'ನನ್ನ ಪುತ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ ಸುದೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸುತ್ತೇನೆ. ಶುಭವಾಗಲಿ' ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜಕೀಯ ವಲಯದ ಗಣ್ಯರು ಹಾಗೂ ಅಭಿಮಾನಿಗಳು ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.