರ ಅಹಮದ್ ಜೇಕಿನಕಟ್ಟಿ (23) ಹಾಗೂ ರೇಹಾನ್ ಮಹಮ್ಮದ್ ಹುಸೇನ್ ವಾಲೀಕಾರ (19) ಎಂಬುವರನ್ನು ಭಾನುವಾರ ಬಂಕಾಪುರ ಮತ್ತು ದಾವಣಗೆರೆಯಲ್ಲಿ ಬಂಧಿಸಲಾಗಿತ್ತು.
ಇದಕ್ಕೂ ಮುನ್ನ, ಪ್ರಕರಣ ದಾಖಲಾದ ಬೆನ್ನಲ್ಲೇ ಅಕ್ಕಿಆಲೂರಿನ ಅಫ್ತಾಬ್ ಚಂದನಕಟ್ಟಿ, ಮದರಸಾಬ್ ಮಂಡಕ್ಕಿ ಹಾಗೂ ಅಬ್ದುಲ್ಲಾಖಾದರ್ ಜಾಫರಸಾಬ್ ಹಂಚಿನಮನಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಇನ್ನೊಬ್ಬ ಆರೋಪಿ ಮಹಮದ್ ಸೈಫ್ ಸಾವಿಕೇರಿ ಎಂಬಾತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಾಗಿದ್ದು, ಚಿಕಿತ್ಸೆ ಪೂರ್ಣಗೊಂಡ ಬಳಿಕ ಬಂಧಿಸಲಾಗುವುದು ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸೋಮವಾರ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ಆರೋಪಿಗಳನ್ನು ಎಡೆಮುರಿ ಕಟ್ಟಿದ್ದಾರೆ ಎನ್ನಲಾಗಿದೆ.